AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್​ ಅಬ್ರಾಹಂ ಎದುರು ತೊಡೆತಟ್ಟಿದ ಸಲ್ಮಾನ್​ ಖಾನ್​; ಗೆಲ್ಲೋರು ಯಾರು?

ಸಲ್ಲು ಸದ್ಯ ಕೆಲ ಸಿನಿಮಾಗಳ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ವೀಕೆಂಡ್​ನಲ್ಲಿ ಅವರು ಬಿಗ್​ ಬಾಸ್​ ನಡೆಸಿಕೊಡುತ್ತಿದ್ದಾರೆ. ಇವೆಲ್ಲವುಗಳ ನಡುವೆ ಸಿನಿಮಾ ಪ್ರಮೋಷನ್​ ಕಾರ್ಯದಲ್ಲೂ ಅವರು ತೊಡಗಿಕೊಂಡಿದ್ದಾರೆ.

ಜಾನ್​ ಅಬ್ರಾಹಂ ಎದುರು ತೊಡೆತಟ್ಟಿದ ಸಲ್ಮಾನ್​ ಖಾನ್​; ಗೆಲ್ಲೋರು ಯಾರು?
ಜಾನ್​ ಮತ್ತು ಸಲ್ಲು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 11, 2021 | 2:20 PM

Share

ಸಲ್ಮಾನ್​ ಖಾನ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತದೆ. ಸಲ್ಲು ಸಿನಿಮಾ ವಿಮರ್ಶೆಯಲ್ಲಿ ಸೋತ ಹೊರತಾಗಿಯೂ ನೂರು ಕೋಟಿ ರೂಪಾಯಿ ಗಳಿಕೆ ಮಾಡಿದ ಉದಾಹರಣೆ ಸಾಕಷ್ಟಿದೆ. ಈ ಕಾರಣಕ್ಕೆ ಸಲ್ಮಾನ್​ ಖಾನ್​​ ಚಿತ್ರದ ಎದುರು ಮತ್ತೊಂದು ಸಿನಿಮಾ ರಿಲೀಸ್ ​ಮಾಡೋಕೆ ಎಲ್ಲರೂ ಹಿಂದೇಟು ಹಾಕುತ್ತಾರೆ. ಆದರೆ ಈಗ ಸಲ್ಮಾನ್​ ಖಾನ್​ ಅವರೇ ಜಾನ್​ ಅಬ್ರಾಹಂ ಎದುರು ತೊಡೆ ತಟ್ಟಿದ್ದಾರೆ. ಇದರಲ್ಲಿ ಗೆಲ್ಲೋರು ಯಾರು ಎನ್ನುವ ಕುತೂಹಲ ಮೂಡಿದೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲಿ ಸಲ್ಲು ನಟಿಸಿದ್ದಾರೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ನವೆಂಬರ್ 26ರಂದು ತೆರೆಗೆ ಬರುತ್ತಿದೆ. ಅದೇ ದಿನ ಜಾನ್​ ಸಿನಿಮಾ ಕೂಡ ರಿಲೀಸ್​ ಆಗುತ್ತಿದೆ.

ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬರುತ್ತಿದೆ. ಈ ಚಿತ್ರ ನವೆಂಬರ್​ 26ರಂದು ರಿಲೀಸ್​ ಆಗುತ್ತಿದೆ. ಈಗ ಅದೇ ದಿನ ಸಲ್ಲು ಸಿನಿಮಾ ಕೂಡ ರಿಲೀಸ್​ ಆಗುತ್ತಿದೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾ ದೀಪಾವಳಿಗೆ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾದ ಕೆಲ ದೃಶ್ಯಗಳನ್ನು ರೀಶೂಟ್​ ಮಾಡಲಾಗಿದೆ. ಇದರ ಎಡಿಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಹೀಗಾಗಿ, ನವೆಂಬರ್ 26ಕ್ಕೆ ಸಿನಿಮಾ ರಿಲೀಸ್​ ಮಾಡುವ ಆಲೋಚನೆಯಲ್ಲಿ ಚಿತ್ರತಂಡವಿದೆ. ಈ ಕಾರಣಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಎರಡು ದೊಡ್ಡ ಸಿನಿಮಾಗಳು ಮುಖಾಮುಖಿ ಆಗುತ್ತಿವೆ.

ಸಲ್ಲು ಸದ್ಯ ಕೆಲ ಸಿನಿಮಾಗಳ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ವೀಕೆಂಡ್​ನಲ್ಲಿ ಅವರು ಬಿಗ್​ ಬಾಸ್​ ನಡೆಸಿಕೊಡುತ್ತಿದ್ದಾರೆ. ಇವೆಲ್ಲವುಗಳ ನಡುವೆ ಸಿನಿಮಾ ಪ್ರಮೋಷನ್​ ಕಾರ್ಯದಲ್ಲೂ ಅವರು ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಆರ್ಯನ್​ ಖಾನ್​ ಬಂಧನಕ್ಕೆ ಒಳಗಾದಾಗ ಅವರು ಶಾರುಖ್​ ಖಾನ್​ ಮನೆಗೆ ಭೇಟಿ ಕೊಟ್ಟಿದ್ದರು. ಇದು ಸಾಕಷ್ಟು ಸುದ್ದಿಯಾಗಿತ್ತು.

ಇದನ್ನೂ ಓದಿ: ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!