AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ಕೋಟಿ ರೂ. ದಾಟಿತು ಸಲ್ಮಾನ್-ಅಟ್ಲಿ ಚಿತ್ರದ ಬಜೆಟ್​; ರಜನಿಕಾಂತ್​​ಗೂ ಮಣೆ ಹಾಕಿದ ನಿರ್ದೇಶಕ

ಅಟ್ಲಿ ನಿರ್ದೇಶನದ ಚಿತ್ರದಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ 'ಎ6' ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ 500 ಕೋಟಿ ರೂಪಾಯಿಗೂ ಮೀರಿದೆ. 2027ರ ಈದ್‌ಗೆ ತೆರೆ ಕಾಣುವ ನಿರೀಕ್ಷೆಯಲ್ಲಿದೆ. ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕಾರ್ಯಗಳು ಈಗಾಗಲೇ ಪ್ರಾರಂಭವಾಗಿದ್ದು, ಸಲ್ಮಾನ್ ಖಾನ್ ಈ ಚಿತ್ರಕ್ಕಾಗಿ ತಮ್ಮ ದೇಹದ ತೂಕವನ್ನು ಕಳೆದುಕೊಳ್ಳಲಿದ್ದಾರೆ.

500 ಕೋಟಿ ರೂ. ದಾಟಿತು ಸಲ್ಮಾನ್-ಅಟ್ಲಿ ಚಿತ್ರದ ಬಜೆಟ್​; ರಜನಿಕಾಂತ್​​ಗೂ ಮಣೆ ಹಾಕಿದ ನಿರ್ದೇಶಕ
ಸಲ್ಮಾನ್-ಅಟ್ಲಿ
Follow us
ರಾಜೇಶ್ ದುಗ್ಗುಮನೆ
|

Updated on: Feb 11, 2025 | 6:58 AM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಿರ್ದೇಶಕ ಅಟ್ಲಿ ಖ್ಯಾತಿ ಹೆಚ್ಚಿದೆ. ಖ್ಯಾತ ನಿರ್ಮಾಪಕರು, ನಟರು ಇವರ ಮನೆ ಬಾಗಿಲಲ್ಲಿ ನಿಂತಿದ್ದಾರೆ. ಈಗ ಅವರ ನಿರ್ದೇಶನ ‘ಎ6’ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಸಲ್ಮಾನ್ ಖಾನ್ ಹೀರೋ. ಈ ಸಿನಿಮಾ 2026ರಲ್ಲಿ ಸೆಟ್ಟೇರಲಿದೆ. ಈಗ ಅಟ್ಲಿ ಅವರು ಚಿತ್ರದ ಬಜೆಟ್ ರಿವೀಲ್ ಮಾಡಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಅಟ್ಲಿ ಅವರ ಸಿನಿಮಾದಲ್ಲಿ ಸ್ಟಾರ್ ಹೀರೋಗಳು ಇರುತ್ತಾರೆ. ಜೊತೆಗೆ ಅದರ ಬಜೆಟ್ ಕೂಡ ದೊಡ್ಡದಾಗಿಯೇ ಇರುತ್ತದೆ. ಈಗ ‘ಎ6’ ಚಿತ್ರದ ಬಜೆಟ್ 500 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಈ ಮೂಲಕ ಸಿನಿಮಾದ ಮೇಲೆ ಇರುವ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲವೂ ಮೂಡಿದೆ.

ಹಾಗಾದರೆ ಸಿನಿಮಾ ರಿಲೀಸ್ ಆಗೋದು ಯಾವಾಗ? ಆ ಪ್ರಶ್ನೆಗೂ ಉತ್ತರ ಇದೆ. ಸಲ್ಮಾನ್ ಖಾನ್ ತಮ್ಮ ಸಿನಿಮಾಗಳನ್ನು ಈದ್​ಗೆ ರಿಲೀಸ್ ಮಾಡಲು ಹೆಚ್ಚು ಆದ್ಯತೆ ನೀಡುತ್ತಾರೆ. ಈ ವರ್ಷ ಅವರ ನಟನೆಯ ‘ಸಿಖಂದರ್’ ರಿಲೀಸ್ ಆಗಲಿದೆ. 2026ರಲ್ಲಿ ಅವರ ನಟನೆಯ ಯಾವುದೇ ಚಿತ್ರ ತೆರೆಗೆ ಬರುವುದಿಲ್ಲ. ಹೀಗಾಗಿ, 2027ರ ಈದ್​ಗೆ ಚಿತ್ರವನ್ನು ತೆರೆಗೆ ತರುವ ಆಲೋಚನೆ ತಂಡಕ್ಕೆ ಇದೆ.

ಸಲ್ಮಾನ್ ಖಾನ್ ಅವರು ಬಾಡಿ ಮೆಂಟೇನ್ ಮಾಡಿದ್ದಾರೆ. ಅವರು ತಮ್ಮ ದೇಹದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರು ಈ ಚಿತ್ರಕ್ಕಾಗಿ ದೇಹ ತೂಕವನ್ನು ಕಳೆದುಕೊಳ್ಳಲಿದ್ದಾರೆ. ಸಿಖಂದರ್ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಈ ಬಗ್ಗೆ ಗಮನ ಹರಿಸಲಿದ್ದಾರೆ.

ಇದನ್ನೂ ಓದಿ: ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ನಿರ್ದೇಶಕ ಅಟ್ಲಿಗೆ ಬಾಲಿವುಡ್​ನಲ್ಲಿ ಇದೆಂಥ ಸ್ಥಿತಿ

ಅಟ್ಲಿ ತಮಿಳಿನರು. ಹೀಗಾಗಿ ಈ ಚಿತ್ರ ತಮಿಳಿನಲ್ಲೂ ರಿಲೀಸ್ ಆಗಲಿದೆ. ಈ ಕಾರಣದಿಂದಲೇ ರಜನಿಕಾಂತ್ ಜೊತೆ ಅವರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಸೂಪರ್​ಸ್ಟಾರ್​ಗಳೇ. ಇವರಿಗೆ ನೀಡುವ ಸಂಭಾವನೆಯೇ ಸಿನಿಮಾ ಬಜೆಟ್ ಹೆಚ್ಚಲು ಪ್ರಮುಖ ಕಾರಣ ಆಗಲಿದೆ.  ಈ ಚಿತ್ರದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?