AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ಗೆ ಹೆದರಿದ ಶಾರುಖ್? ಮುಂದಕ್ಕೆ ಹೋಗಲಿದೆ ‘ಡಂಕಿ’ ರಿಲೀಸ್

ಈ ಬಗ್ಗೆ ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ. ‘ಸಲಾರ್ vs ಡಂಕಿ ಸ್ಪರ್ಧೆ ಇಲ್ಲ. ಶಾರುಖ್ ಖಾನ್ ನಟನೆಯ ಡಂಕಿ ಸಿನಿಮಾ ಪೋಸ್ಟ್​ಪೋನ್ ಆಗೋ ಸಾಧ್ಯತೆ ಇದೆ’ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಕುತೂಹಲ ಹೆಚ್ಚಿದೆ.

ಪ್ರಶಾಂತ್​ ನೀಲ್​ಗೆ ಹೆದರಿದ ಶಾರುಖ್? ಮುಂದಕ್ಕೆ ಹೋಗಲಿದೆ ‘ಡಂಕಿ’ ರಿಲೀಸ್
ಶಾರುಖ್​-ಪ್ರಭಾಸ್
TV9 Web
| Edited By: |

Updated on:Oct 13, 2023 | 10:57 AM

Share

‘ಡಂಕಿ’ Vs ‘ಸಲಾರ್’ ಬಗ್ಗೆ ಜೋರಾಗಿ ಚರ್ಚೆ ಆಗುತ್ತಿದೆ. ಡಿಸೆಂಬರ್ 22ರಂದು ಈ ಎರಡೂ ಸಿನಿಮಾಗಳು ರಿಲೀಸ್ ಆಗಲಿವೆ. ಈ ಎರಡೂ ಚಿತ್ರಗಳ ಪೈಕಿ ಗೆಲ್ಲೋದು ಯಾರು ಎನ್ನುವ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಮಧ್ಯೆ ‘ಡಂಕಿ’ ಸಿನಿಮಾದ (Dunki Movie) ರಿಲೀಸ್ ದಿನಾಂಕ 2024ಕ್ಕೆ ಪೋಸ್ಟ್​ಪೋನ್​ ಆಗಲಿದೆ ಎಂದು ವರದಿ ಆಗಿದೆ. ಈ ಮಾತು ಕೇಳಿ ಪ್ರಭಾಸ್ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ‘ಸಲಾರ್’ ಸಿನಿಮಾ ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ.

2018ರಲ್ಲಿ ಶಾರುಖ್ ಖಾನ್ ನಟನೆಯ ‘ಜೀರೋ’ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಒಟ್ಟಿಗೆ ರಿಲೀಸ್ ಆಯಿತು. ‘ಕೆಜಿಎಫ್’ ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಬಿಡುಗಡೆ ಆಗಿ ಮೆಚ್ಚುಗೆ ಪಡೆಯಿತು. 40+ ಕೋಟಿ ರೂಪಾಯಿ ಗಳಿಕೆ ಮಾಡಿ ಈ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ‘ಕೆಜಿಎಫ್’ ಎದುರು ‘ಜೀರೋ’ ಚಿತ್ರಕ್ಕೆ ಸೋಲಾಯಿತು. ಈಗ ಮತ್ತೊಮ್ಮೆ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಹಾಗೂ ಶಾರುಖ್ ಖಾನ್ ಮತ್ತೊಮ್ಮೆ ಮುಖಾಮುಖಿ ಆಗುತ್ತಿದ್ದಾರೆ.

ಈ ಬಗ್ಗೆ ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ. ‘ಸಲಾರ್ vs ಡಂಕಿ ಸ್ಪರ್ಧೆ ಇಲ್ಲ. ಶಾರುಖ್ ಖಾನ್ ನಟನೆಯ ಡಂಕಿ ಸಿನಿಮಾ ಪೋಸ್ಟ್​ಪೋನ್ ಆಗೋ ಸಾಧ್ಯತೆ ಇದೆ’ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಕುತೂಹಲ ಹೆಚ್ಚಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈ ಎರಡೂ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿವೆ. ಇದರಿಂದ ಶಾರುಖ್ ಖಾನ್ ಅವರು ಫಾರ್ಮ್​​ಗೆ ಮರಳಿದ್ದಾರೆ. ಈಗ ‘ಡಂಕಿ’ ಸಿನಿಮಾ ಮೂಲಕ ಈ ವರ್ಷ ಹ್ಯಾಟ್ರಿಕ್ ಗೆಲುವು ಕಾಣುವ ಭರವಸೆಯಲ್ಲಿ ಅವರಿದ್ದಾರೆ. ಆದರೆ, ಇದು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:  ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಇದೆ. ತಾಪ್ಸಿ ಪನ್ನು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು, ‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Fri, 13 October 23

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​