AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಖ್ಯಾತ ಸೆಲೆಬ್ರಿಟಿಗಳಿಗೆ ಇದೆ ಕೆಟ್ಟ ಸ್ವಭಾವ; ಇದನ್ನು ಅಭಿಮಾನಿಗಳು ಎಂದಿಗೂ ಸಹಿಸಲ್ಲ

ಕರೀನಾ ಕಪೂರ್, ಐಶ್ವರ್ಯಾ ರೈ ಬಚ್ಚನ್​, ಸಲ್ಮಾನ್ ಖಾನ್, ಕಂಗನಾ ರಣಾವತ್ ಮೊದಲಾದವರ ಬಳಿ ಕೆಟ್ಟ ಸ್ವಭಾವ ಇದೆ. ಅಭಿಮಾನಿಗಳಿಗೆ ಇದು ಇಷ್ಟ ಆಗುವುದಿಲ್ಲ.

ಈ ಖ್ಯಾತ ಸೆಲೆಬ್ರಿಟಿಗಳಿಗೆ ಇದೆ ಕೆಟ್ಟ ಸ್ವಭಾವ; ಇದನ್ನು ಅಭಿಮಾನಿಗಳು ಎಂದಿಗೂ ಸಹಿಸಲ್ಲ
ಕರೀನಾ, ರಣಬೀರ್, ಐಶ್ವರ್ಯಾ ರೈ, ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Apr 27, 2023 | 8:02 AM

Share

ಮುಖ್ಯಾಂಶಗಳು

  • ಕೆಲವೊಮ್ಮೆ ಸೆಲೆಬ್ರಿಟಿಗಳು ನಡೆದುಕೊಳ್ಳುವುದು ಅಭಿಮಾನಿಗಳೇ ಇಷ್ಟ ಆಗುವುದಿಲ್ಲ
  • ಬಾಲಿವುಡ್ ಸೆಲೆಬ್ರಿಟಿಗಳಲ್ಲಿದೆ ಕೆಟ್ಟ ಸ್ವಭಾವ
  • ಕರೀನಾ ಕಪೂರ್, ಐಶ್ವರ್ಯಾ ರೈ ಬಚ್ಚನ್​, ಸಲ್ಮಾನ್ ಖಾನ್ ಈ ಸಾಲಿನಲ್ಲಿದ್ದಾರೆ

ಸೆಲೆಬ್ರಿಟಿಗಳು ಎಷ್ಟೇ ಎತ್ತರಕ್ಕೆ ಬೆಳೆದರೂ ಒಂದಷ್ಟು ಸ್ವಭಾವವನ್ನು ಅವರಿಗೆ ಬಿಡೋಕೆ ಸಾಧ್ಯವೇ ಆಗಿರುವುದಿಲ್ಲ. ಇದರಿಂದ ಅವರು ಅನೇಕ ಬಾರಿ ಟೀಕೆಗೆ ಒಳಗಾಗಬೇಕಾದ ಪರಿಸ್ಥಿತಿ ಬರುತ್ತದೆ. ಕೆಲವೊಮ್ಮೆ ಸೆಲೆಬ್ರಿಟಿಗಳು ನಡೆದುಕೊಳ್ಳುವುದು ಅಭಿಮಾನಿಗಳೇ ಇಷ್ಟ ಆಗುವುದಿಲ್ಲ. ಈ ಸಾಲಿನಲ್ಲಿ ಕರೀನಾ ಕಪೂರ್ (Kareena Kapoor), ಐಶ್ವರ್ಯಾ ರೈ ಬಚ್ಚನ್​, ಸಲ್ಮಾನ್ ಖಾನ್, ಕಂಗನಾ ರಣಾವತ್ (Kangana Ranaut) ಮೊದಲಾದವರು ಇದ್ದಾರೆ. ಅಷ್ಟಕ್ಕೂ ಈ ಸೆಲೆಬ್ರಿಟಿಗಳಲ್ಲಿ ಅಭಿಮಾನಿಗಳಿಗೆ ಇಷ್ಟ ಆಗದೇ ಇರುವಂಥದ್ದು ಏನಿದೆ? ಆ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಇದೆ ಉತ್ತರ.

ಐಶ್ವರ್ಯಾ ರೈ ಬಚ್ಚನ್: ಬಾಲಿವುಡ್​ನಲ್ಲಿ ಐಶ್ವರ್ಯಾ ರೈ ಇನ್ನೂ ಬೇಡಿಕೆ ಉಳಿಸಿಕೊಂಡಿದ್ದಾರೆ. ದಕ್ಷಿಣದ ಕೆಲ ಸಿನಿಮಾಗಳಲ್ಲೂ ನಟಿಸಿ ಅವರು ಫೇಮಸ್ ಆಗಿದ್ದಾರೆ. ಕೆಲವೊಮ್ಮೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರು ಕಠೋರವಾಗಿ ನಡೆದುಕೊಳ್ಳುತ್ತಾರೆ. ಇದು ಕೆಲವರಿಗೆ ಇಷ್ಟ ಆಗುವುದಿಲ್ಲ.

ಕರೀನಾ ಕಪೂರ್: ಕರೀನಾ ಕಪೂರ್ ಸದ್ಯ ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ಸಹಕಲಾವಿದರ ಬಗ್ಗೆ ಕೆಟ್ಟ ಕಮೆಂಟ್ ಹಾಕುತ್ತಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುವುದಿಲ್ಲ.

ಸಲ್ಮಾನ್ ಖಾನ್: ಸಲ್ಮಾನ್ ಖಾನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅವರು ಕೆಲವು ಕಡೆಗಳಲ್ಲಿ ಸಿಟ್ಟಿನಿಂದ ನಡೆದುಕೊಂಡಿದ್ದಿದೆ. ಅವರು ರಿವೇಂಜ್ ತೀರಿಸಿಕೊಳ್ಳುವ ಗುಣವನ್ನು ಹೊಂದಿದ್ದಾರೆ.

ಕಂಗನಾ ರಣಾವತ್: ನಿರ್ದೇಶಕಿ, ನಿರ್ಮಾಪಕಿ, ನಟಿಯಾಗಿ ಗುರುತಿಸಿಕೊಂಡಿರುವ ಕಂಗನಾ ರಣಾವತ್ ಅವರು ಸದಾ ಟೀಕೆಗೆ ಒಳಗಾಗುತ್ತಾರೆ. ಸಂಬಂಧ ಇಲ್ಲದ ವಿವಾದಗಳಲ್ಲಿ ಮೂಗು ತೂರಿಸಲು ಹೋಗುತ್ತಾರೆ. ಅವರಿಗೆ ಬಾಲಿವುಡ್​ನಲ್ಲಿ ಬಹುತೇಕರನ್ನು ಕಂಡರೆ ಆಗುವುದಿಲ್ಲ.

ರಣಬೀರ್ ಕಪೂರ್: ಬಾಲಿವುಡ್​ನ ಬೇಡಿಕೆಯ ಹೀರೋ ರಣಬೀರ್ ಕಪೂರ್. ಇವರು ಸೋಶಿಯಲ್ ಮೀಡಿಯಾ ಇಂದ ದೂರ ಇದ್ದಾರೆ. ರಣಬೀರ್​ಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಸಣ್ಣ ಮಟ್ಟದಲ್ಲಿ ಕಿರಿಕಿರಿ ಆದರೂ ಅವರು ಸಿಟ್ಟಾಗುತ್ತಾರೆ. ಇದು ಅನೇಕ ಬಾರಿ ಕ್ಯಾಮೆರಾದಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: Saif Ali Khan: ‘ಆದಿಪುರುಷ್​’ ಪ್ರಮೋಷನ್​ನಿಂದ ದೂರ ಉಳಿಯಲಿದ್ದಾರೆ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್

ಜಯಾ ಬಚ್ಚನ್: ಅಮಿತಾಭ್ ಬಚ್ಚನ್ ಪತ್ನಿ ಜಯಾ ಬಚ್ಚನ್​ಗೆ ಪಾಪರಾಜಿಗಳು ಮುತ್ತಿಕೊಂಡರೆ ಇಷ್ಟ ಆಗುವುದಿಲ್ಲ. ಈ ವೇಳೆ ಅವರು ಕಠೋರವಾಗಿ ನಡೆದುಕೊಂಡಿದ್ದರು.

ಕರಣ್ ಜೋಹರ್: ಬಾಲಿವುಡ್​ನ ವಿವಾದಾತ್ಮಕ ನಿರ್ಮಾಪಕರಲ್ಲಿ ಕರಣ್ ಜೋಹರ್ ಕೂಡ ಒಬ್ಬರು. ಅವರು ಸ್ಟಾರ್ ಕಿಡ್​ಗಳನ್ನು ಬೆಳೆಸೋಕೆ ಇದ್ದವರು ಎನ್ನುವ ಮಾತಿದೆ. ತಮಗೆ ಇಷ್ಟ ಇಲ್ಲದವರನ್ನು ಇಂಡಸ್ಟ್ರಿಯಿಂದ ಹೊರ ಹಾಕಲು ಅವರು ಎಲ್ಲ ರೀತಿಯ ಪ್ರಯತ್ನ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ