AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್

ಸಲ್ಮಾನ್ ಖಾನ್ ತಂದೆ, ಹಿರಿಯ ಕಥೆಗಾರ ಸಲೀಮ್ ಖಾನ್ ಅವರು ಮಿದುಳಿನಲ್ಲಿ ಆದ ರಕ್ತಸ್ರಾವದಿಂದ ಆಸ್ಪತ್ರೆ ಸೇರಿದ್ದರು. ಈಗ ಒಂದು ತಿಂಗಳ ಬಳಿಕ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. 90ರ ವಯಸ್ಸಿನಲ್ಲಿ ಅವರ ಆರೋಗ್ಯ ಸುಧಾರಿಸಿದ್ದು, ಅಭಿಮಾನಿಗಳು ಹಾಗೂ ಕುಟುಂಬ ನಿಟ್ಟುಸಿರು ಬಿಟ್ಟಿದೆ. ಶೋಲೆ, ದೀವಾರ್ ಚಿತ್ರಗಳಿಗೆ ಕಥೆ ಬರೆದಿದ್ದ ಸಲೀಮ್ ಖಾನ್, ಎರಡು ಕನ್ನಡ ಸಿನಿಮಾಗಳಿಗೂ ಸಹ ಕಥೆ ನೀಡಿದ್ದರು.

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್
ಸಲೀಂ-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Mar 17, 2026 | 3:18 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಹಾಗೂ ಹಿರಿಯ ಕಥೆ ಬರಹಗಾರ ಸಲೀಮ್ ಖಾನ್ (Salim Khan) ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಮಿದುಳಿನಲ್ಲಿ ಉಂಟಾದ ರಕ್ತಸ್ರಾವದಿಂದ ಅವರು ಆಸ್ಪತ್ರೆ ಸೇರಿದ್ದರು. ಇಂದು ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದ ಅವರ ಅಭಿಮಾನಿಗಳು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ.

ಸಲೀಮ್ ಖಾನ್ ಅವರಿಗೆ 90 ವರ್ಷ. ಚಿತ್ರರಂಗದಲ್ಲಿ ಸಲೀಮ್-ಜಾವೇದ್ ಜೋಡಿ ಎಂದೇ ಇದು ಫೇಮ್ ಆಗಿತ್ತು. ಶೋಲೆ, ದೀವಾರ್, ‘ಡಾನ್’ ಮೊದಲಾದ ಹಿಂದಿ ಚಿತ್ರಗಳಿಗೆ ಹಾಗೂ ಕನ್ನಡದ ಎರಡು ಸಿನಿಮಾಗಳಿಗೆ ಇವರು ಕಥೆ ಬರೆದಿದ್ದರು. ಫೆಬ್ರವರಿ 17ರಂದು ಲೀಲಾವತಿ ಆಸ್ಪತ್ರೆಗೆ ಇವರು ದಾಖಲಾಗಿದ್ದರು. ಈಗ ಮಾರ್ಚ್ 17ರಂದು ಅವರು ಬಿಡುಗಡೆ ಹೊಂದಿದ್ದಾರೆ ಎಂದು ಹೇಳಲಾಗುತ್ತಾ ಇದೆ.

ಮಿದಿಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವ ಆತಂಕ ಮೂಡಿಸಿತ್ತು.ಈ ವಯಸ್ಸಿನಲ್ಲಿ ಅವರಿಗೆ ಈ ರೀತಿ ಆಗಿದೆ ಎಂದಾಗ ಸಹಜವಾಗಿಯೇ ಆತಂಕ ಹೆಚ್ಚಿತ್ತು. ಅವರನ್ನು ವೆಂಟಿಲೇಟರ್ ಸಪೋರ್ಟ್​​ನೊಂದಿಗೆ ನೋಡಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ. ಇಂದೇ ಅವರನ್ನು ಮನೆಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ಸಲೀಂ ಖಾನ್ ಆಸ್ಪತ್ರೆಯಲ್ಲಿ ಇರುವಾಗ ಸಲ್ಮಾನ್ ಖಾನ್, ಅರ್ಬಾಜ್ ಖಾನ್, ಮಲ್ವಿರಾ, ಅರ್ಪಿತಾ, ಅಳಿಯ ಅತುಲ್ ಅಗ್ನಿಹೋತ್ರಿ, ಆಯುಷ್ ಶರ್ಮಾ ಸೇರಿದಂತೆ ಅನೇಕರು ನಿತ್ಯವೂ ಬಂದು ಹೋಗುತ್ತಿದ್ದರು. ವೃತ್ತಿ ಜೀವನದಲ್ಲಿ ಬೆಂಬಲವಾಗಿ ನಿಂತ ಜಾವೇದ್ ಅಖ್ತರ್ ಕೂಡ ಆಗಾಗ ಬಂದು ಹೋಗುತ್ತಿದ್ದರು.

ಇದನ್ನೂ ಓದಿ: ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್ ಸಲೀಮ್ ಖಾನ್ ಅವರು ಜಾವೇದ್ ಜೊತೆ ಸೇರಿ ಅದ್ಭುತ ಕಥೆಗಳನ್ನು ಬರೆಯುತ್ತಿದ್ದರು.70ರ ದಶಕದಲ್ಲಿ ಈ ಜೋಡಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿದೆ ಎಂಬುದು ವಿಶೇಷ.ಸಲೀಮ್ ಖಾನ್ ಅವರಿಗೆ ಕನ್ನಡದ ನಂಟೂ ಇದೆ. 1976ರಲ್ಲಿ ಬಂದ ‘ಪ್ರೇಮದ ಕಾಣಿಕೆ’ ಹಾಗೂ ‘ರಾಜ ನನ್ನ ರಾಜ’ ಸಿನಿಮಾಗಳಿಗೆ ಸಲೀಮ್ ಹಾಗೂ ಜಾವೇದ್ ಅವರೇ ಕಥೆ ನೀಡಿದರು. ಈ ಎರಡೂ ಸಿನಿಮಾಗಳು ಹಿಟ್ ಆದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ