AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಿತ್ರಕ್ಕಾಗಿ ಒಂದಾದ ಸಲ್ಮಾನ್ ಖಾನ್-ಆಮಿರ್​ ಖಾನ್; ಬಿಗ್ ಬಜೆಟ್ ಚಿತ್ರಕ್ಕೆ ಶೀಘ್ರವೇ ಮುಹೂರ್ತ?

ಇತ್ತೀಚೆಗೆ ಆಮಿರ್ ಖಾನ್ ಕುಟುಂಬದ ಜತೆ ಸಲ್ಮಾನ್ ಖಾನ್ ಸಮಯ ಕಳೆದು ಬಂದಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಭೇಟಿ ಹಿಂದಿರುವ ಉದ್ದೇಶ ಏನು ಎಂಬುದು ಅನೇಕರ ಪ್ರಶ್ನೆ ಆಗಿತ್ತು.

ಹೊಸ ಚಿತ್ರಕ್ಕಾಗಿ ಒಂದಾದ ಸಲ್ಮಾನ್ ಖಾನ್-ಆಮಿರ್​ ಖಾನ್; ಬಿಗ್ ಬಜೆಟ್ ಚಿತ್ರಕ್ಕೆ ಶೀಘ್ರವೇ ಮುಹೂರ್ತ?
ಆಮಿರ್ ಖಾನ್ ಕುಟುಂಬದ ಜತೆ ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Feb 02, 2023 | 7:55 AM

Share

ಸಲ್ಮಾನ್ ಖಾನ್ (Salman Khan) ಹಾಗೂ ಶಾರುಖ್ ಖಾನ್ ಅವರು ಬಾಲಿವುಡ್​ನಲ್ಲಿ ಹಲವು ವರ್ಷಗಳಿಂದ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸ್ಟಾರ್ ಹೀರೋಗಳಿಗೆ ಇರುವ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಈಗ ಇಬ್ಬರೂ ಒಂದೇ ಸಿನಿಮಾದಲ್ಲಿ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಹಾಗಂತ ಇಬ್ಬರೂ ಹೀರೋ ಅಲ್ಲ. ಸಲ್ಮಾನ್ ಚಿತ್ರಕ್ಕೆ ಆಮಿರ್ (Aamir Khan) ಬಂಡವಾಳ ಹೂಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಸದ್ಯ ಈ ವಿಚಾರದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇತ್ತೀಚೆಗೆ ಆಮಿರ್ ಖಾನ್ ಕುಟುಂಬದ ಜತೆ ಸಲ್ಮಾನ್ ಖಾನ್ ಸಮಯ ಕಳೆದು ಬಂದಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಭೇಟಿ ಹಿಂದಿರುವ ಉದ್ದೇಶ ಏನು ಎಂಬುದು ಅನೇಕರ ಪ್ರಶ್ನೆ ಆಗಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಆಮಿರ್ ಖಾನ್ ಹಾಗೂ ಶಾರುಖ್ ಖಾನ್ ಒಟ್ಟಾಗಿ ಸಿನಿಮಾ ಮಾಡೋದು ಬಹುತೇಕ ಖಚಿತವಾಗಿದೆ ಎಂದು ಪಿಂಕ್​ವಿಲ್ಲಾ ವೆಬ್​ಸೈಟ್ ವರದಿ ಮಾಡಿದೆ.

ಆಮಿರ್ ಖಾನ್ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಹಾಗಂತ ಅವರು ಸಿನಿಮಾ ರಂಗದಿಂದ ದೂರ ಇಲ್ಲ. ಅವರು ಕಳೆದ ಆರು ತಿಂಗಳಿಂದ ಸ್ಕ್ರಿಪ್ಟ್ ಒಂದಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ನಿರ್ದೇಶಕ ಆರ್​.ಎಸ್​. ಪ್ರಸನ್ನ ಅವರು ಆಮಿರ್ ಖಾನ್​ ಜತೆ ಇದ್ದಾರೆ. ಈಗ ಬಹುತೇಕ ಸ್ಕ್ರಿಪ್ಟ್ ರೆಡಿ ಆಗಿದ್ದು ನಾಯಕನ ಪಾತ್ರಕ್ಕೆ ಸಲ್ಮಾನ್ ಖಾನ್ ಸೂಕ್ತ ಎಂದು ಅವರಿಗೆ ಅನಿಸಿದೆ. ಹೀಗಾಗಿ, ಸಲ್ಮಾನ್ ಖಾನ್​ಗೆ ಅವರು ಈ ಆಫರ್ ನೀಡಿದ್ದಾರೆ. ಸಲ್ಮಾನ್ ಖಾನ್ ಕಥೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
ಐದು ದಿನಕ್ಕೆ 500 ಕೋಟಿ ರೂಪಾಯಿ ಬಾಚಿದ ‘ಪಠಾಣ್​’; ಭಾರತದಲ್ಲಿ ಎಷ್ಟು ಕಲೆಕ್ಷನ್​?
Image
ಕಂಬ್ಯಾಕ್​ಗೆ ಶಾರುಖ್ ಖಾನ್ ತಂತ್ರವನ್ನೇ ಬಳಸಲಿದ್ದಾರೆ ಆಮಿರ್ ಖಾನ್? ಕಾಯಬೇಕು ಇನ್ನಷ್ಟು ವರ್ಷ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಪ್ರಸನ್ನ ಅವರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಆಮಿರ್ ಖಾನ್ ಸಿನಿಮಾ ನಿರ್ಮಾಣದ ಜತೆಗೆ ಕಥೆಯ ಬಗ್ಗೆಯೂ ಗಮನ ಹರಿಸುತ್ತಿದ್ದಾರೆ. ಸಲ್ಮಾನ್ ಹಾಗೂ ಆಮಿರ್ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಸಲ್ಲುಗೆ ಆಮಿರ್​ ಈ ರೀತಿ ಸಿನಿಮಾ ಆಫರ್ ನೀಡಿರೋದು ಇದೇ ಮೊದಲು.

ಇದನ್ನೂ ಓದಿ: ಕಂಬ್ಯಾಕ್​ಗೆ ಶಾರುಖ್ ಖಾನ್ ತಂತ್ರವನ್ನೇ ಬಳಸಲಿದ್ದಾರೆ ಆಮಿರ್ ಖಾನ್? ಕಾಯಬೇಕು ಇನ್ನಷ್ಟು ವರ್ಷ

ಇದೇ ವೇಳೆ ಆಮಿರ್​ಗೆ ದೊಡ್ಡ ಪರದೆಗೆ ಮರಳುವಂತೆ ಸಲ್ಮಾನ್ ಖಾನ್ ಕೋರಿದ್ದಾರೆ. ‘ಲಾಲ್ ಸಿಂಗ್ ಚಡ್ಡಾ’ ಸೋಲಿನ ಬಳಿಕ ಆಮಿರ್ ಖಾನ್ ಅವರು ನಟನೆಯಿಂದ ದೂರ ಇರುವ ಘೋಷಣೆ ಮಾಡಿದರು. ಕುಟುಂಬದ ಜತೆ ಸಮಯ ಕಳೆಯೋದು ಅವರ ಉದ್ದೇಶವಾಗಿದೆ. ಇದರ ಜತೆಗೆ ಮನೆಯಲ್ಲೇ ಕುಳಿತು ಸ್ಕ್ರಿಪ್ಟ್ ಕೆಲಸದಲ್ಲಿ ಭಾಗಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ