ಒಂದೇ ಸಿನಿಮಾದಲ್ಲಿ ಸಲ್ಮಾನ್​ ಖಾನ್​, ಕಮಲ್​ ಹಾಸನ್ ನಟನೆ; ಇದು ಅಟ್ಲಿ ಪ್ಲ್ಯಾನ್

‘ಜವಾನ್​’ ಮೂಲಕ ಶಾರುಖ್​ ಖಾನ್​ಗೆ ದೊಡ್ಡ ಗೆಲುವು ತಂದುಕೊಟ್ಟಿದ್ದ ನಿರ್ದೇಶಕ ಅಟ್ಲಿ ಈಗ ಸಲ್ಮಾನ್​ ಖಾನ್​ ಜೊತೆ ಕೈ ಜೋಡಿಸಿದ್ದಾರೆ. ಅವರ ಹೊಸ ಸಿನಿಮಾದಲ್ಲಿ ಕಮಲ್​ ಹಾಸನ್​ ಕೂಡ ನಟಿಸುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ಸಲ್ಮಾನ್​ ಖಾನ್​ ಮತ್ತು ಕಮಲ್ ಹಾಸನ್​ ಅವರನ್ನು ಒಟ್ಟಿಗೆ ತೆರೆಮೇಲೆ ನೋಡಲು ಅಭಿಮಾನಿಗಳಲ್ಲಿ ಕಾತರ ಹೆಚ್ಚಿದೆ.

ಒಂದೇ ಸಿನಿಮಾದಲ್ಲಿ ಸಲ್ಮಾನ್​ ಖಾನ್​, ಕಮಲ್​ ಹಾಸನ್ ನಟನೆ; ಇದು ಅಟ್ಲಿ ಪ್ಲ್ಯಾನ್
ಕಮಲ್​ ಹಾಸನ್​, ಸಲ್ಮಾನ್​ ಖಾನ್​
Follow us
|

Updated on: Sep 02, 2024 | 9:35 PM

ನಿರ್ದೇಶಕ ಅಟ್ಲಿ ಅವರು ದಕ್ಷಿಣ ಭಾರತದ ಚಿತ್ರರಂಗದ ಜೊತೆಗೆ ಬಾಲಿವುಡ್​ನಲ್ಲೂ ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹಿಂದಿ ಚಿತ್ರಕ್ಕೆ ಕಾಲಿಟ್ಟ ಅಟ್ಲಿ ಅವರು ಬ್ಲಾಕ್​ ಬಸ್ಟರ್​ ಹಿಟ್​ ನೀಡಿದರು. ಈಗ ಅವರ ಮುಂದಿನ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ನಟಿಸುವುದು ಕನ್ಫರ್ಮ್​ ಆಗಿದೆ ಎಂಬ ಸುದ್ದಿ ಕೇಳಿಬಂದಿದೆ. ಅಷ್ಟೇ ಅಲ್ಲದೇ, ಇದೇ ಸಿನಿಮಾದಲ್ಲಿ ಮತ್ತೊರ್ವ ಸೂಪರ್​ ಸ್ಟಾರ್​ ನಟ ಕಮಲ್ ಹಾಸನ್​ ಕೂಡ ಅಭಿನಯಿಸುತ್ತಾರೆ ಎಂದು ಹೇಳಲಾಗುತ್ತಿದೆ.

ಸಲ್ಮಾನ್​ ಖಾನ್​ ಮತ್ತು ಅಟ್ಲಿ ಅವರು ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಬಗ್ಗೆ ಹಲವು ದಿನಗಳಿಂದ ಸುದ್ದಿ ಕೇಳಿಬರುತ್ತಲೇ ಇತ್ತು. ಈವರೆಗೂ ಸಲ್ಮಾನ್​ ಖಾನ್​ ಅವರಾಗಲೀ, ಅಟ್ಲಿ ಅವರಾಗಲೀ ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಆದರೆ ಇಬ್ಬರ ನಡುವೆ ಅಗ್ರಿಮೆಂಟ್​ ಸೈನ್​ ಆಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಸುದ್ದಿ ಕೇಳಿದ ಬಳಿಕ ಸಲ್ಮಾನ್​ ಖಾನ್​ ಅವರ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಅಟ್ಲಿ ನಿರ್ದೇಶನ ಮಾಡಲಿರುವ ಸಿನಿಮಾದಲ್ಲಿ ಇಬ್ಬರು ಹೀರೋಗಳು ಇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸಲ್ಮಾನ್​ ಖಾನ್​ ಜೊತೆ ಎರಡನೇ ಲೀಡ್​ ಆಗಿ ನಟಿಸಲು ಯಾವ ಹೀರೋ ಒಪ್ಪಿಕೊಳ್ಳುತ್ತಾರೆ ಎಂಬ ಪ್ರಶ್ನೆ ಇಷ್ಟು ದಿನಗಳ ತನಕ ಫ್ಯಾನ್ಸ್​ ಮನದಲ್ಲಿ ಕೊರೆಯುತ್ತಿತ್ತು. ಈಗ ಕಮಲ್​ ಹಾಸನ್​ ಅವರ ಹೆಸರು ಕೇಳಿಬಂದಿದ್ದು, ಈ ಪ್ರಾಜೆಕ್ಟ್​ ಬಗ್ಗೆ ಇನ್ನಷ್ಟು ಹೈಪ್​ ಹೆಚ್ಚುವಂತಾಗಿದೆ.

ಇದನ್ನೂ ಓದಿ: 1.4 ಕೋಟಿ ರೂಪಾಯಿ ಬೆಲೆಯ ಕಾರು ಖರೀದಿಸಿದ ಸಲ್ಮಾನ್​ ಖಾನ್​ ಬಾಡಿಗಾರ್ಡ್​ ಶೇರಾ

ಕಮಲ್​ ಹಾಸನ್​ ಅವರಿಗೆ ಬಾಲಿವುಡ್​ನಲ್ಲೂ ಡಿಮ್ಯಾಂಡ್​ ಇದೆ. ಹಾಗಾಗಿ ಸಲ್ಮಾನ್​ ಖಾನ್​ ಮತ್ತು ಕಮಲ್​ ಹಾಸನ್​ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾ ಸೂಪರ್​ ಹಿಟ್​ ಆಗಲಿದೆ ಎಂದು ಸಿನಿಪ್ರಿಯರು ಭವಿಷ್ಯ ನುಡಿಯುತ್ತಿದ್ದಾರೆ. ಸದ್ಯಕ್ಕೆ ಈ ಸಿನಿಮಾಗೆ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. 2025ರ ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಇಬ್ಬರೂ ನಟರ ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ