ಯಾರನ್ನೂ ಭೇಟಿ ಮಾಡಲ್ಲ: ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ನಿರ್ಧಾರ

ಬಾಬಾ ಸಿದ್ಧಿಕಿ ನಿಧನದ ಸುದ್ದಿ ತಿಳಿದ ಬಳಿಕ ತಮ್ಮ ಎಲ್ಲ ಮೀಟಿಂಗ್​ಗಳನ್ನು ಸಲ್ಮಾನ್​ ಖಾನ್​ ಅವರು ಕ್ಯಾನ್ಸಲ್ ಮಾಡಿದ್ದಾರೆ. ಚಿತ್ರರಂಗದ ಸ್ನೇಹಿತರು ಕೂಡ ತಮ್ಮ ನಿವಾಸಕ್ಕೆ ಭೇಟಿ ನೀಡುವುದು ಬೇಡ ಎಂದು ಸಲ್ಲು ಕುಟುಂಬದವರು ತಿಳಿಸಿದ್ದಾರೆ ಎನ್ನಲಾಗಿದೆ. ಸಲ್ಮಾನ್​ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ಗೆ ಭದ್ರತೆ ಹೆಚ್ಚಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಯಾರನ್ನೂ ಭೇಟಿ ಮಾಡಲ್ಲ: ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ನಿರ್ಧಾರ
ಸಲ್ಮಾನ್​ ಖಾನ್​, ಬಾಬಾ ಸಿದ್ಧಿಕಿ
Follow us
|

Updated on: Oct 13, 2024 | 3:39 PM

ಎನ್​ಸಿಪಿ ಮುಖಂಡ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್​ ಖಾನ್​ ಅವರ ಭದ್ರತೆ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಬಾಬಾ ಸಿದ್ಧಿಕಿಗೆ ಸಲ್ಮಾನ್​ ಖಾನ್​ ಆಪ್ತರಾಗಿದ್ದರು. ಅವರ ನಿಧನದ ಬಳಿಕ ಸಲ್ಲು ಮನೆ ಮುಂಭಾಗ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೇ ತಮ್ಮ ನಿವಾಸ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ಗೆ ಯಾರೂ ಭೇಟಿ ನೀಡಬೇಡಿ ಎಂದು ಸಲ್ಮಾನ್​ ಖಾನ್​ ಕುಟುಂಬದವರು ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಈ ಮೊದಲು ಸಲ್ಮಾನ್​ ಖಾನ್​ ಹತ್ಯೆಗೆ ಪ್ರಯತ್ನ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದರು. ಈಗ ಅವರ ಆಪ್ತರಾದ ಬಾಬಾ ಸಿದ್ಧಿಕಿ ಕೊಲೆ ಆಗಿರುವುದರಿಂದ ಸಲ್ಲು ಫ್ಯಾಮಿಲಿಗೆ ಆತಂಕ ಹೆಚ್ಚಿದೆ.

ಬಾಬಾ ಸಿದ್ಧಿಕಿ ಅವರ ಕುಟುಂಬಕ್ಕೆ ಈ ಕಷ್ಟದ ಸಂದರ್ಭದಲ್ಲಿ ಸಲ್ಮಾನ್​ ಖಾನ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಸಿದ್ಧಿಕಿ ಪುತ್ರ ಝೀಶಾನ್​ ಜೊತೆ ಅವರು ನಿರಂತರ ಸಂಪರ್ಕದಲ್ಲಿ ಇದ್ದಾರೆ. ಸ್ನೇಹಿತನನ್ನು ಕಳೆದುಕೊಂಡಿರುವ ಸಲ್ಮಾನ್​ ಖಾನ್​ಗೆ ತೀವ್ರ ಆತಂಕ ಉಂಟಾಗಿದೆ. ರಾತ್ರಿ ಅವರು ನಿದ್ದೆ ಮಾಡಿಲ್ಲ. ಈ ಮೊದಲೇ ನಿಗದಿ ಆಗಿದ್ದ ಎಲ್ಲ ಮೀಟಿಂಗ್​ಗಳನ್ನು ಅವರು ಕ್ಯಾನ್ಸಲ್​ ಮಾಡಿಕೊಂಡಿದ್ದಾರೆ.

ಸಲ್ಮಾನ್​ ಖಾನ್​ ಮಾತ್ರವಲ್ಲದೇ ಅವರ ಕುಟುಂಬದ ಬೇರೆ ಎಲ್ಲ ಸದಸ್ಯರು ಕೂಡ ಆತಂಕಕ್ಕೆ ಒಳಗಾಗಿದ್ದಾರೆ. ಸಲ್ಲು ಸಹೋದರರಾದ ಅರ್ಬಾಜ್​ ಖಾನ್​ ಮತ್ತು ಸೊಹೈಲ್​ ಖಾನ್​ ಕೂಡ ಆಗಾಗ ಬಾಬಾ ಸಿದ್ಧಿಕಿ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದರು. ಈಗ ಅವರ ನಿಧನದಿಂದ ಶೋಕ ಆವರಿಸಿದೆ. ಬಾಬಾ ಸಿದ್ಧಿಕಿ ಅಂತ್ಯಕ್ರಿಯೆ ಸಕಲ ತಯಾರಿಯ ಬಗ್ಗೆ ಸಲ್ಮಾನ್ ಖಾನ್​ ಅವರು ಉಸ್ತುವಾರಿ ವಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಾಬಾ ಸಿದ್ಧಿಕಿ ಮತ್ತು ಬಾಲಿವುಡ್: ಸಲ್ಲು-ಶಾರುಖ್​ ಖಾನ್ ಒಂದಾಗಿದ್ದೇ ಇವರಿಂದ

ಬಾಂದ್ರಾದಲ್ಲಿ ಇರುವ ಸಲ್ಮಾನ್ ಖಾನ್​ ಅವರ ನಿವಾಸಕ್ಕೆ ಬಾಲಿವುಡ್​ನ ಅನೇಕರು ಆಗಾಗ ಭೇಟಿ ನೀಡುತ್ತಾ ಇರುತ್ತಾರೆ. ಆದರೆ ಈಗ ತಮ್ಮನ್ನು ಯಾರೂ ಕೂಡ ಭೇಟಿ ಮಾಡುವುದು ಬೇಡ ಎಂದು ಸಲ್ಮಾನ್ ಖಾನ್ ಅವರು ತಿಳಿಸಿದ್ದಾರೆ ಎಂದು ವರದಿ ಆಗಿದೆ. ಸಿನಿಮಾ ಶೂಟಿಂಗ್​ ಮತ್ತು ಬಿಗ್​ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಸಲ್ಮಾನ್​ ಖಾನ್​ ಬ್ಯುಸಿ ಆಗಿದ್ದರು. ಆದರೆ ಆ ಕೆಲಸಗಳಿಗೆ ಅವರು ಬ್ರೇಕ್​ ಹಾಕುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ