AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್, ಸಂಜಯ್ ದತ್ ಹೊಸ ಸಿನಿಮಾಗೆ ‘ಗಂಗಾ ರಾಮ್’ ಶೀರ್ಷಿಕೆ?

ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರು ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸಲಿದ್ದಾರೆ. ಆ ಚಿತ್ರದ ಶೀರ್ಷಿಕೆ ಬಗ್ಗೆಯೂ ಸುದ್ದಿ ಬಹಿರಂಗ ಆಗಿದೆ. ಹೊಸ ಡೈರೆಕ್ಟರ್ ಕ್ರಿಶ್ ಆಹಿರ್ ಅವರು ನಿರ್ದೇಶನ ಮಾಡಲಿದ್ದಾರೆ. ಸಲ್ಮಾನ್ ಖಾನ್ ಅವರ ನಿರ್ಮಾಣ ಸಂಸ್ಥೆಯೇ ಬಂಡವಾಳ ಹೂಡಲಿದೆ.

ಸಲ್ಮಾನ್ ಖಾನ್, ಸಂಜಯ್ ದತ್ ಹೊಸ ಸಿನಿಮಾಗೆ ‘ಗಂಗಾ ರಾಮ್’ ಶೀರ್ಷಿಕೆ?
Salman Khan, Sanjay Dutt
ಮದನ್​ ಕುಮಾರ್​
|

Updated on: Apr 02, 2025 | 5:27 PM

Share

ನಟ ಸಲ್ಮಾನ್ ಖಾನ್ ಅವರ ‘ಸಿಕಂದರ್’  (Sikandar) ಸಿನಿಮಾಗೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗುತ್ತಿಲ್ಲ. ಹಾಗಾಗಿ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಹಾಗಂತ ಬೇಸರ ಮಾಡಿಕೊಂಡೇ ಕೂರಲು ಸಾಧ್ಯವಿಲ್ಲ. ಮುಂದಿನ ಸಿನಿಮಾ ಮೇಲೆ ಗಮನ ಹರಿಸಲೇಬೇಕು. ಸಲ್ಮಾನ್ ಖಾನ್ (Salman Khan) ಅವರ ಹೊಸ ಸಿನಿಮಾ ಬಗ್ಗೆ ಈಗ ಒಂದು ಅಪ್​ಡೇಟ್ ಸಿಕ್ಕಿದೆ. ಸಂಜಯ್ ದತ್ (Sanjay Dutt) ಜೊತೆ ಸಲ್ಮಾನ್ ಖಾನ್ ಅವರು ಸಿನಿಮಾ ಮಾಡುವುದು ಖಚಿತ ಆಗಿದೆ. ಆ ಸಿನಿಮಾದ ಟೈಟಲ್ ಬಗ್ಗೆಯೂ ಈಗ ಮಾಹಿತಿ ಕೇಳಿಬಂದಿದೆ. ‘ಗಂಗಾ ರಾಮ್’ ಎಂದು ಈ ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

‘ಚಲ್ ಮೇರೆ ಭಾಯ್’, ‘ಸಾಜನ್’ ಮುಂತಾದ ಸಿನಿಮಾಗಳಲ್ಲಿ ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರು ಜೊತೆಯಾಗಿ ಅಭಿನಯಿಸಿದ್ದರು. ಹಲವು ವರ್ಷಗಳ ಬಳಿಕ ಅವರು ಮತ್ತೆ ಜೊತೆಯಾಗಿ ನಟಿಸುತ್ತಾರೆ ಎಂಬುದನ್ನು ತಿಳಿದು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇದು ಒಂದು ಆ್ಯಕ್ಷನ್ ಸಿನಿಮಾ ಆಗಿರಲಿದ್ದು, ಹೊಸ ನಿರ್ದೇಶಕ ಕ್ರಿಶ್ ಆಹಿರ್ ಅವರು ಆ್ಯಕ್ಷನ್-ಕಟ್ ಹೇಳಲಿದ್ದಾರೆ.

ಸಲ್ಮಾನ್ ಖಾನ್ ಅವರ ನಿರ್ಮಾಣ ಸಂಸ್ಥೆಯಿಂದಲೇ ‘ಗಂಗಾ ರಾಮ್’ ಸಿನಿಮಾ ನಿರ್ಮಾಣ ಆಗಲಿದೆ. ಈ ಕಥೆಗೆ ದೊಡ್ಡ ಬಜೆಟ್ ಬೇಕಿರುವುದರಿಂದ ಇನ್ನೊಂದು ನಿರ್ಮಾಣ ಸಂಸ್ಥೆಯ ಜೊತೆಗೆ ಕೈ ಜೋಡಿಸಲು ಸಲ್ಮಾನ್ ಖಾನ್ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಆದರೆ ‘ಗಂಗಾ ರಾಮ್’ ಎಂಬ ಟೈಟಲ್ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ನಿರ್ದೇಶಕ ಕ್ರಿಶ್ ಆಹಿರ್ ಅವರು ಕಳೆದ 5 ವರ್ಷಗಳಿಂದ ಸಲ್ಮಾನ್ ಖಾನ್ ಅವರ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಕಾಂಬಿನೇಷನ್​ನ ಸಿನಿಮಾಗೆ ಅವರು ಭರ್ಜರಿಯಾದ ಕಥೆ ಸಿದ್ಧಪಡಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಇಬ್ಬರು ಹೀರೋಗಳ ಪಾತ್ರ ಆಲ್ಫಾ ಮೇಲ್ ರೀತಿ ಇರಲಿದೆ ಮಾಹಿತಿ ಕೇಳಿಬಂದಿದೆ. ಜೂನ್ ಅಥವಾ ಜುಲೈನಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಲಿದೆ.

ಇದನ್ನೂ ಓದಿ: ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್; ಮೂರು ದಿನದ ಗಳಿಕೆ ಇಷ್ಟೇನಾ?

ಇತ್ತೀಚೆಗೆ ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಇನ್ನೊಂದು ಭರ್ಜರಿ ಸುದ್ದಿ ಸಿಕ್ಕಿತ್ತು. ಹಾಲಿವುಡ್​ನ ಸಿನಿಮಾವೊಂದರಲ್ಲಿ ಅವರಿಬ್ಬರು ಅತಿಥಿ ಪಾತ್ರ ಮಾಡಿದ್ದಾರೆ. ಕೆಲವೇ ದಿನಗಳ ಹಿಂದೆ ದುಬೈನಲ್ಲಿ ಆ ಚಿತ್ರದ ಶೂಟಿಂಗ್ ನಡೆದಿತ್ತು. ಆ ಬಗ್ಗೆ ಕೂಡ ಅಪ್​ಡೇಟ್ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?