‘ದೂರದಿಂದ ಸೆಲ್ಫಿ ತೆಗೆದುಕೊಳ್ಳೋದು ತಪ್ಪಾ?’; ಸಲ್ಮಾನ್ ಖಾನ್ ನಡೆಗೆ ಫ್ಯಾನ್ಸ್ ಆಕ್ರೋಶ

ಸಲ್ಮಾನ್ ಖಾನ್ ವಿಮಾನ ನಿಲ್ದಾಣದಿಂದ ಎಕ್ಸಿಟ್ ಆಗುತ್ತಿದ್ದರು. ಈ ವೇಳೆ ಅವರ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಸೆಲ್ಫಿ ವಿಡಿಯೋ ತೆಗೆದುಕೊಂಡಿದ್ದಾನೆ. ಕೂಲ್ ಆಗಿಯೇ ಬರುತ್ತಿದ್ದ ಸಲ್ಮಾನ್ ಖಾನ್ ಏಕಾಏಕಿ ಸಿಟ್ಟಾಗಿದ್ದಾರೆ. ಸೆಲ್ಫಿ ತೆಗೆದುಕೊಳ್ಳೋದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.

‘ದೂರದಿಂದ ಸೆಲ್ಫಿ ತೆಗೆದುಕೊಳ್ಳೋದು ತಪ್ಪಾ?’; ಸಲ್ಮಾನ್ ಖಾನ್ ನಡೆಗೆ ಫ್ಯಾನ್ಸ್ ಆಕ್ರೋಶ
ಸಲ್ಮಾನ್ ಖಾನ್
Follow us
|

Updated on: Mar 08, 2024 | 8:50 AM

ಸಲ್ಮಾನ್ ಖಾನ್ (Salman Khan) ಅವರು ಆಗಾಗ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ವೇಳೆ ಅವರ ಮೂಡ್ ಹೇಗೆ ಇರುತ್ತದೆ ಎನ್ನುವುದರ ಮೇಲೆ ಅವರ ರಿಯಾಕ್ಷನ್ ಇರುತ್ತದೆ. ಕೆಲವೊಮ್ಮೆ ಫ್ಯಾನ್ಸ್ ಸೆಲ್ಫಿ ಕೇಳಿದಾಗ ಖುಷಿ ಖುಷಿಯಿಂದ ಅವರು ಪೋಸ್ ನೀಡುತ್ತಾರೆ. ಆದರೆ, ಕೆಲವೊಮ್ಮೆ ಆ ರೀತಿ ಇರುವುದಿಲ್ಲ. ಅವರು ಸಖತ್ ಸಿಟ್ಟಲ್ಲೇ ರಿಯಾಕ್ಷನ್ ನೀಡುತ್ತಾರೆ. ಈಗಲೂ ಹಾಗೆಯೇ ಆಗಿದೆ. ದೂರದಿಂದ ಅಭಿಮಾನಿಯೋರ್ವ ಸೆಲ್ಫಿ ತೆಗೆದುಕೊಂಡಿದ್ದಾನೆ. ಇದಕ್ಕೂ ಅವರು ಗರಂ ಆಗಿದ್ದಾರೆ.

ಸಲ್ಮಾನ್ ಖಾನ್ ಅವರು ವಿಮಾನ ನಿಲ್ದಾಣದಿಂದ ಎಕ್ಸಿಟ್ ಆಗುತ್ತಿದ್ದರು. ಈ ವೇಳೆ ಅವರ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಸೆಲ್ಫಿ ವಿಡಿಯೋ ತೆಗೆದುಕೊಂಡಿದ್ದಾನೆ. ಕೂಲ್ ಆಗಿಯೇ ಬರುತ್ತಿದ್ದ ಸಲ್ಮಾನ್ ಖಾನ್ ಏಕಾಏಕಿ ಸಿಟ್ಟಾಗಿದ್ದಾರೆ. ಸೆಲ್ಫಿ ತೆಗೆದುಕೊಳ್ಳೋದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಅಭಿಮಾನಿ ದೂರ ಇದ್ದರೂ ಈ ರೀತಿ ಮಾಡಿದ್ದೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ.

ಇದನ್ನೂ ಓದಿ: ಸೋಲಿನ ಸುಳಿಯಿಂದ ಹೊರಬರಲು ದಕ್ಷಿಣ ಭಾರತ ನಿರ್ದೇಶಕನ ಮೊರೆ ಹೋದ ಸಲ್ಮಾನ್ ಖಾನ್

ಸದ್ಯ ವೈರಲ್ ಆಗುತ್ತಿರುವ ವಿಡಿಯೋನ ಅನೇಕರು ಪ್ರಶ್ನೆ ಮಾಡಿದ್ದಾರೆ. ‘ಅವರು ದೂರದಿಂದ ಸೆಲ್ಫಿ ತೆಗೆದುಕೊಳ್ಳೋದು ತಪ್ಪಾ? ಇದೇನಾ ನೀವು ಅಭಿಮಾನಿಗಳಿಗೆ ನೀಡೋ ಗೌರವ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಸಲ್ಲುನ ಬೆಂಬಲಿಸಿದ್ದಾರೆ. ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಇದೆ. ಹಿಗಾಗಿ ಅವರು ಹೆಚ್ಚು ಎಚ್ಚರಿಕೆಯಿಂದ ಇರಲು ಪ್ರಯತ್ನಿಸುತ್ತಿದ್ದಾರೆ. ಈ ಕಾರಣಕ್ಕೆ ಅವರ ಭದ್ರತಾ ಸಿಬ್ಬಂದಿ ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರೆ ಎಂದು ಕೆಲವರು ಹೇಳಿದ್ದಾರೆ.

Salman Khan angry at a fan who was trying to take a selfie video with him byu/KramerDwight inBollyBlindsNGossip

ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಅಂಬಾನಿ ಮಗ ಅನಂತ್ ಅಂಬಾನಿ ಅವರ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಲ್ಮಾನ್ ಖಾನ್, ಆಮಿರ್ ಖಾನ್ ಹಾಗೂ ಶಾರುಖ್ ಖಾನ್ ಒಟ್ಟಿಗೆ ಹಾಜರಿಹಾಕಿದ್ದರು. ಈ ವೇಳೆ ‘ಆರ್​ಆರ್​ಆರ್’ ಚಿತ್ರದ ಆಸ್ಕರ್ ವಿನ್ನಿಂಗ್ ಹಾಡು ‘ನಾಟು ನಾಟು..’ಗೆ ಇವರು ಹೆಜ್ಜೆ ಹಾಕಿ ಗಮನ ಸೆಳೆದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ