AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾನುಷ ‘ಗಲ್ವಾನ್ ಸಂಘರ್ಷ’ ಬಗ್ಗೆ ಸಿನಿಮಾ, ಸಲ್ಮಾನ್ ಖಾನ್ ನಾಯಕ

Salman Khan: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದ ಬಗ್ಗೆ ಬಾಲಿವುಡ್​ನಲ್ಲಿ ಹಲವು ಸಿನಿಮಾಗಳು ಬಂದಿವೆ. ಆದರೆ ಭಾರತ ಮತ್ತು ಚೀನಾ ಸಂಘರ್ಷದ ಬಗ್ಗೆ ಬಂದಿಲ್ಲ. ಆದರೆ ಇದೀಗ ಬಾಲಿವುಡ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದಿದ್ದ ಗಾಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಸಿನಿಮಾ ಮಾಡಲಾಗುತ್ತಿದೆ. ಸಿನಿಮಾಕ್ಕೆ ಸಲ್ಮಾನ್ ಖಾನ್ ನಾಯಕ.

ಅಮಾನುಷ ‘ಗಲ್ವಾನ್ ಸಂಘರ್ಷ’ ಬಗ್ಗೆ ಸಿನಿಮಾ, ಸಲ್ಮಾನ್ ಖಾನ್ ನಾಯಕ
Salman Khan
ಮಂಜುನಾಥ ಸಿ.
|

Updated on:May 18, 2025 | 8:11 PM

Share

ಭಾರತೀಯ ಸೇನೆಯ ಬಗ್ಗೆ ಭಾರತೀಯ ಸೇನೆಯ (Indian Army) ಆಪರೇಷನ್​ಗಳ ಬಗ್ಗೆ ಕಾಲ ಕಾಲಕ್ಕೆ ಸಿನಿಮಾಗಳು ಆಗುತ್ತಲೇ ಇವೆ. ಇತ್ತೀಚೆಗೆ ಭಾರತೀಯ ಸೇನೆ ಯಶಸ್ವಿಯಾಗಿ ಪೂರೈಸಿದ ಆಪರೇಷನ್ ಸಿಂಧೂರ್ ಬಗ್ಗೆಯೂ ಸಿನಿಮಾ ಮಾಡಲು ಈಗಾಗಲೇ ಹೆಸರುಗಳನ್ನು ನೊಂದಾಯಿಸಲಾಗಿದೆ. ಈ ಹಿಂದೆ ಆಗಿದ್ದ ‘ಉರಿ’ ದಾಳಿಗೆ ಪ್ರತಿಕಾರವಾಗಿ ಮಾಡಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಈಗಾಗಲೇ ಸಿನಿಮಾ ಮಾಡಲಾಗಿದೆ. ಭಾರತೀಯ ಸೇನೆಯ ಬಗ್ಗೆ ಮಾಡಲಾಗಿರುವ ಬಹುತೇಕ ಸಿನಿಮಾಗಳು ಭಾರತ-ಪಾಕಿಸ್ತಾನದ ಬಗ್ಗೆಯೇ ಆಗಿವೆ. ಇದೀಗ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಅಮಾನುಷ ಗಲಾಟೆಯೊಂದರ ಬಗ್ಗೆ ಸಿನಿಮಾ ಆಗುತ್ತಿದೆ. ಸಿನಿಮಾಕ್ಕೆ ನಾಯಕ ಸಲ್ಮಾನ್ ಖಾನ್.

ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷದ ಬಗ್ಗೆ ಈಗಾಗಲೇ ಹಲವು ಸಿನಿಮಾಗಳಾಗಿವೆ. ಆದರೆ ಭಾರತ ಮತ್ತು ಚೀನಾದ ನಡುವಿನ ಸಂಘರ್ಷದ ಬಗ್ಗೆ ಸಿನಿಮಾಗಳಾಗಿಲ್ಲ. ಬಹುಷಃ ಮೊದಲ ಬಾರಿಗೆ ಇಂಥಹಾ ಪ್ರಯತ್ನಕ್ಕೆ ಕೈ ಹಾಕಿದೆ ಬಾಲಿವುಡ್. 2020 ರಲ್ಲಿ ಭಾರತದ ಗಡಿ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರು ಮುಖಾಮುಖಿ ಆದಾಗ ನಡೆದ ರಕ್ತಪಾತದ ಬಗ್ಗೆ ಸಿನಿಮಾ ಮಾಡಲಾಗುತ್ತಿದೆ. ಸಿನಿಮಾವನ್ನು ಅಪೂರ್ವ ಲಾಖಿಯಾ ನಿರ್ದೇಶನ ಮಾಡಲಿದ್ದಾರೆ.

‘ಇಂಡಿಯಾ ಫಿಯರ್ಲೆಸ್ 3’ ಪುಸ್ತಕದಿಂದ ಸ್ಪೂರ್ತಿ ಪಡೆದು ಈ ಸಿನಿಮಾ ಮಾಡಲಾಗುತ್ತಿದೆ. ಸಿನಿಮಾವು ಗಲ್ವಾನ್ ಗಲಭೆಯ ಘಟನೆ ಕುರಿತಾದ ಕತೆ ಹೊಂದಿರಲಿದೆ. ಸಲ್ಮಾನ್ ಖಾನ್, ಮಿಲಿಟರಿ ಅಧಿಕಾರಿಯ ಪಾತ್ರದಲ್ಲಿ ನಟಿಸಲಿದ್ದಾರೆ. 2025ರಲ್ಲಿಯೇ ಸಿನಿಮಾದ ಚಿತ್ರೀಕರಣ ಪ್ರಾರಂಭ ಆಗಲಿದ್ದು, 70 ದಿನಗಳ ಕಾಲ ಒಂದೇ ಶೆಡ್ಯೂಲ್​ನಲ್ಲಿ ಲಡಾಕ್ ಮತ್ತು ಮುಂಬೈಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಇದನ್ನೂ ಓದಿ:ವಯಸ್ಸಾಯ್ತು ಎಂದು ಟೀಕಿಸಿದವರಿಗೆ ಖಡಕ್ ಉತ್ತರ ಕೊಟ್ಟ ಸಲ್ಮಾನ್ ಖಾನ್

2020ರ ಮೇ ತಿಂಗಳಲ್ಲಿ ಭಾರತ-ಚೀನಾ ಗಡಿಯ ಗಲ್ವಾನ್ ಎಂಬಲ್ಲಿ ಭಾರತ ಮತ್ತು ಚೀನಾದ ಸೈನಿಕರು ಮುಖಾ-ಮುಖಿ ಆಗಿದ್ದರು. ಎರಡೂ ದೇಶದ ಸೈನಿಕರು ಪರಸ್ಪರ ಕೈ ಕೈ ಮಿಲಾಯಿಸಿದ್ದು ಈ ಗಲಾಟೆಯಲ್ಲಿ ಸುಮಾರು 20 ಮಂದಿ ಭಾರತೀಯ ಸೈನಿಕರು ನಿಧನ ಹೊಂದಿದ್ದರು. ಚೀನಾದ ಸೈನಿಕರೂ ಸಹ ನಿಧನ ಹೊಂದಿದ್ದರು. ಹಲವಾರು ಮಂದಿ ಗಾಯಾಳುಗಳಾಗಿದ್ದರು. ಪಿಸ್ತೂಲಿನಲ್ಲಿ ಅಲ್ಲದೆ ಬಡಿಗೆಗಳು, ಚಾಕುಗಳಿಂದ ಭಾರತೀಯ ಸೈನಿಕರ ಮೇಲೆ ಚೀನಾದ ಸೈನಿಕರು ದಾಳಿ ಮಾಡಿದ್ದರು. ಭಾರಿ ರಕ್ತಪಾತ ಈ ಗಲಾಟೆಯಲ್ಲಿ ಆಗಿತ್ತು. ಇದೇ ಘಟನೆ ಆಧರಿಸಿ ಈಗ ಸಿನಿಮಾ ಮಾಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Sun, 18 May 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ