AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ ಕೈಫ್​ಗೆ ಗಿಫ್ಟ್​ ಕೊಡೋಕೆ ಕೋಟಿಕೋಟಿ ಖರ್ಚು ಮಾಡಿದ ಸಲ್ಮಾನ್​, ರಣಬೀರ್​?

ಸಲ್ಮಾನ್​ ಖಾನ್​ ಅವರನ್ನು ಕತ್ರಿನಾ ಪ್ರೀತಿಸುತ್ತಿದ್ದರು. ಇವರ ಸಂಬಂಧ ಮುರಿದುಬಿದ್ದಿತ್ತು. ಆದರೆ, ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಇದೆ. ರಣಬೀರ್​ ಜತೆಯೂ ಕತ್ರಿನಾ ರಿಲೇಶನ್​ಶಿಪ್​ನಲ್ಲಿದ್ದರು. ಇಬ್ಬರೂ ಒಟ್ಟಾಗಿ ಸಿನಿಮಾ ಕೂಡ ಮಾಡಿದ್ದಾರೆ.

ಕತ್ರಿನಾ ಕೈಫ್​ಗೆ ಗಿಫ್ಟ್​ ಕೊಡೋಕೆ ಕೋಟಿಕೋಟಿ ಖರ್ಚು ಮಾಡಿದ ಸಲ್ಮಾನ್​, ರಣಬೀರ್​?
ಕತ್ರಿನಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 15, 2021 | 6:06 PM

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್ ಮದುವೆ (Katrina Kaif And Vicky Kaushal Marriage)​ ಅದ್ದೂರಿಯಾಗಿ ನೆರವೇರಿದೆ. ಡಿಸೆಂಬರ್​ 7ರಿಂದ 10ರವರೆಗೆ ಮದುವೆ ಕಾರ್ಯಕ್ರಮ ನಡೆದಿದೆ. ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ (Six Senses Fort Hotel) ಮದುವೆ ಕಾರ್ಯಕ್ರಮ ನಡೆದಿದೆ. ಮದುವೆಗೆ ಎಲ್ಲಾ ಸೆಲೆಬ್ರಿಟಿಗಳು ತೆರಳಿಲ್ಲ. ವಿಶೇಷ ಎಂದರೆ, ಕತ್ರಿನಾ ಹಾಗೂ ವಿಕ್ಕಿಗೆ ದುಬಾರಿ ಗಿಫ್ಟ್​ ಸಿಕ್ಕ ಬಗ್ಗೆ ವರದಿ ಆಗಿದೆ. ಅದೂ ಅವರ ಎಕ್ಸ್​ ಬಾಯಫ್ರೆಂಡ್​ಗಳಿಂದ ಅನ್ನೋದು ವಿಶೇಷ.

ಸಲ್ಮಾನ್​ ಖಾನ್​ ಅವರನ್ನು ಕತ್ರಿನಾ ಪ್ರೀತಿಸುತ್ತಿದ್ದರು. ಇವರ ಸಂಬಂಧ ಮುರಿದುಬಿದ್ದಿತ್ತು. ಆದರೆ, ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್​ ಇದೆ. ರಣಬೀರ್​ ಜತೆಯೂ ಕತ್ರಿನಾ ರಿಲೇಶನ್​ಶಿಪ್​ನಲ್ಲಿದ್ದರು. ಇಬ್ಬರೂ ಒಟ್ಟಾಗಿ ಸಿನಿಮಾ ಕೂಡ ಮಾಡಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಲ್ಲ. ಅಚ್ಚರಿ ಎಂದರೆ, ಕತ್ರಿನಾಗೆ ಸಲ್ಮಾನ್​ ಹಾಗೂ ರಣಬೀರ್​ ಇಬ್ಬರಿಂದಲೂ ಉಡುಗೊರೆ ಸಿಕ್ಕಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಸಲ್ಮಾನ್​ ಖಾನ್​ ಅವರು ಕತ್ರಿನಾಗೆ 3 ಕೋಟಿ ರೂಪಾಯಿ ಮೌಲ್ಯದ ರೇಂಜ್​ ರೋವರ್ ಕಾರನ್ನು ನೀಡಿದ್ದಾರೆ ಎಂದು ವರದಿ ಆಗಿದೆ. ಈ ಮೂಲಕ ಸಲ್ಮಾನ್​ ಖಾನ್​ ಅವರು ವಿಕ್ಕಿ ಹಾಗೂ ಕತ್ರಿನಾಗೆ ವಿಶೇಷವಾಗಿ ವಿಶ್​ ಮಾಡಿದ್ದಾರೆ. ಅಲ್ಲದೆ, ಕತ್ರಿನಾ ಬಗ್ಗೆ ಇರುವ ಫ್ರೆಂಡ್​ಶಿಪ್​ಅನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅಂದಹಾಗೆ, ಕತ್ರಿನಾ ಮತ್ತು ವಿಕ್ಕಿ ಮದುವೆ ಆಗುತ್ತಿದ್ದಂತೆ ಸಲ್ಲು ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿದ್ದವು. ಆದರೆ, ಆ ಬಗ್ಗೆ ಸಲ್ಮಾನ್​ ತಲೆಕೆಡಿಸಿಕೊಂಡಿಲ್ಲ. ಬದಲಿಗೆ ದುಬಾರಿ ಗಿಫ್ಟ್​ ನೀಡಿದ್ದಾರೆ.

ಇನ್ನು, ರಣಬೀರ್​ ಹಾಗೂ ಕತ್ರಿನಾ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ಇವರ ನಡುವೆ ಈಗ ಫ್ರೆಂಡ್​ಶಿಪ್​ ಕೂಡ ಉಳಿದಿಲ್ಲ ಎ್ನಲಾಗಿತ್ತು. ಆದರೆ, ಈಗ ಅಚ್ಚರಿ ಎಂಬಂತೆ ರಣಬೀರ್ ಅವರು 2.7 ಕೋಟಿ ಮೌಲ್ಯದ ಡೈಮಂಡ್​ ನೆಕ್ಲೇಸ್​ ಗಿಫ್ಟ್​ ಮಾಡಿದ್ದಾರೆ ಎನ್ನಲಾಗಿದೆ. ಇದನ್ನು ಕೇಳಿ ಫ್ಯಾನ್ಸ್​ ಅಚ್ಚರಿ ಹೊರಹಾಕಿದ್ದಾರೆ.  ಆದರೆ, ಈ ಬಗ್ಗೆ ನವದಂಪತಿಯಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ನಾಲ್ಕೇ ದಿನಕ್ಕೆ ಹನಿಮೂನ್​ ಮುಗಿಸಿ ವಾಪಸ್​ ಬಂದ ವಿಕ್ಕಿ ಕೌಶಲ್​-ಕತ್ರಿನಾ ಕೈಫ್​; ಕಾರಣ ಏನು?

Katrina Kaif: ಮದುವೆಗೂ ಮುನ್ನ ವಿಕ್ಕಿ ಕೌಶಲ್​ಗೆ ಒಂದೇ ಒಂದು ಷರತ್ತು ವಿಧಿಸಿದ್ದರಂತೆ ಕತ್ರಿನಾ; ಏನದು?

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ