AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸಾದ ತಂದೆ-ತಾಯಿಯ ಕಾರಿಗೆ ಅಡ್ಡ ಬಂದವರಿಗೆ ಎಚ್ಚರಿಕೆ ನೀಡಿದ ಸಲ್ಮಾನ್​ ಖಾನ್​

ಸಲ್ಮಾನ್​ ಖಾನ್​ ಅವರಿಗೆ ಜೀವ ಬೆದರಿಕೆ ಇದೆ. ಅವರ ಆಪ್ತರು ಕೂಡ ಭಯದಲ್ಲೇ ಒಡಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹಾಗಾಗಿ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಹೀಗಿರುವಾಗ ತಂದೆ-ತಾಯಿಯ ಕಾರಿಗೆ ಜನರು ಅಡ್ಡಬಂದಾಗ ಸಲ್ಲು ಸಹಜವಾಗಿಯೇ ಗರಂ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ವಯಸ್ಸಾದ ತಂದೆ-ತಾಯಿಯ ಕಾರಿಗೆ ಅಡ್ಡ ಬಂದವರಿಗೆ ಎಚ್ಚರಿಕೆ ನೀಡಿದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Dec 20, 2023 | 12:11 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರು ಎಲ್ಲಿಯೇ ಕಾಣಿಸಿದರೂ ಅವರ ಫೋಟೋ ಮತ್ತು ವಿಡಿಯೋ ಶೂಟ್​ ಮಾಡುವ ಸಲುವಾಗಿ ಪಾಪರಾಜಿಗಳು ಹಾಗೂ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಇದರಿಂದ ಸಲ್ಮಾನ್ ಖಾನ್​ ಅವರಿಗೆ ಹಲವು ಬಾರಿ ಕಿರಿಕಿರಿ ಆಗಿದ್ದುಂಟು. ಅಂಥ ಸಂದರ್ಭದಲ್ಲಿ ಸಲ್ಲು ತಾಳ್ಮೆ ಕಳೆದುಕೊಳ್ಳುತ್ತಾರೆ. ಇತ್ತೀಚೆಗೆ ಅವರು ಸಹೋದರ ಸೊಹೈಲ್​ ಖಾನ್​ ಜನ್ಮದಿನದ ಸಲುವಾಗಿ ಕುಟುಂಬ (Salman Khan Family) ಸಮೇತರಾಗಿ ಮುಂಬೈನ ರೆಸ್ಟೋರೆಂಟ್​ವೊಂದಕ್ಕೆ ತೆರಳಿದ್ದರು. ಆಗ ತಂದೆ-ತಾಯಿಯ ಕಾರಿಗೆ ಅಡ್ಡ ಬಂದ ಪಾಪರಾಜಿಗಳಿಗೆ ಸಲ್ಮಾನ್​ ಖಾನ್​ ಆವಾಜ್​ ಹಾಕಿದ್ದಾರೆ.

ಸಲ್ಮಾನ್​ ಖಾನ್​ ಅವರ ಪೋಷಕರಾದ ಸಲೀಮ್​ ಖಾನ್​, ಸಲ್ಮಾ ಖಾನ್​, ಹೆಲೆನ್​ ಅವರು ರೆಸ್ಟೋರೆಂಟ್​​ನಿಂದ ವಾಪಸ್​ ತೆರಳುವಾಗ ಅವರನ್ನು ಪಾಪರಾಜಿಗಳು ಮುತ್ತಿಗೆ ಹಾಕಿದರು. ತಂದೆ-ತಾಯಿಯನ್ನು ಕಾರಿನಲ್ಲಿ ಕೂರಿಸಲು ಬಂದ ಸಲ್ಮಾನ್​ ಖಾನ್​ಗೆ ಪಾಪರಾಜಿಗಳನ್ನು ಕಂಡು ಕೋಪಬಂತು. ‘ಸ್ವಲ್ಪ ಹಿಂದಕ್ಕೆ ಸರಿಯಿರಿ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಸಲ್ಮಾನ್​ ಖಾನ್​ ಅವರಿಗೆ ಜೀವ ಬೆದರಿಕೆ ಇದೆ. ಲಾರೆನ್ಸ್​ ಬಿಷ್ಣೋಯ್​, ಗೋಲ್ಡಿ ಬ್ರಾರ್​ ಮುಂತಾದ ಗ್ಯಾಂಗ್​ಸ್ಟರ್​ಗಳು ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಸಲ್ಮಾನ್​ ಖಾನ್​ ಅವರ ಆಪ್ತರು ಕೂಡ ಭಯದಲ್ಲೇ ಒಡಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹಾಗಾಗಿ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಹೀಗಿರುವಾಗ ತಂದೆ-ತಾಯಿಯ ಕಾರಿಗೆ ಜನರು ಅಡ್ಡಬಂದಾಗ ಸಲ್ಲು ಸಹಜವಾಗಿಯೇ ಗರಂ ಆಗಿದ್ದಾರೆ.

ಇದನ್ನೂ ಓದಿ: ‘ಸಾವಿಗೆ ವೀಸಾ ಇಲ್ಲ, ವಿದೇಶಕ್ಕೆ ಹೋದ್ರೂ ಬಿಡಲ್ಲ’; ಸಲ್ಮಾನ್ ಖಾನ್​ಗೆ ಮತ್ತೆ ಬಂತು ಬೆದರಿಕೆ

ಈ ವರ್ಷ ಸಲ್ಮಾನ್​ ಖಾನ್​ ನಟನೆಯ ‘ಟೈಗರ್​ 3’ ಸಿನಿಮಾ ಬಿಡುಗಡೆ ಆಯಿತು. ಈ ಸಿನಿಮಾದ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್​ ಆಗಲಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸಿನಿಮಾ ಮಾತ್ರವಲ್ಲದೇ ಹಿಂದಿಯ ಬಿಗ್​ ಬಾಸ್​ ರಿಯಾಲಿಟಿ ಶೋ ನಿರೂಪಣೆ ಮಾಡುವುದರಲ್ಲೂ ಸಲ್ಲು ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ