AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮ್ಮೆಲೇ ಎರಡು ಬಿಗ್ ಬಜೆಟ್ ಚಿತ್ರಗಳನ್ನು ಅರ್ಧಕ್ಕೆ ಕೈಬಿಟ್ಟ ಕರಣ್ ಜೋಹರ್

ಕರಣ್ ಜೋಹರ್ ಅವರು ಇತ್ತೀಚೆಗೆ ಬಿಗ್ ಬಜೆಟ್ ಚಿತ್ರಗಳನ್ನು ಮಾಡುವುದರಿಂದ ಹಿಂದೇಟು ಹಾಕುತ್ತಿದ್ದಾರೆ. ಅವರು ಸಾಕಷ್ಟು ಬಾರಿ ನಷ್ಟ ಅನುಭವಿಸಿರುವುದೇ ಇದಕ್ಕೆ ಕಾರಣ. ಈ ಕಾರಣಕ್ಕೆ ಅವರು ಕಾರ್ತಿಕ್ ಆರ್ಯನ್ ಹಾಗೂ ಸಲ್ಮಾನ್ ಖಾನ್ ಜೊತೆಗಿನ ಎರಡು ಸಿನಿಮಾಗಳನ್ನು ಅವರು ಹೋಲ್ಡ್ ಮಾಡಿದ್ದಾರೆ.

ಒಮ್ಮೆಲೇ ಎರಡು ಬಿಗ್ ಬಜೆಟ್ ಚಿತ್ರಗಳನ್ನು ಅರ್ಧಕ್ಕೆ ಕೈಬಿಟ್ಟ ಕರಣ್ ಜೋಹರ್
ಒಮ್ಮೆಲೇ ಎರಡು ಬಿಗ್ ಬಜೆಟ್ ಚಿತ್ರಗಳನ್ನು ಅರ್ಧಕ್ಕೆ ಕೈಬಿಟ್ಟ ಕರಣ್ ಜೋಹರ್
ರಾಜೇಶ್ ದುಗ್ಗುಮನೆ
|

Updated on: Jul 29, 2024 | 7:03 AM

Share

ಕರಣ್ ಜೋಹರ್ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದವರು. ಅವರು ನಿರ್ಮಾಣದಲ್ಲಿ ಎತ್ತಿದ ಕೈ. ಬಿಗ್ ಬಜೆಟ್ ಸಿನಿಮಾಗಳು, ಸ್ಟಾರ್ ಹೀರೋಗಳ ಸಿನಿಮಾಗಳಿಗೆ ಬಂಡವಾಳ ಹೂಡೋದು ಎಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಆದರೆ, ಇತ್ತೀಚೆಗೆ ಅವರು ಕೈ ಸುಟ್ಟುಕೊಂಡಿದ್ದು ಹೆಚ್ಚು. ಈ ಕಾರಣಕ್ಕೆ ಅವರು ಕಾರ್ತಿಕ್ ಆರ್ಯನ್ ಹಾಗೂ ಸಲ್ಮಾನ್ ಖಾನ್ ಜೊತೆಗಿನ ಎರಡು ಸಿನಿಮಾಗಳನ್ನು ಅವರು ಹೋಲ್ಡ್ ಮಾಡಿದ್ದಾರೆ.

ಈ ಮೊದಲು ಕಾರ್ತಿಕ್ ಆರ್ಯನ್ ಹಾಗೂ ಕರಣ್ ಜೋಹರ್ ‘ದೋಸ್ತಾನ 2’ ಸಿನಿಮಾ ಮಾಡಬೇಕಿತ್ತು. ಆದರೆ, ಈ ಚಿತ್ರ ಸೆಟ್ಟೇರಲಿಲ್ಲ. ಇಬ್ಬರ ಮಧ್ಯೆ ಏನೋ ಕಿರಿಕ್ ಆಗಿದೆ ಎನ್ನಲಾಗಿತ್ತು. 2023ರಲ್ಲಿ ಕಾರ್ತಿಕ್ ಆರ್ಯನ್ ಅವರು ಕರಣ್ ಜೋಹರ್ ಜೊತೆ ಕೈ ಜೋಡಿಸೋದಾಗಿ ಘೋಷಿಸಿದರು. ಈ ಸಿನಿಮಾ ಯುದ್ಧದ ಹಿನ್ನೆಲೆಯಲ್ಲಿ ಸಾಗಲಿದೆ ಎನ್ನಲಾಗಿತ್ತು. ಆದರೆ, ಈ ಚಿತ್ರವನ್ನು ಕರಣ್ ಜೋಹರ್ ಕೈ ಬಿಡೋಕೆ ನಿರ್ಧರಿಸಿದ್ದಾರೆ.

ಇತ್ತೀಚೆಗೆ ದೇಶಭಕ್ತಿ ಸಿನಿಮಾಗಳು ಸಾಕಷ್ಟು ಬಂದಿವೆ. ಆದರೆ, ಅಂದುಕೊಂಡ ಮಟ್ಟದಲ್ಲಿ ಇವು ಗೆಲುವು ಕಾಣುತ್ತಿಲ್ಲ. ಸಿದ್ದಾರ್ಥ್ ಮಲ್ಹೋತ್ರ ನಟನೆಯ ‘ಯೋಧ’ ಸಿನಿಮಾ ಹೀನಾಯ ಸೋಲು ಕಂಡಿತ್ತು. ಹೃತಿಕ್ ರೋಷನ್ ನಟನೆಯ ‘ಫೈಟರ್’ ಕೂಡ ಸಾಧಾರಣ ಸಿನಿಮಾ ಎನಿಸಿಕೊಂಡಿತು. ಈ ಕಾರಣಕ್ಕೆ ಕರಣ್ ಜೋಹರ್ ಅವರು ಈ ಕಥೆಯನ್ನು ಹೋಲ್ಡ್ ಮಾಡಿದ್ದಾರೆ. ಈ ಚಿತ್ರವನ್ನು ಸಂದೀಪ್ ಮೋದಿ ಅವರು ನಿರ್ದೇಶನ ಮಾಡಬೇಕಿತ್ತು.

ಇದನ್ನೂ ಓದಿ: ಗರ್ಲ್​ಫ್ರೆಂಡ್ ಬರ್ತ್​ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್

ಇನ್ನು ಸಲ್ಮಾನ್ ಖಾನ್ ಜೊತೆ ಕರಣ್ ಜೋಹರ್ ‘ಬುಲ್’ ಹೆಸರಿನ ಸಿನಿಮಾ ಮಾಡಬೇಕಿತ್ತು. ವಿಷ್ಣುವರ್ಧನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಬೇಕಿತ್ತು. ಇದಕ್ಕೆ ಸ್ಕ್ರಿಪ್ಟ್ ಕೂಡ ರೆಡಿ ಆಗಿತ್ತು. ಆದರೆ, ಈ ಚಿತ್ರವನ್ನು ಕೂಡ ಅರ್ಧಕ್ಕೆ ನಿಲ್ಲಿಸಲಾಗಿದೆ.

ಕರಣ್ ಜೋಹರ್ ಅವರು ಅನೇಕ ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಕೆಲ ಸಿನಿಮಾಗಳು ಅವರಿಗೆ ಕೈ ಕೊಟ್ಟಿದೆ. ಈ ಚಿತ್ರದಿಂದ ಅವರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು