58ನೇ ವಯಸ್ಸಿನಲ್ಲೂ ಹೇಗಿದೆ ನೋಡಿ ಸಲ್ಮಾನ್ ಖಾನ್ ಫಿಟ್ನೆಸ್​; ಇಲ್ಲಿದೆ ಫೋಟೋ

ಸಲ್ಮಾನ್ ಖಾನ್ ಅವರು ಇತ್ತೀಚಿನ ವರ್ಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನು ನೀಡಿದ್ದಾರೆ. ಇದು ಅವರ ಚಿಂತೆಯನ್ನು ಹೆಚ್ಚು ಮಾಡಿದೆ. ಈ ಕಾರಣದಿಂದ ಅವರು ಈಗ ತಮಿಳು ನಿರ್ದೇಶಕ ಎಆರ್ ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ. ಅವರು ಬೀಸ್ಟ್ ಮೋಡ್​ನ ಆನ್ ಮಾಡಿದ್ದಾರೆ.

58ನೇ ವಯಸ್ಸಿನಲ್ಲೂ ಹೇಗಿದೆ ನೋಡಿ ಸಲ್ಮಾನ್ ಖಾನ್ ಫಿಟ್ನೆಸ್​; ಇಲ್ಲಿದೆ ಫೋಟೋ
ಸಲ್ಮಾನ್ ಖಾನ್
Follow us
|

Updated on: Sep 25, 2024 | 7:28 AM

ನಟ ಸಲ್ಮಾನ್ ಖಾನ್ ಅವರಿಗೆ ಈಗ 58 ವರ್ಷ ವಯಸ್ಸು. ಇನ್ನು ಕೆಲವೇ ತಿಂಗಳಲ್ಲಿ ಅವರು 59ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಈ ವಯಸ್ಸಲ್ಲೂ ಅವರು ಫಿಟ್ನೆಸ್​ಗೆ ಆದ್ಯತೆ ನೀಡುತ್ತಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ಸಿಖಂದರ್’ ಚಿತ್ರಕ್ಕಾಗಿ ಅವರು ಮಾಡಿಕೊಳ್ಳುತ್ತಿರುವ ಸಿದ್ಧತೆಯ ಫೋಟೋ ವೈರಲ್ ಆಗಿದೆ. ಇದರಲ್ಲಿ ಸಲ್ಮಾನ್ ಖಾನ್ ಅವರು ಸಖತ್ ಫಿಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅವರು ಇತ್ತೀಚಿನ ವರ್ಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನು ನೀಡಿದ್ದಾರೆ. ಇದು ಅವರ ಚಿಂತೆಯನ್ನು ಹೆಚ್ಚು ಮಾಡಿದೆ. ಈ ಕಾರಣದಿಂದ ಅವರು ಈಗ ತಮಿಳು ನಿರ್ದೇಶಕ ಎಆರ್ ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈ ಕಾರಣದಿಂದಲೇ ಇವರ ಜೊತೆ ಸಲ್ಲು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

‘ಸಿಖಂದರ್’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈ ರೀತಿಯ ಆ್ಯಕ್ಷನ್ ಇದೆ ಎನ್ನುವಾಗ ಸಾಕಷ್ಟು ಸಿದ್ಧತೆ ಬೇಕೇ ಬೇಕು. ದೇಹವನ್ನು ಹದಗೊಳಿಸುವ ಕಾರ್ಯದಲ್ಲಿ ಸಲ್ಮಾನ್ ಖಾನ್ ಅವರು ಬ್ಯುಸಿಯಾಗಿದ್ದಾರೆ. ಅವರ ಫಿಟ್ನೆಸ್ ಕಂಡು ಫ್ಯಾನ್ಸ್ ಕಣ್ಣರಳಿಸಿದ್ದಾರೆ. ಈ ಫೋಟೋ ಪೋಸ್ಟ್ ಆದ ಕೆಲವೇ ಗಂಟೆಗಳಲ್ಲಿ 8 ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬೀಸ್ಟ್ ಮೋಡ್. ನಿರಂತರ ಶ್ರಮಕ್ಕೆ ಇದು ಒಳ್ಳೆಯ ಉದಾಹರಣೆ. ಬೇರೆಯದೇ ಹಂತದ ಸಮರ್ಪಣೆ’ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ಇನ್ನೂ ಕೆಲವರು ಸಲ್ಲು ವಯಸ್ಸು ಕಡಿಮೆ ಆಗುತ್ತಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಬೆಂಗಾವಲು ವಾಹನಕ್ಕೆ ಏಕಾಏಕಿ ನುಗ್ಗಿದ ಬೈಕ್ ಸವಾರ; ಮುಂದೇನಾಯ್ತು?

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಚಿತ್ರದ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ನಾಯಕಿ. ಈ ಚಿತ್ರ ಮುಂದಿನ ವರ್ಷ ಈದ್​ಗೆ ಬಿಡುಗಡೆ ಹೊಂದಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ವರ್ಷ ಈದ್​ ದಿನದಂದು ಈ ಸಿನಿಮಾ ಘೋಷಣೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ