AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್​ ಅಬ್ರಾಹಂ ಎದುರು ತೊಡೆತಟ್ಟಿದ ಸಲ್ಮಾನ್​ ಖಾನ್​; ಗೆಲ್ಲೋರು ಯಾರು?

ಸಲ್ಲು ಸದ್ಯ ಕೆಲ ಸಿನಿಮಾಗಳ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ವೀಕೆಂಡ್​ನಲ್ಲಿ ಅವರು ಬಿಗ್​ ಬಾಸ್​ ನಡೆಸಿಕೊಡುತ್ತಿದ್ದಾರೆ. ಇವೆಲ್ಲವುಗಳ ನಡುವೆ ಸಿನಿಮಾ ಪ್ರಮೋಷನ್​ ಕಾರ್ಯದಲ್ಲೂ ಅವರು ತೊಡಗಿಕೊಂಡಿದ್ದಾರೆ.

ಜಾನ್​ ಅಬ್ರಾಹಂ ಎದುರು ತೊಡೆತಟ್ಟಿದ ಸಲ್ಮಾನ್​ ಖಾನ್​; ಗೆಲ್ಲೋರು ಯಾರು?
ಜಾನ್​ ಮತ್ತು ಸಲ್ಲು
TV9 Web
| Edited By: |

Updated on: Oct 11, 2021 | 2:20 PM

Share

ಸಲ್ಮಾನ್​ ಖಾನ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತದೆ. ಸಲ್ಲು ಸಿನಿಮಾ ವಿಮರ್ಶೆಯಲ್ಲಿ ಸೋತ ಹೊರತಾಗಿಯೂ ನೂರು ಕೋಟಿ ರೂಪಾಯಿ ಗಳಿಕೆ ಮಾಡಿದ ಉದಾಹರಣೆ ಸಾಕಷ್ಟಿದೆ. ಈ ಕಾರಣಕ್ಕೆ ಸಲ್ಮಾನ್​ ಖಾನ್​​ ಚಿತ್ರದ ಎದುರು ಮತ್ತೊಂದು ಸಿನಿಮಾ ರಿಲೀಸ್ ​ಮಾಡೋಕೆ ಎಲ್ಲರೂ ಹಿಂದೇಟು ಹಾಕುತ್ತಾರೆ. ಆದರೆ ಈಗ ಸಲ್ಮಾನ್​ ಖಾನ್​ ಅವರೇ ಜಾನ್​ ಅಬ್ರಾಹಂ ಎದುರು ತೊಡೆ ತಟ್ಟಿದ್ದಾರೆ. ಇದರಲ್ಲಿ ಗೆಲ್ಲೋರು ಯಾರು ಎನ್ನುವ ಕುತೂಹಲ ಮೂಡಿದೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲಿ ಸಲ್ಲು ನಟಿಸಿದ್ದಾರೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ನವೆಂಬರ್ 26ರಂದು ತೆರೆಗೆ ಬರುತ್ತಿದೆ. ಅದೇ ದಿನ ಜಾನ್​ ಸಿನಿಮಾ ಕೂಡ ರಿಲೀಸ್​ ಆಗುತ್ತಿದೆ.

ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬರುತ್ತಿದೆ. ಈ ಚಿತ್ರ ನವೆಂಬರ್​ 26ರಂದು ರಿಲೀಸ್​ ಆಗುತ್ತಿದೆ. ಈಗ ಅದೇ ದಿನ ಸಲ್ಲು ಸಿನಿಮಾ ಕೂಡ ರಿಲೀಸ್​ ಆಗುತ್ತಿದೆ.

‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾ ದೀಪಾವಳಿಗೆ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾದ ಕೆಲ ದೃಶ್ಯಗಳನ್ನು ರೀಶೂಟ್​ ಮಾಡಲಾಗಿದೆ. ಇದರ ಎಡಿಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಹೀಗಾಗಿ, ನವೆಂಬರ್ 26ಕ್ಕೆ ಸಿನಿಮಾ ರಿಲೀಸ್​ ಮಾಡುವ ಆಲೋಚನೆಯಲ್ಲಿ ಚಿತ್ರತಂಡವಿದೆ. ಈ ಕಾರಣಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಎರಡು ದೊಡ್ಡ ಸಿನಿಮಾಗಳು ಮುಖಾಮುಖಿ ಆಗುತ್ತಿವೆ.

ಸಲ್ಲು ಸದ್ಯ ಕೆಲ ಸಿನಿಮಾಗಳ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ವೀಕೆಂಡ್​ನಲ್ಲಿ ಅವರು ಬಿಗ್​ ಬಾಸ್​ ನಡೆಸಿಕೊಡುತ್ತಿದ್ದಾರೆ. ಇವೆಲ್ಲವುಗಳ ನಡುವೆ ಸಿನಿಮಾ ಪ್ರಮೋಷನ್​ ಕಾರ್ಯದಲ್ಲೂ ಅವರು ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಆರ್ಯನ್​ ಖಾನ್​ ಬಂಧನಕ್ಕೆ ಒಳಗಾದಾಗ ಅವರು ಶಾರುಖ್​ ಖಾನ್​ ಮನೆಗೆ ಭೇಟಿ ಕೊಟ್ಟಿದ್ದರು. ಇದು ಸಾಕಷ್ಟು ಸುದ್ದಿಯಾಗಿತ್ತು.

ಇದನ್ನೂ ಓದಿ: ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ