Salman Khan: ಸಲ್ಮಾನ್ ಖಾನ್ ಹೆಸರಲ್ಲಿ ವಂಚನೆ; ಎಚ್ಚರಿಕೆ ಕೊಟ್ಟ ಭಾಯಿಜಾನ್

‘ಸಲ್ಮಾನ್ ಖಾನ್ ಫಿಲ್ಮ್ಸ್’ ಪಾತ್ರಗಳ ಆಯ್ಕೆಗೆ ಕಾಲ್​ಫಾರ್ ಮಾಡಿದೆ ಎಂದು ಹೇಳಿ ವಂಚನೆ ಮಾಡಲಾಗುತ್ತಿದೆ. ಇಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಸಲ್ಮಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ.

Salman Khan: ಸಲ್ಮಾನ್ ಖಾನ್ ಹೆಸರಲ್ಲಿ ವಂಚನೆ; ಎಚ್ಚರಿಕೆ ಕೊಟ್ಟ ಭಾಯಿಜಾನ್
ಸಲ್ಮಾನ್ ಖಾನ್
Follow us
|

Updated on:Jan 31, 2024 | 11:13 AM

ಇತ್ತೀಚೆಗೆ ಸಿನಿಮಾ ಹೆಸರಲ್ಲಿ ವಂಚನೆ ಮಾಡುವವರ ಸಂಖ್ಯೆ ಹೆಚ್ಚಿದೆ. ಸಿನಿಮಾದಲ್ಲಿ ನಟಿಸೋ ಅವಕಾಶ ನೀಡುವುದಾಗಿ ಅನೇಕರನ್ನು ಮೋಸ ಮಾಡಿದ ಘಟನೆ ನಡೆದಿದೆ. ‘ಸಲ್ಮಾನ್ ಖಾನ್ ಫಿಲ್ಮ್ಸ್’ ಹೆಸರಲ್ಲೂ ಮೋಸ ನಡೆಯುತ್ತಿದೆ. ಈ ವಿಚಾರ ಸಲ್ಮಾನ್ ಖಾನ್ (Salman Khan) ಗಮನಕ್ಕೆ ಬಂದಿದೆ. ಹೀಗಾಗಿ ತಮ್ಮ ಹೆಸರನ್ನು ಬಳಕೆ ಮಾಡಿಕೊಂಡು ವಂಚನೆ ಮಾಡುವವರಿಗೆ ಸಲ್ಲು ಎಚ್ಚರಿಕೆ ನೀಡಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದೆ.

ಸಲ್ಮಾನ್ ಖಾನ್ ಅವರು ತಮ್ಮದೇ ಆದ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಇದರ ಅಡಿಯಲ್ಲಿ ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದಾರೆ. ‘ಸಲ್ಮಾನ್ ಖಾನ್ ಫಿಲ್ಮ್ಸ್’ ಪಾತ್ರಗಳ ಆಯ್ಕೆಗೆ ಕಾಲ್​ಫಾರ್ ಮಾಡಿದೆ ಎಂದು ಹೇಳಿ ವಂಚನೆ ಮಾಡಲಾಗುತ್ತಿತ್ತು. ಇಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಸಲ್ಮಾನ್ ಖಾನ್ ಹೇಳಿದ್ದಾರೆ. ಜೊತೆಗೆ ಯಾವುದೇ ಸಿನಿಮಾಗಳಿಗೆ ಪಾತ್ರಗಳ ಆಯ್ಕೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಸಲ್ಮಾನ್ ಖಾನ್ ಅವರಾಗಲೀ ಸಲ್ಮಾನ್ ಖಾನ್ ಫಿಲ್ಮ್ಸ್ ಕಡೆಯಿಂದಾಗಲೀ ಪಾತ್ರಕ್ಕಾಗಿ ಯಾರನ್ನೂ ಆಯ್ಕೆ ಮಾಡುತ್ತಿಲ್ಲ. ನಮ್ಮ ಮುಂದಿನ ಸಿನಿಮಾಗಳಿಗಾಗಿ ಕಲಾವಿದರನ್ನು ಆಯ್ಕೆ ಮಾಡಲು ನಾವು ಯಾವುದೇ ಏಜೆಂಟ್​ಗಳನ್ನು ನೇಮಕ ಮಾಡಿಕೊಂಡಿಲ್ಲ. ಈ ಉದ್ದೇಶದಿಂದ ಬರೋ ಮೆಸೇಜ್ ಹಾಗೂ ಇಮೇಲ್​ಗಳನ್ನು ನಂಬಬೇಡಿ. ಸಲ್ಮಾನ್ ಖಾನ್ ಹಾಗೂ ಅಥವಾ ಸಲ್ಮಾನ್ ಖಾನ್ ಫಿಲ್ಮ್ಸ್ ಹೆಸರು ಬಳಕೆ ಮಾಡಿಕೊಂಡಿದ್ದು ಕಂಡರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಬಜರಂಗಿ ಭಾಯಿಜಾನ್’, ‘ದಬಂಗ್ 3’, ‘ರೇಸ್ 3’, ‘ಹೀರೋ’, ‘ಟ್ಯೂಬ್​ಲೈಟ್​’, ‘ಲವ್​​ಯಾತ್ರಿ’, ‘ನೋಟ್​​ಬುಕ್’, ‘ಭಾರತ್’, ‘ರಾಧೆ’, ‘ಅಂತಿಮ್’, ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸೇರಿ ಅನೇಕ ಸಿನಿಮಾಗಳ ನಿರ್ಮಾಣದಲ್ಲಿ ಸಲ್ಮಾನ್ ಖಾನ್ ಅವರ ಪಾಲೂ ಇದೆ. ಕೆಲವು ಸಿನಿಮಾಗಳು ಲಾಭ ಕಂಡರೆ ಇನ್ನೂ ಕೆಲವು ಸೋತಿವೆ.

ಇದನ್ನೂ ಓದಿ: ಟ್ರೋಫಿ ಗೆದ್ದ ಬಳಿಕ ಸಲ್ಮಾನ್ ಖಾನ್ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಮುನಾವರ್

ಸಲ್ಮಾನ್ ಖಾನ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಟೈಗರ್ 3’ ಚಿತ್ರದಲ್ಲಿ. ಈ ಸಿನಿಮಾಗೆ ಕತ್ರಿನಾ ಕೈಫ್ ನಾಯಕಿ. ‘ಟೈಗರ್’ ಸಿನಿಮಾ ಸರಣಿಯ ಮೂರನೇ ಸಿನಿಮಾ ಇದು. ಇಮ್ರಾನ್ ಹಷ್ಮಿ ಅವರು ವಿಲನ್ ಪಾತ್ರ ಮಾಡಿ ಗಮನ ಸೆಳೆದಿದ್ದರು. ಸಲ್ಮಾನ್ ಖಾನ್ ಮುಂದಿನ ಚಿತ್ರಕ್ಕಾಗಿ ಕರಣ್ ಜೋಹರ್ ಜೊತೆ ಕೈ ಜೋಡಿಸುತ್ತಿದ್ದಾರೆ. ವಿಷ್ಣುವರ್ಧನ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನೈಜ ಘಟನೆ ಆಧರಿಸಿ ಸಿನಿಮಾ ಸಿದ್ಧಗೊಳ್ಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Wed, 31 January 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ