AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಪರ್ಸೆಂಟ್​ ಡೀಲ್​ಗೆ ಒಪ್ಪಿಕೊಂಡ ಶಾರುಖ್​, ಸಲ್ಮಾನ್​? ಭರ್ಜರಿ ಲಾಭ ಮಾಡಲು ಸಜ್ಜಾದ ನಟರು

Tiger vs Pathaan: ಕೆಲವು ಹೀರೋಗಳು ಸಂಭಾವನೆ ಪಡೆಯುವ ಬದಲು ಲಾಭದಲ್ಲಿ ಶೇಕಡವಾರು ಪಾಲು ಪಡೆಯುತ್ತಾರೆ. ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಕೂಡ ಇದಕ್ಕೆ ಹೊರತಲ್ಲ.

40 ಪರ್ಸೆಂಟ್​ ಡೀಲ್​ಗೆ ಒಪ್ಪಿಕೊಂಡ ಶಾರುಖ್​, ಸಲ್ಮಾನ್​? ಭರ್ಜರಿ ಲಾಭ ಮಾಡಲು ಸಜ್ಜಾದ ನಟರು
ಸಲ್ಮಾನ್ ಖಾನ್, ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on: Apr 11, 2023 | 7:15 AM

ನಟ ಶಾರುಖ್​ ಖಾನ್​ (Shah Rukh Khan) ಅವರು ಹಲವು ವರ್ಷಗಳಿಂದ ಸೋಲು ಕಾಣುತ್ತ ಬಂದಿದ್ದರು. ಆದರೆ ‘ಪಠಾಣ್​’ ಚಿತ್ರದಿಂದ ಅವರು ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಿದರು. ಜನವರಿ 25ರಂದು ಬಿಡುಗಡೆಯಾಗಿ ಬ್ಲಾಕ್​ ಬಸ್ಟರ್​ ಹಿಟ್​ ಆದ ಈ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅತಿಥಿ ಪಾತ್ರ ಮಾಡುವ ಮೂಲಕ ಅಭಿಮಾನಿಗಳಿಗೆ ಸಖತ್​ ಮನರಂಜನೆ ನೀಡಿದರು. ಈಗ ಅವರ ನಾಯಕತ್ವದಲ್ಲಿ ಮೂಡಿಬರುತ್ತಿರುವ ‘ಟೈಗರ್​ 3’ ಚಿತ್ರದಲ್ಲಿ ಶಾರುಖ್​ ಖಾನ್​ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ. ಅದಕ್ಕಿಂತಲೂ ಇಂಟರೆಸ್ಟಿಂಗ್​ ವಿಚಾರ ಏನೆಂದರೆ, ಈ ಸ್ಟಾರ್​ ಕಲಾವಿದರಿಬ್ಬರು ‘ಟೈಗರ್​ ವರ್ಸಸ್​ ಪಠಾಣ್​’ (Tiger vs Pathaan) ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ. ಈ ಸಿನಿಮಾದ ಸಂಭಾವನೆಗೆ ಸಂಬಂಧಿಸಿದಂತೆ ಬಿಟೌನ್​ ಅಂಗಳದಲ್ಲಿ ಗುಸುಗುಸು ಕೇಳಿಬರುತ್ತಿದೆ. ಸಂಭಾವನೆ ಬದಲು 40 ಪರ್ಸೆಂಟ್​ ಸೂತ್ರ ಅನುಸರಿಸಲು ಸಲ್ಮಾನ್​ ಖಾನ್​ (Salman Khan) ಮತ್ತು ಶಾರುಖ್​ ಖಾನ್​ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

ಅನೇಕ ಹೀರೋಗಳು ನೇರವಾಗಿ ಸಂಭಾವನೆ ಪಡೆಯುವ ಬದಲು ಬಂದ ಲಾಭದಲ್ಲಿ ಶೇಕಡವಾರು ಪಾಲು ಪಡೆಯುವ ಪದ್ಧತಿ ಇಟ್ಟುಕೊಂಡಿದ್ದಾರೆ. ‘ಟೈಗರ್​ ವರ್ಸಸ್​ ಪಠಾಣ್​’ ಚಿತ್ರದಲ್ಲಿ ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರು ತಲಾ 40 ಪರ್ಸೆಂಟ್​ ಲಾಭ ಪಡೆಯಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಹರಡಿದೆ. ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆಯು ಈ ಚಿತ್ರಕ್ಕೆ ಬಂಡವಾಳ ಹೂಡಲಿದೆ. ಬಂದ ಲಾಭದಲ್ಲಿ ಈ ಸಂಸ್ಥೆಗೆ ಶೇಕಡ 20ರಷ್ಟು ಪಾಲು ಸೇರಲಿದೆ.

ಇದನ್ನೂ ಓದಿ: Time 100 Reader Poll: ವಿಶ್ವದ ನೂರು ಪ್ರಭಾವಿ ವ್ಯಕ್ತಿಗಳಲ್ಲಿ ಶಾರುಖ್​ ಖಾನ್​ ನಂ.1; ಮೆಸ್ಸಿಯನ್ನೂ ಮೀರಿಸಿದ ‘ಪಠಾಣ್​’ ಹೀರೋ

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಈ ಲೆಕ್ಕಚಾರದ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಆದರೂ ಸಹ ಇಂಥದ್ದೊಂದು ಸುದ್ದಿ ಹರಿದಾಡುತ್ತಿದೆ. ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇಬ್ಬರಿಗೂ ಸಖತ್​ ಬೇಡಿಕೆ ಇದೆ. ಒಂದೇ ಸಿನಿಮಾದಲ್ಲಿ ಇಬ್ಬರೂ ಮುಖ್ಯ ಪಾತ್ರಗಳನ್ನು ಮಾಡುತ್ತಾರೆ ಎಂದಾಗ ಯಾರಿಗೆ ಹೆಚ್ಚು ಸಂಭಾವನೆ ಕೊಡಬೇಕು ಎಂದು ನಿರ್ಮಾಪಕರು ತಲೆ ಬಿಸಿ ಮಾಡಿಕೊಳ್ಳಬೇಕಾಗುತ್ತದೆ. ಅದರ ಬದಲು ಲಾಭದಲ್ಲಿ ಶೇಕಡವಾರು ಹಂಚಿಕೆ ಮಾಡುವುದೇ ಉತ್ತಮ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ

‘ಟೈಗರ್​ ವರ್ಸಸ್​ ಪಠಾಣ್​’ ಸಿನಿಮಾ ಸೆಟ್ಟೇರಲು ಇನ್ನೂ ಸಾಕಷ್ಟು ಸಮಯ ಇದೆ. ಸದ್ಯಕ್ಕೆ ಸಲ್ಮಾನ್​ ಖಾನ್​ ಅವರು ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಚಿತ್ರದ ಬಿಡುಗಡೆಗಾಗಿ ಕಾದಿದ್ದಾರೆ. ಈ ಸಿನಿಮಾ ಏಪ್ರಿಲ್​ 21ರಂದು ರಿಲೀ​ಸ್​ ಆಗಲಿದೆ. ಶಾರುಖ್​ ಖಾನ್​ ಅವರು ‘ಜವಾನ್​’ ಮತ್ತು ‘ಡಂಕಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ