AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸಾದ ತಂದೆ-ತಾಯಿಯ ಕಾರಿಗೆ ಅಡ್ಡ ಬಂದವರಿಗೆ ಎಚ್ಚರಿಕೆ ನೀಡಿದ ಸಲ್ಮಾನ್​ ಖಾನ್​

ಸಲ್ಮಾನ್​ ಖಾನ್​ ಅವರಿಗೆ ಜೀವ ಬೆದರಿಕೆ ಇದೆ. ಅವರ ಆಪ್ತರು ಕೂಡ ಭಯದಲ್ಲೇ ಒಡಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹಾಗಾಗಿ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಹೀಗಿರುವಾಗ ತಂದೆ-ತಾಯಿಯ ಕಾರಿಗೆ ಜನರು ಅಡ್ಡಬಂದಾಗ ಸಲ್ಲು ಸಹಜವಾಗಿಯೇ ಗರಂ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ವಯಸ್ಸಾದ ತಂದೆ-ತಾಯಿಯ ಕಾರಿಗೆ ಅಡ್ಡ ಬಂದವರಿಗೆ ಎಚ್ಚರಿಕೆ ನೀಡಿದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Dec 20, 2023 | 12:11 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರು ಎಲ್ಲಿಯೇ ಕಾಣಿಸಿದರೂ ಅವರ ಫೋಟೋ ಮತ್ತು ವಿಡಿಯೋ ಶೂಟ್​ ಮಾಡುವ ಸಲುವಾಗಿ ಪಾಪರಾಜಿಗಳು ಹಾಗೂ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಇದರಿಂದ ಸಲ್ಮಾನ್ ಖಾನ್​ ಅವರಿಗೆ ಹಲವು ಬಾರಿ ಕಿರಿಕಿರಿ ಆಗಿದ್ದುಂಟು. ಅಂಥ ಸಂದರ್ಭದಲ್ಲಿ ಸಲ್ಲು ತಾಳ್ಮೆ ಕಳೆದುಕೊಳ್ಳುತ್ತಾರೆ. ಇತ್ತೀಚೆಗೆ ಅವರು ಸಹೋದರ ಸೊಹೈಲ್​ ಖಾನ್​ ಜನ್ಮದಿನದ ಸಲುವಾಗಿ ಕುಟುಂಬ (Salman Khan Family) ಸಮೇತರಾಗಿ ಮುಂಬೈನ ರೆಸ್ಟೋರೆಂಟ್​ವೊಂದಕ್ಕೆ ತೆರಳಿದ್ದರು. ಆಗ ತಂದೆ-ತಾಯಿಯ ಕಾರಿಗೆ ಅಡ್ಡ ಬಂದ ಪಾಪರಾಜಿಗಳಿಗೆ ಸಲ್ಮಾನ್​ ಖಾನ್​ ಆವಾಜ್​ ಹಾಕಿದ್ದಾರೆ.

ಸಲ್ಮಾನ್​ ಖಾನ್​ ಅವರ ಪೋಷಕರಾದ ಸಲೀಮ್​ ಖಾನ್​, ಸಲ್ಮಾ ಖಾನ್​, ಹೆಲೆನ್​ ಅವರು ರೆಸ್ಟೋರೆಂಟ್​​ನಿಂದ ವಾಪಸ್​ ತೆರಳುವಾಗ ಅವರನ್ನು ಪಾಪರಾಜಿಗಳು ಮುತ್ತಿಗೆ ಹಾಕಿದರು. ತಂದೆ-ತಾಯಿಯನ್ನು ಕಾರಿನಲ್ಲಿ ಕೂರಿಸಲು ಬಂದ ಸಲ್ಮಾನ್​ ಖಾನ್​ಗೆ ಪಾಪರಾಜಿಗಳನ್ನು ಕಂಡು ಕೋಪಬಂತು. ‘ಸ್ವಲ್ಪ ಹಿಂದಕ್ಕೆ ಸರಿಯಿರಿ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಸಲ್ಮಾನ್​ ಖಾನ್​ ಅವರಿಗೆ ಜೀವ ಬೆದರಿಕೆ ಇದೆ. ಲಾರೆನ್ಸ್​ ಬಿಷ್ಣೋಯ್​, ಗೋಲ್ಡಿ ಬ್ರಾರ್​ ಮುಂತಾದ ಗ್ಯಾಂಗ್​ಸ್ಟರ್​ಗಳು ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಸಲ್ಮಾನ್​ ಖಾನ್​ ಅವರ ಆಪ್ತರು ಕೂಡ ಭಯದಲ್ಲೇ ಒಡಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹಾಗಾಗಿ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಹೀಗಿರುವಾಗ ತಂದೆ-ತಾಯಿಯ ಕಾರಿಗೆ ಜನರು ಅಡ್ಡಬಂದಾಗ ಸಲ್ಲು ಸಹಜವಾಗಿಯೇ ಗರಂ ಆಗಿದ್ದಾರೆ.

ಇದನ್ನೂ ಓದಿ: ‘ಸಾವಿಗೆ ವೀಸಾ ಇಲ್ಲ, ವಿದೇಶಕ್ಕೆ ಹೋದ್ರೂ ಬಿಡಲ್ಲ’; ಸಲ್ಮಾನ್ ಖಾನ್​ಗೆ ಮತ್ತೆ ಬಂತು ಬೆದರಿಕೆ

ಈ ವರ್ಷ ಸಲ್ಮಾನ್​ ಖಾನ್​ ನಟನೆಯ ‘ಟೈಗರ್​ 3’ ಸಿನಿಮಾ ಬಿಡುಗಡೆ ಆಯಿತು. ಈ ಸಿನಿಮಾದ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್​ ಆಗಲಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸಿನಿಮಾ ಮಾತ್ರವಲ್ಲದೇ ಹಿಂದಿಯ ಬಿಗ್​ ಬಾಸ್​ ರಿಯಾಲಿಟಿ ಶೋ ನಿರೂಪಣೆ ಮಾಡುವುದರಲ್ಲೂ ಸಲ್ಲು ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್