AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ಗೆ ಹಾವು ಕಡಿತ; ಮಧ್ಯ ರಾತ್ರಿ ಆಸ್ಪತ್ರೆಗೆ ದಾಖಲು: ಈಗ ಹೇಗಿದೆ ಸಲ್ಲು ಆರೋಗ್ಯ ಸ್ಥಿತಿ?

Salman Khan Hospitalized: ನಟ ಸಲ್ಮಾನ್​ ಖಾನ್​ ಅವರಿಗೆ ಶನಿವಾರ (ಡಿ.25) ತಡರಾತ್ರಿ ಹಾವು ಕಚ್ಚಿದೆ. ಭಾನುವಾರ ಬೆಳಗ್ಗೆವರೆಗೂ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸಲ್ಮಾನ್​ ಖಾನ್​ಗೆ ಹಾವು ಕಡಿತ; ಮಧ್ಯ ರಾತ್ರಿ ಆಸ್ಪತ್ರೆಗೆ ದಾಖಲು: ಈಗ ಹೇಗಿದೆ ಸಲ್ಲು ಆರೋಗ್ಯ ಸ್ಥಿತಿ?
ಸಲ್ಮಾನ್​ ಖಾನ್
TV9 Web
| Edited By: |

Updated on:Dec 26, 2021 | 1:41 PM

Share

ಬಾಲಿವುಡ್​ ಸ್ಟಾರ್​ ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಹಾವು ಕಚ್ಚಿದೆ. ಶನಿವಾರ (ಡಿ.25) ರಾತ್ರಿ ಈ ಘಟನೆ ನಡೆದಿದೆ. ಫಾರ್ಮ್​ಹೌಸ್​ನಲ್ಲಿ ಸಲ್ಮಾನ್​ ಖಾನ್​ಗೆ ಹಾವು ಕಚ್ಚಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹಾವು ಕಚ್ಚಿದ (Snake Bite) ಬಳಿಕ ಅವರ ಆಪ್ತ ವಲಯಕ್ಕೆ ತುಂಬ ಗಾಬರಿ ಆಯಿತು. ಅದೃಷ್ಟವಶಾತ್​ ಆ ಹಾವು ಹೆಚ್ಚು ವಿಷಪೂರಿತ ಆಗಿರಲಿಲ್ಲ ಎಂಬುದು ನಂತರ ತಿಳಿಯಿತು. ಭಾನುವಾರ ಬೆಳಗ್ಗೆವರೆಗೂ ಸಲ್ಮಾನ್​ ಖಾನ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ಮಹಾರಾಷ್ಟ್ರದ ರಾಯಘಡ್​ ಜಿಲ್ಲೆಯಲ್ಲಿರುವ ಪನ್ವೇಲ್​ನಲ್ಲಿ ಸಲ್ಮಾನ್​ ಖಾನ್​ ಅವರು ಫಾರ್ಮ್​ಹೌಸ್​ ಹೊಂದಿದ್ದಾರೆ. ಶೂಟಿಂಗ್​ ಇಲ್ಲದಿರುವಾಗ ಅವರು ಹೆಚ್ಚಾಗಿ ತಮ್ಮ ಫಾರ್ಮ್​ಹೌಸ್​ನಲ್ಲಿಯೇ ಕಾಲ ಕಳೆಯುತ್ತಾರೆ. ಮೊದಲ ಬಾರಿ ಲಾಕ್​ಡೌನ್​ ಆದಾಗಲೂ ಅವರು ಈ ಫಾರ್ಮ್​ಹೌಸ್​ನಲ್ಲಿ ವಾಸವಾಗಿದ್ದರು. ಶನಿವಾರ (ಡಿ.25) ಕೂಡ ಸಲ್ಲು ಅಲ್ಲಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಡಿ.27ರಂದು ಸಲ್ಮಾನ್​ ಖಾನ್​ ಜನ್ಮದಿನ. ಆ ಪ್ರಯುಕ್ತ ಈಗಾಗಲೇ ಒಂದಷ್ಟು ತಯಾರಿ ನಡೆದಿತ್ತು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಸಂಬಂಧಿಕರ ಜತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಲ್ಮಾನ್​ ಖಾನ್​ ಪ್ಲ್ಯಾನ್​ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಈಗ ಅವರಿಗೆ ಹಾವು ಕಚ್ಚಿರುವುದರಿಂದ ಬರ್ತ್​ಡೇ ಪಾರ್ಟಿ ಕ್ಯಾನ್ಸಲ್​ ಆಗುವ ಸಾಧ್ಯತೆ ಇದೆ. ಸಲ್ಲು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹಾವು ಕಚ್ಚಿರುವ ಬಗ್ಗೆ ಸಲ್ಮಾನ್​ ಖಾನ್​ ಅಥವಾ ಅವರ ಕುಟುಂಬದವರ ಕಡೆಯಿಂದ ಈವರೆಗೆ ಯಾವುದೇ ಹೇಳಿಕೆ ನೀಡಲಾಗಿಲ್ಲ. ತಮ್ಮ ಆರೋಗ್ಯದ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಅಪ್​ಡೇಟ್​ ನೀಡಬಹುದು ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಬರ್ತ್​ಡೇ ಹೊಸ್ತಿಲಲ್ಲೇ ಈ ರೀತಿ ಆಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ:

ಹೀಗೂ ದುಡ್ಡು ಮಾಡಬಹುದು ಅಂತ ತೋರಿಸಿದ್ದೇ ಸಲ್ಮಾನ್​ ಖಾನ್​; ಅನಿಲ್​ ಕಪೂರ್​ ಹೇಳಿದ ಅಚ್ಚರಿ ವಿಷಯ

‘ನಾನು ದೊಡ್ಡವನಾದ್ಮೇಲೆ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ರೀತಿ ಡ್ಯಾನ್ಸ್​ ಮಾಡ್ತೀನಿ’: ಸಲ್ಮಾನ್​ ಖಾನ್​

Published On - 1:11 pm, Sun, 26 December 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?