AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್

Sikandar Movie: ಸಲ್ಮಾನ್ ಖಾನ್ ಸಿನಿಮಾಗಳು ಈದ್​ ಸಂದರ್ಭದಲ್ಲಿ ರಿಲೀಸ್ ಆಗುತ್ತವೆ. ಆದರೆ, ಇಂದು ಈದ್ ಇದ್ದ ಹೊರತಾಗಿಯೂ ಅವರ ಸಿನಿಮಾ ಬಿಡುಗಡೆ ಆಗಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಆದರೆ, ಅವರ ಹೊಸ ಸಿನಿಮಾದ ಟೈಟಲ್ ಇದೇ ದಿನ ಘೋಷಣೆ ಆಗಿದೆ.

ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್
ಸಲ್ಮಾನ್ ಖಾನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Apr 11, 2024 | 12:01 PM

ಸಲ್ಮಾನ್ ಖಾನ್ (Salman Khan) ಅವರಿಗೆ ದೊಡ್ಡ ಗೆಲುವು ಸಿಕ್ಕಿ ಹಲವು ವರ್ಷಗಳೇ ಕಳೆದಿವೆ. ಈ ಕಾರಣಕ್ಕೆ ಅವರು ದಕ್ಷಿಣ ಭಾರತದ ನಿರ್ದೇಶಕನ ಜೊತೆ ಕೈ ಜೋಡಿಸಿದ್ದಾರೆ. ಖ್ಯಾತ ಡೈರೆಕ್ಟರ್ ಎಆರ್​ ಮುರುಗದಾಸ್ ಜೊತೆ ಅವರು ಸಿನಿಮಾ ಮಾಡಲಿರುವುದು ಗೊತ್ತೇ ಇದೆ. ಈ ಬಗ್ಗೆ ಇತ್ತೀಚೆಗೆ ಮಾಹಿತಿ ಹೊರಬಿದ್ದಿತ್ತು. ಈಗ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈ ಚಿತ್ರಕ್ಕೆ ‘ಸಿಖಂದರ್’ ಎಂದು ಶೀರ್ಷಿಕೆ ಇಡಲಾಗಿದೆ. ಸಿಖಂದರ್ ಎಂದರೆ ಯೋಧ ಎಂದರ್ಥ.

ಸಲ್ಮಾನ್ ಖಾನ್ ಸಿನಿಮಾಗಳು ಈದ್​ ಸಂದರ್ಭದಲ್ಲಿ ರಿಲೀಸ್ ಆಗುತ್ತವೆ. ಆದರೆ, ಇಂದು (ಏಪ್ರಿಲ್ 11) ಈದ್ ಇದ್ದ ಹೊರತಾಗಿಯೂ ಅವರ ಸಿನಿಮಾ ಬಿಡುಗಡೆ ಆಗಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಆದರೆ, ಅವರ ಹೊಸ ಸಿನಿಮಾದ ಟೈಟಲ್ ಇದೇ ದಿನ ಘೋಷಣೆ ಆಗಿದೆ. ಸಿನಿಮಾ ಟೈಟಲ್ ಜೊತೆ 2025ರ ಈದ್​ಗೆ ಚಿತ್ರ ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದರಿಂದ ಕುತೂಹಲ ಡಬಲ್ ಆಗಿದೆ.

ಬಾಲಿವುಡ್ ನಟರು ಇತ್ತೀಚೆಗೆ ದಕ್ಷಿಣ ನಿರ್ದೇಶಕ ಜೊತೆ ಕೈ ಜೋಡಿಸುತ್ತಿದ್ದಾರೆ. ಈ ಮೊದಲು ಶಾರುಖ್ ಖಾನ್ ಅವರು ‘ಜವಾನ್’ ಚಿತ್ರಕ್ಕಾಗಿ ಅಟ್ಲಿ ಜೊತೆ ಕೆಲಸ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ಸಲ್ಮಾನ್ ಖಾನ್ ಅವರು ಮುರುಗದಾಸ್ ನಿರ್ದೇಶನದಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಲ್ಲು ಗೆಳೆಯ ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ.

ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದಾರೆ. ಮುರುಗದಾಸ್ ಅವರಿಗೆ ಹಿಂದಿ ಚಿತ್ರರಂಗ ಹೊಸದಲ್ಲ. ಈ ಮೊದಲು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು. ಇದು ತಮಿಳಿನಲ್ಲಿ ಅವರೇ ನಿರ್ದೇಶನ ಮಾಡಿದ್ದ ‘ಗಜಿನಿ’ ಚಿತ್ರದ ಹಿಂದಿ ರಿಮೇಕ್ ಆಗಿತ್ತು. ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು. ಇದರಲ್ಲಿ ಸಲ್ಲು ನಟಿಸಿದ್ದರು. ಆದರೆ, ಸಿನಿಮಾ ಹಿಟ್ ಆಗಲಿಲ್ಲ.

ಇದನ್ನೂ ಓದಿ: ‘ಈದ್​’ ಹಬ್ಬಕ್ಕೆ ಸಲ್ಮಾನ್​ ಖಾನ್​ ಕಡೆಯಿಂದ ಸಿಗಲಿದೆ ಗಿಫ್ಟ್​: ಏನಿದು ಸರ್ಪ್ರೈಸ್​?

‘ಸಿಖಂದರ್’ ಸಿನಿಮಾ ಪಕ್ಕಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. ಪೋರ್ಚುಗಲ್ ಸೇರಿ ಅನೇಕ ದೇಶಗಳಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಚಿತ್ರದಲ್ಲಿ ಬೇರೆ ಭಾಷೆಗಳ ಕೆಲವು ಸ್ಟಾರ್ ನಟರು ಸಹ ನಟಿಸಲಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ. ‘ಟೈಗರ್ 3’ ಸಾಧಾರಣ ಹಿಟ್ ಆದ ಬಳಿಕ ಸಲ್ಮಾನ್ ಖಾನ್ ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರೆ ಎಂದು ವರದಿ ಆಗಿತ್ತು. ಎಆರ್​ ಮುರುಗದಾಸ್ ಅವರನ್ನು ಆಯ್ಕೆ ಮಾಡಿಕೊಂಡ ಬಳಿಕ ಈ ವಿಚಾರ ಫ್ಯಾನ್ಸ್​ಗೆ ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ?