‘ಏನಾಗಬೇಕೋ ಅದು ಆಗೇ ಆಗುತ್ತದೆ’; ಬೆದರಿಕೆ ಬಗ್ಗೆ ಸಲ್ಮಾನ್ ಖಾನ್ ಮಾತು

ಈ ಮೊದಲು ಸಲ್ಮಾನ್ ಖಾನ್ ಅವರು ‘ಆಪ್ ಕಿ ಅದಾಲತ್’ಗೆ ಬಂದಿದ್ದರು. ಈ ವೇಳೆ ಸಲ್ಮಾನ್ ಖಾನ್​ಗೆ ರಜತ್ ಶರ್ಮಾ ಅವರು ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳಿಗೆ ಸಲ್ಲು ಉತ್ತರ ಕೊಟ್ಟಿದ್ದರು. ಅವರು ಸಾವಿಗೆ ಭಯಪಟ್ಟು ಕುಳಿತುಕೊಂಡಿಲ್ಲ. ಇದನ್ನು ಪರೋಕ್ಷವಾಗಿ ಹೇಳಿದ್ದರು.

‘ಏನಾಗಬೇಕೋ ಅದು ಆಗೇ ಆಗುತ್ತದೆ’; ಬೆದರಿಕೆ ಬಗ್ಗೆ ಸಲ್ಮಾನ್ ಖಾನ್ ಮಾತು
ಸಲ್ಮಾನ್ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 18, 2024 | 7:39 AM

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹೆಚ್ಚಾಗಿದೆ. ಇದರಿಂದ ಅವರಿಗೆ ಭದ್ರತೆ ಕೂಡ ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್ ಆಪ್ತ ಎನಿಸಿಕೊಂಡಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಗಿದೆ. ಇದಾದ ಬಳಿಕ ಸಲ್ಲು ಎಚ್ಚೆತ್ತುಕೊಂಡಿದ್ದಾರೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ‘ಏನಾಗಬೇಕೋ ಅದು ಆಗೇ ಆಗುತ್ತದೆ’ ಎಂದು ಹೇಳಿದ್ದರು.

ಈ ಮೊದಲು ಸಲ್ಮಾನ್ ಖಾನ್ ಅವರು ‘ಆಪ್ ಕಿ ಅದಾಲತ್’ಗೆ ಬಂದಿದ್ದರು. ಈ ವೇಳೆ ಸಲ್ಮಾನ್ ಖಾನ್​ಗೆ ರಜತ್ ಶರ್ಮಾ ಅವರು ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳಿಗೆ ಸಲ್ಲು ಉತ್ತರ ಕೊಟ್ಟಿದ್ದರು. ಅವರು ಸಾವಿಗೆ ಭಯಪಟ್ಟು ಕುಳಿತುಕೊಂಡಿಲ್ಲ. ಇದನ್ನು ಪರೋಕ್ಷವಾಗಿ ಹೇಳಿದ್ದರು.

‘ಸಲ್ಮಾನ್ ನಿಮಗೆ ಬೆದರಿಕೆ ಇದೆ. ದೇಶದಲ್ಲೂ ಇದೆ, ವಿದೇಶದಲ್ಲಿ ಇದೆ. ನಿಮಗೆ ಸಾಕಷ್ಟು ಭದ್ರತೆ ನೀಡಲಾಗಿದೆ. ಆದರೆ, ನೀವು ಇದನ್ನು ಗಂಭೀರವಾಗಿ ಸ್ವೀಕರಿಸಿಲ್ಲವಲ್ಲ’ ಎಂದು ರಜತ್ ಶರ್ಮಾ ಅವರು ಕೇಳಿದರು. ಇದಕ್ಕೆ ಉತ್ತರಿಸಿದ ಸಲ್ಮಾನ್ ಖಾನ್, ‘ಎಲ್ಲವನ್ನೂ ಮಾಡುತ್ತಿದ್ದೇನೆ. ಏನೇನು ಮಾಡಬೇಕು ಎಂದು ಹೇಳಿದ್ದಾರೋ ಅದನ್ನು ಮಾಡುತ್ತೇನೆ’ ಎಂದು ಸಲ್ಲು ಹೇಳಿದರು.

‘ಸಿನಿಮಾ ಪ್ರೆಸ್​ಮೀಟ್ ಅಟೆಂಡ್ ಮಾಡ್ತೀರಾ, ಶೂಟಿಂಗ್ ಮಾಡ್ತಿದೀರಾ, ಇಫ್ತಾರ್ ಕೂಟದಲ್ಲಿ ಭಾಗಿ ಆಗ್ತಿದರಲ್ಲ. ಭಯ ಆಗುವುದಿಲ್ಲವೇ’ ಎಂದು ಸಲ್ಮಾನ್​ ಕೇಳಲಾಯಿತು. ‘ಭದ್ರತೆಯೊಂದಿಗೆ ಹೋಗುತ್ತಿದ್ದೇನೆ. ಏನಾಗಬೇಕೋ ಅದು ಆಗುತ್ತದೆ. ಏನೇ ಮಾಡಿದರೂ ಅದು ಆಗೇ ಆಗುತ್ತದೆ. ಮೇಲೆ ದೇವರಿದ್ದಾನೆ ಎಂದು ನಾನು ನಂಬಿದ್ದೇನೆ’ ಎಂದು ಸಲ್ಮಾನ್ ಖಾನ್ ಹೇಳಿದ್ದರು.

ಇದನ್ನೂ ಓದಿ: ಅದೊಂದು ಕೆಲಸ ಮಾಡಿದರೆ ಸಲ್ಮಾನ್ ಖಾನ್ ಅನ್ನು ಕ್ಷಮಿಸುತ್ತೇನೆ: ಲಾರೆನ್ಸ್ ಬಿಷ್ಣೊಯಿ

ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಕೊಂದ ಆರೋಪ ಎದುರಿಸುತ್ತಿದ್ದಾರೆ. ಇದರಿಂದ ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಸಲ್ಮಾನ್ ಖಾನ್ ಅವರನ್ನು ಕೊಲ್ಲುವ ಬೆದರಿಕೆ ಹಾಕುತ್ತಿದ್ದಾರೆ. ಕೃಷ್ಣ ಮೃಗವನ್ನು ಇವರು ದೇವರೆಂದು ಪೂಜೆ ಮಾಡುತ್ತಾರೆ. ಆದರೆ, ಅದನ್ನು ಸಲ್ಮಾನ್ ಖಾನ್ ಕೊಂದಿದ್ದಕ್ಕೆ ಸಿಟ್ಟಿದೆ. ಹೀಗಾಗಿ, ಸಲ್ಮಾನ್ ಖಾನ್ನ ಮುಗಿಸುವ ಪ್ರಯತ್ನ ನಡೆಯುತ್ತಿದೆ. ಸಲ್ಮಾನ್ ಖಾನ್ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ