AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರನ್ನೂ ಭೇಟಿ ಮಾಡಲ್ಲ: ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ನಿರ್ಧಾರ

ಬಾಬಾ ಸಿದ್ಧಿಕಿ ನಿಧನದ ಸುದ್ದಿ ತಿಳಿದ ಬಳಿಕ ತಮ್ಮ ಎಲ್ಲ ಮೀಟಿಂಗ್​ಗಳನ್ನು ಸಲ್ಮಾನ್​ ಖಾನ್​ ಅವರು ಕ್ಯಾನ್ಸಲ್ ಮಾಡಿದ್ದಾರೆ. ಚಿತ್ರರಂಗದ ಸ್ನೇಹಿತರು ಕೂಡ ತಮ್ಮ ನಿವಾಸಕ್ಕೆ ಭೇಟಿ ನೀಡುವುದು ಬೇಡ ಎಂದು ಸಲ್ಲು ಕುಟುಂಬದವರು ತಿಳಿಸಿದ್ದಾರೆ ಎನ್ನಲಾಗಿದೆ. ಸಲ್ಮಾನ್​ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ಗೆ ಭದ್ರತೆ ಹೆಚ್ಚಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಯಾರನ್ನೂ ಭೇಟಿ ಮಾಡಲ್ಲ: ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ನಿರ್ಧಾರ
ಸಲ್ಮಾನ್​ ಖಾನ್​, ಬಾಬಾ ಸಿದ್ಧಿಕಿ
ಮದನ್​ ಕುಮಾರ್​
|

Updated on: Oct 13, 2024 | 3:39 PM

Share

ಎನ್​ಸಿಪಿ ಮುಖಂಡ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್​ ಖಾನ್​ ಅವರ ಭದ್ರತೆ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಬಾಬಾ ಸಿದ್ಧಿಕಿಗೆ ಸಲ್ಮಾನ್​ ಖಾನ್​ ಆಪ್ತರಾಗಿದ್ದರು. ಅವರ ನಿಧನದ ಬಳಿಕ ಸಲ್ಲು ಮನೆ ಮುಂಭಾಗ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೇ ತಮ್ಮ ನಿವಾಸ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ಗೆ ಯಾರೂ ಭೇಟಿ ನೀಡಬೇಡಿ ಎಂದು ಸಲ್ಮಾನ್​ ಖಾನ್​ ಕುಟುಂಬದವರು ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಈ ಮೊದಲು ಸಲ್ಮಾನ್​ ಖಾನ್​ ಹತ್ಯೆಗೆ ಪ್ರಯತ್ನ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದರು. ಈಗ ಅವರ ಆಪ್ತರಾದ ಬಾಬಾ ಸಿದ್ಧಿಕಿ ಕೊಲೆ ಆಗಿರುವುದರಿಂದ ಸಲ್ಲು ಫ್ಯಾಮಿಲಿಗೆ ಆತಂಕ ಹೆಚ್ಚಿದೆ.

ಬಾಬಾ ಸಿದ್ಧಿಕಿ ಅವರ ಕುಟುಂಬಕ್ಕೆ ಈ ಕಷ್ಟದ ಸಂದರ್ಭದಲ್ಲಿ ಸಲ್ಮಾನ್​ ಖಾನ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಸಿದ್ಧಿಕಿ ಪುತ್ರ ಝೀಶಾನ್​ ಜೊತೆ ಅವರು ನಿರಂತರ ಸಂಪರ್ಕದಲ್ಲಿ ಇದ್ದಾರೆ. ಸ್ನೇಹಿತನನ್ನು ಕಳೆದುಕೊಂಡಿರುವ ಸಲ್ಮಾನ್​ ಖಾನ್​ಗೆ ತೀವ್ರ ಆತಂಕ ಉಂಟಾಗಿದೆ. ರಾತ್ರಿ ಅವರು ನಿದ್ದೆ ಮಾಡಿಲ್ಲ. ಈ ಮೊದಲೇ ನಿಗದಿ ಆಗಿದ್ದ ಎಲ್ಲ ಮೀಟಿಂಗ್​ಗಳನ್ನು ಅವರು ಕ್ಯಾನ್ಸಲ್​ ಮಾಡಿಕೊಂಡಿದ್ದಾರೆ.

ಸಲ್ಮಾನ್​ ಖಾನ್​ ಮಾತ್ರವಲ್ಲದೇ ಅವರ ಕುಟುಂಬದ ಬೇರೆ ಎಲ್ಲ ಸದಸ್ಯರು ಕೂಡ ಆತಂಕಕ್ಕೆ ಒಳಗಾಗಿದ್ದಾರೆ. ಸಲ್ಲು ಸಹೋದರರಾದ ಅರ್ಬಾಜ್​ ಖಾನ್​ ಮತ್ತು ಸೊಹೈಲ್​ ಖಾನ್​ ಕೂಡ ಆಗಾಗ ಬಾಬಾ ಸಿದ್ಧಿಕಿ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದರು. ಈಗ ಅವರ ನಿಧನದಿಂದ ಶೋಕ ಆವರಿಸಿದೆ. ಬಾಬಾ ಸಿದ್ಧಿಕಿ ಅಂತ್ಯಕ್ರಿಯೆ ಸಕಲ ತಯಾರಿಯ ಬಗ್ಗೆ ಸಲ್ಮಾನ್ ಖಾನ್​ ಅವರು ಉಸ್ತುವಾರಿ ವಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಾಬಾ ಸಿದ್ಧಿಕಿ ಮತ್ತು ಬಾಲಿವುಡ್: ಸಲ್ಲು-ಶಾರುಖ್​ ಖಾನ್ ಒಂದಾಗಿದ್ದೇ ಇವರಿಂದ

ಬಾಂದ್ರಾದಲ್ಲಿ ಇರುವ ಸಲ್ಮಾನ್ ಖಾನ್​ ಅವರ ನಿವಾಸಕ್ಕೆ ಬಾಲಿವುಡ್​ನ ಅನೇಕರು ಆಗಾಗ ಭೇಟಿ ನೀಡುತ್ತಾ ಇರುತ್ತಾರೆ. ಆದರೆ ಈಗ ತಮ್ಮನ್ನು ಯಾರೂ ಕೂಡ ಭೇಟಿ ಮಾಡುವುದು ಬೇಡ ಎಂದು ಸಲ್ಮಾನ್ ಖಾನ್ ಅವರು ತಿಳಿಸಿದ್ದಾರೆ ಎಂದು ವರದಿ ಆಗಿದೆ. ಸಿನಿಮಾ ಶೂಟಿಂಗ್​ ಮತ್ತು ಬಿಗ್​ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಸಲ್ಮಾನ್​ ಖಾನ್​ ಬ್ಯುಸಿ ಆಗಿದ್ದರು. ಆದರೆ ಆ ಕೆಲಸಗಳಿಗೆ ಅವರು ಬ್ರೇಕ್​ ಹಾಕುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್