Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್, ಸಂಜಯ್ ದತ್ ಹೊಸ ಸಿನಿಮಾಗೆ ‘ಗಂಗಾ ರಾಮ್’ ಶೀರ್ಷಿಕೆ?

ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರು ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸಲಿದ್ದಾರೆ. ಆ ಚಿತ್ರದ ಶೀರ್ಷಿಕೆ ಬಗ್ಗೆಯೂ ಸುದ್ದಿ ಬಹಿರಂಗ ಆಗಿದೆ. ಹೊಸ ಡೈರೆಕ್ಟರ್ ಕ್ರಿಶ್ ಆಹಿರ್ ಅವರು ನಿರ್ದೇಶನ ಮಾಡಲಿದ್ದಾರೆ. ಸಲ್ಮಾನ್ ಖಾನ್ ಅವರ ನಿರ್ಮಾಣ ಸಂಸ್ಥೆಯೇ ಬಂಡವಾಳ ಹೂಡಲಿದೆ.

ಸಲ್ಮಾನ್ ಖಾನ್, ಸಂಜಯ್ ದತ್ ಹೊಸ ಸಿನಿಮಾಗೆ ‘ಗಂಗಾ ರಾಮ್’ ಶೀರ್ಷಿಕೆ?
Salman Khan, Sanjay Dutt
Follow us
ಮದನ್​ ಕುಮಾರ್​
|

Updated on: Apr 02, 2025 | 5:27 PM

ನಟ ಸಲ್ಮಾನ್ ಖಾನ್ ಅವರ ‘ಸಿಕಂದರ್’  (Sikandar) ಸಿನಿಮಾಗೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗುತ್ತಿಲ್ಲ. ಹಾಗಾಗಿ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಹಾಗಂತ ಬೇಸರ ಮಾಡಿಕೊಂಡೇ ಕೂರಲು ಸಾಧ್ಯವಿಲ್ಲ. ಮುಂದಿನ ಸಿನಿಮಾ ಮೇಲೆ ಗಮನ ಹರಿಸಲೇಬೇಕು. ಸಲ್ಮಾನ್ ಖಾನ್ (Salman Khan) ಅವರ ಹೊಸ ಸಿನಿಮಾ ಬಗ್ಗೆ ಈಗ ಒಂದು ಅಪ್​ಡೇಟ್ ಸಿಕ್ಕಿದೆ. ಸಂಜಯ್ ದತ್ (Sanjay Dutt) ಜೊತೆ ಸಲ್ಮಾನ್ ಖಾನ್ ಅವರು ಸಿನಿಮಾ ಮಾಡುವುದು ಖಚಿತ ಆಗಿದೆ. ಆ ಸಿನಿಮಾದ ಟೈಟಲ್ ಬಗ್ಗೆಯೂ ಈಗ ಮಾಹಿತಿ ಕೇಳಿಬಂದಿದೆ. ‘ಗಂಗಾ ರಾಮ್’ ಎಂದು ಈ ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

‘ಚಲ್ ಮೇರೆ ಭಾಯ್’, ‘ಸಾಜನ್’ ಮುಂತಾದ ಸಿನಿಮಾಗಳಲ್ಲಿ ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರು ಜೊತೆಯಾಗಿ ಅಭಿನಯಿಸಿದ್ದರು. ಹಲವು ವರ್ಷಗಳ ಬಳಿಕ ಅವರು ಮತ್ತೆ ಜೊತೆಯಾಗಿ ನಟಿಸುತ್ತಾರೆ ಎಂಬುದನ್ನು ತಿಳಿದು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇದು ಒಂದು ಆ್ಯಕ್ಷನ್ ಸಿನಿಮಾ ಆಗಿರಲಿದ್ದು, ಹೊಸ ನಿರ್ದೇಶಕ ಕ್ರಿಶ್ ಆಹಿರ್ ಅವರು ಆ್ಯಕ್ಷನ್-ಕಟ್ ಹೇಳಲಿದ್ದಾರೆ.

ಸಲ್ಮಾನ್ ಖಾನ್ ಅವರ ನಿರ್ಮಾಣ ಸಂಸ್ಥೆಯಿಂದಲೇ ‘ಗಂಗಾ ರಾಮ್’ ಸಿನಿಮಾ ನಿರ್ಮಾಣ ಆಗಲಿದೆ. ಈ ಕಥೆಗೆ ದೊಡ್ಡ ಬಜೆಟ್ ಬೇಕಿರುವುದರಿಂದ ಇನ್ನೊಂದು ನಿರ್ಮಾಣ ಸಂಸ್ಥೆಯ ಜೊತೆಗೆ ಕೈ ಜೋಡಿಸಲು ಸಲ್ಮಾನ್ ಖಾನ್ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಆದರೆ ‘ಗಂಗಾ ರಾಮ್’ ಎಂಬ ಟೈಟಲ್ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ನಿರ್ದೇಶಕ ಕ್ರಿಶ್ ಆಹಿರ್ ಅವರು ಕಳೆದ 5 ವರ್ಷಗಳಿಂದ ಸಲ್ಮಾನ್ ಖಾನ್ ಅವರ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್ ಕಾಂಬಿನೇಷನ್​ನ ಸಿನಿಮಾಗೆ ಅವರು ಭರ್ಜರಿಯಾದ ಕಥೆ ಸಿದ್ಧಪಡಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಇಬ್ಬರು ಹೀರೋಗಳ ಪಾತ್ರ ಆಲ್ಫಾ ಮೇಲ್ ರೀತಿ ಇರಲಿದೆ ಮಾಹಿತಿ ಕೇಳಿಬಂದಿದೆ. ಜೂನ್ ಅಥವಾ ಜುಲೈನಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಲಿದೆ.

ಇದನ್ನೂ ಓದಿ: ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್; ಮೂರು ದಿನದ ಗಳಿಕೆ ಇಷ್ಟೇನಾ?

ಇತ್ತೀಚೆಗೆ ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಇನ್ನೊಂದು ಭರ್ಜರಿ ಸುದ್ದಿ ಸಿಕ್ಕಿತ್ತು. ಹಾಲಿವುಡ್​ನ ಸಿನಿಮಾವೊಂದರಲ್ಲಿ ಅವರಿಬ್ಬರು ಅತಿಥಿ ಪಾತ್ರ ಮಾಡಿದ್ದಾರೆ. ಕೆಲವೇ ದಿನಗಳ ಹಿಂದೆ ದುಬೈನಲ್ಲಿ ಆ ಚಿತ್ರದ ಶೂಟಿಂಗ್ ನಡೆದಿತ್ತು. ಆ ಬಗ್ಗೆ ಕೂಡ ಅಪ್​ಡೇಟ್ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!