AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲ್ಮಾನ್ ಖಾನ್, ಶಾರುಖ್ ಮಗ ಡ್ರಗ್ಸ್ ತೆಗೆದುಕೊಳ್ತಾರೆ’; ನೇರವಾಗಿ ಆರೋಪ ಮಾಡಿದ ಬಾಬಾ ರಾಮ್​ದೇವ್

ಬಾ ರಾಮ್​ದೇವ್ ಅವರು ಮಾಡಿದ ಆರೋಪದಿಂದ ಮತ್ತೆ ಡ್ರಗ್ಸ್ ವಿಚಾರ ಚರ್ಚೆಗೆ ಬಂದಿದೆ. ಇಷ್ಟು ಪ್ರಭಾವಿ ವ್ಯಕ್ತಿ ಈ ರೀತಿ ಆರೋಪ ಮಾಡಿರುವುದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

‘ಸಲ್ಮಾನ್ ಖಾನ್, ಶಾರುಖ್ ಮಗ ಡ್ರಗ್ಸ್ ತೆಗೆದುಕೊಳ್ತಾರೆ’; ನೇರವಾಗಿ ಆರೋಪ ಮಾಡಿದ ಬಾಬಾ ರಾಮ್​ದೇವ್
ಆರ್ಯನ್​-ರಾಮ್​​ದೇವ್​-ಸಲ್ಮಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 17, 2022 | 2:31 PM

Share

ಚಿತ್ರರಂಗದಲ್ಲಿ ಡ್ರಗ್ಸ್ ವಿಚಾರ ಆಗಾಗ ಚರ್ಚೆಗೆ ಬರುತ್ತಲೇ ಇದೆ. ಅನೇಕರು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿದ್ದಾರೆ, ಇನ್ನೂ ಕೆಲವರ ಹೆಸರು ಡ್ರಗ್ಸ್ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದೆ. ಖ್ಯಾತ ಬಾಲಿವುಡ್ (Bollywood News)​ ಸ್ಟಾರ್ ನಟರು ಹಾಗೂ ಅವರ ಮಕ್ಕಳ ಹೆಸರಿಗೂ ಮಾದಕ ದ್ರವ್ಯ ಪ್ರಕರಣಕ್ಕೂ ಸಂಬಂಧ ಕಲ್ಪಿಸಲಾಗಿದೆ. ಸಿನಿಮಾ ರಂಗದ ಅನೇಕರು ಈ ಬಗ್ಗೆ ವಿಚಾರಣೆ ಎದುರಿಸಿದ್ದಾರೆ. ಈಗ ಯೋಗ ಗುರು ಬಾಬಾ ರಾಮ್​​ದೇವ್ (Baba Ramdev) ಅವರು ಈ ಪ್ರಕರಣದಲ್ಲಿ ಹಲವು ನೇರ ಆರೋಪಗಳನ್ನು ಮಾಡಿದ್ದಾರೆ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿದೆ.

ಬಾಬಾ ರಾಮ್​ದೇವ್ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರು ಯೋಗ ಗುರು ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ದೊಡ್ಡ ಸಂಖ್ಯೆಯಲ್ಲಿ ಹಿಂಬಾಲಕರಿದ್ದಾರೆ. ಈಗ ಬಾಬಾ ರಾಮ್​ದೇವ್ ಅವರು ಮಾಡಿದ ಆರೋಪದಿಂದ ಮತ್ತೆ ಡ್ರಗ್ಸ್ ವಿಚಾರ ಚರ್ಚೆಗೆ ಬಂದಿದೆ. ಇಷ್ಟು ಪ್ರಭಾವಿ ವ್ಯಕ್ತಿ ಈ ರೀತಿ ಆರೋಪ ಮಾಡಿರುವುದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಬಾಲಿವುಡ್​ನಲ್ಲಿ ಯಾರು ಯಾರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ರಾಮ್​ದೇವ್ ರಿವೀಲ್ ಮಾಡಿದ್ದಾರೆ. ‘ಸಲ್ಮಾನ್ ಖಾನ್ ಡ್ರಗ್ಸ್ ತೆಗೆದುಕೊಳ್ಳುತ್ತಾರೆ. ಆಮಿರ್ ಖಾನ್ ಬಗ್ಗೆ ನನಗೆ ಗೊತ್ತಿಲ್ಲ. ಶಾರುಖ್ ಖಾನ್ ಮಗ ಡ್ರಗ್ಸ್ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದು ಜೈಲು ಸೇರಿದ. ನಟಿಯರ ವಿಚಾರಕ್ಕೆ ಬರೋದಾದರೆ, ಯಾರ್ಯಾರು ಮಾದಕ ದ್ರವ್ಯ ತೆಗೆದುಕೊಳ್ಳುತ್ತಾರೆ ಅನ್ನೋದು ದೇವರಿಗೆ ಗೊತ್ತು’ ಎಂದು ಹೇಳಿದ್ದಾರೆ ಅವರು.

ರಾಮ್​ದೇವ್ ಆರೋಪ ಇಷ್ಟಕ್ಕೆ ಮುಗಿದಿಲ್ಲ. ‘ಸಿನಿಮಾ ರಂಗದಲ್ಲಿ ಡ್ರಗ್ಸ್ ಇದೆ. ರಾಜಕೀಯದಲ್ಲೂ ಇದೆ. ಚುನಾವಣೆ ಸಂದರ್ಭದಲ್ಲಿ ಮದ್ಯ ಪೂರೈಕೆ ಆಗುತ್ತದೆ. ನಾವು ಮಾದಕ ದ್ರವ್ಯ ಮುಕ್ತ ಭಾರತವನ್ನು ಸೃಷ್ಟಿ ಮಾಡಲು ಕ್ರಾಂತಿ ಹುಟ್ಟು ಹಾಕಬೇಕು. ಇದಕ್ಕಾಗಿ ನಾವು ಆಂದೋಲನ ಆರಂಭಿಸುತ್ತಿದ್ದೇವೆ’ ಎಂದಿದ್ದಾರೆ ರಾಮ್​ದೇವ್​.

ಸದ್ಯ ರಾಮ್​ದೇವ್ ಹೇಳಿಕೆಗೆ ನಾನಾ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ‘ರಾಮ್​ದೇವ್​ ಅವರು ಸತ್ಯವನ್ನು ಧೈರ್ಯದಿಂದ ಹೇಳಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಅವರ ಹೇಳಿಕೆಯನ್ನು ವಿರೋಧಿಸಿದ್ದಾರೆ. ‘ಸಾಕ್ಷ್ಯ ಇಲ್ಲದೆ ಈ ರೀತಿ ಹೇಳಿಕೆ ನೀಡೋದು ಎಷ್ಟು ಸರಿ’ ಎಂದು ಪ್ರಶ್ನೆ ಮಾಡಿದ್ದಾರೆ.

Published On - 2:29 pm, Mon, 17 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ