AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ಗೆ ಹಾವು ಕಡಿತ; ಮಧ್ಯ ರಾತ್ರಿ ಆಸ್ಪತ್ರೆಗೆ ದಾಖಲು: ಈಗ ಹೇಗಿದೆ ಸಲ್ಲು ಆರೋಗ್ಯ ಸ್ಥಿತಿ?

Salman Khan Hospitalized: ನಟ ಸಲ್ಮಾನ್​ ಖಾನ್​ ಅವರಿಗೆ ಶನಿವಾರ (ಡಿ.25) ತಡರಾತ್ರಿ ಹಾವು ಕಚ್ಚಿದೆ. ಭಾನುವಾರ ಬೆಳಗ್ಗೆವರೆಗೂ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸಲ್ಮಾನ್​ ಖಾನ್​ಗೆ ಹಾವು ಕಡಿತ; ಮಧ್ಯ ರಾತ್ರಿ ಆಸ್ಪತ್ರೆಗೆ ದಾಖಲು: ಈಗ ಹೇಗಿದೆ ಸಲ್ಲು ಆರೋಗ್ಯ ಸ್ಥಿತಿ?
ಸಲ್ಮಾನ್​ ಖಾನ್
TV9 Web
| Edited By: |

Updated on:Dec 26, 2021 | 1:41 PM

Share

ಬಾಲಿವುಡ್​ ಸ್ಟಾರ್​ ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಹಾವು ಕಚ್ಚಿದೆ. ಶನಿವಾರ (ಡಿ.25) ರಾತ್ರಿ ಈ ಘಟನೆ ನಡೆದಿದೆ. ಫಾರ್ಮ್​ಹೌಸ್​ನಲ್ಲಿ ಸಲ್ಮಾನ್​ ಖಾನ್​ಗೆ ಹಾವು ಕಚ್ಚಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹಾವು ಕಚ್ಚಿದ (Snake Bite) ಬಳಿಕ ಅವರ ಆಪ್ತ ವಲಯಕ್ಕೆ ತುಂಬ ಗಾಬರಿ ಆಯಿತು. ಅದೃಷ್ಟವಶಾತ್​ ಆ ಹಾವು ಹೆಚ್ಚು ವಿಷಪೂರಿತ ಆಗಿರಲಿಲ್ಲ ಎಂಬುದು ನಂತರ ತಿಳಿಯಿತು. ಭಾನುವಾರ ಬೆಳಗ್ಗೆವರೆಗೂ ಸಲ್ಮಾನ್​ ಖಾನ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ಮಹಾರಾಷ್ಟ್ರದ ರಾಯಘಡ್​ ಜಿಲ್ಲೆಯಲ್ಲಿರುವ ಪನ್ವೇಲ್​ನಲ್ಲಿ ಸಲ್ಮಾನ್​ ಖಾನ್​ ಅವರು ಫಾರ್ಮ್​ಹೌಸ್​ ಹೊಂದಿದ್ದಾರೆ. ಶೂಟಿಂಗ್​ ಇಲ್ಲದಿರುವಾಗ ಅವರು ಹೆಚ್ಚಾಗಿ ತಮ್ಮ ಫಾರ್ಮ್​ಹೌಸ್​ನಲ್ಲಿಯೇ ಕಾಲ ಕಳೆಯುತ್ತಾರೆ. ಮೊದಲ ಬಾರಿ ಲಾಕ್​ಡೌನ್​ ಆದಾಗಲೂ ಅವರು ಈ ಫಾರ್ಮ್​ಹೌಸ್​ನಲ್ಲಿ ವಾಸವಾಗಿದ್ದರು. ಶನಿವಾರ (ಡಿ.25) ಕೂಡ ಸಲ್ಲು ಅಲ್ಲಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಡಿ.27ರಂದು ಸಲ್ಮಾನ್​ ಖಾನ್​ ಜನ್ಮದಿನ. ಆ ಪ್ರಯುಕ್ತ ಈಗಾಗಲೇ ಒಂದಷ್ಟು ತಯಾರಿ ನಡೆದಿತ್ತು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಸಂಬಂಧಿಕರ ಜತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಲ್ಮಾನ್​ ಖಾನ್​ ಪ್ಲ್ಯಾನ್​ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಈಗ ಅವರಿಗೆ ಹಾವು ಕಚ್ಚಿರುವುದರಿಂದ ಬರ್ತ್​ಡೇ ಪಾರ್ಟಿ ಕ್ಯಾನ್ಸಲ್​ ಆಗುವ ಸಾಧ್ಯತೆ ಇದೆ. ಸಲ್ಲು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹಾವು ಕಚ್ಚಿರುವ ಬಗ್ಗೆ ಸಲ್ಮಾನ್​ ಖಾನ್​ ಅಥವಾ ಅವರ ಕುಟುಂಬದವರ ಕಡೆಯಿಂದ ಈವರೆಗೆ ಯಾವುದೇ ಹೇಳಿಕೆ ನೀಡಲಾಗಿಲ್ಲ. ತಮ್ಮ ಆರೋಗ್ಯದ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಅಪ್​ಡೇಟ್​ ನೀಡಬಹುದು ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಬರ್ತ್​ಡೇ ಹೊಸ್ತಿಲಲ್ಲೇ ಈ ರೀತಿ ಆಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ:

ಹೀಗೂ ದುಡ್ಡು ಮಾಡಬಹುದು ಅಂತ ತೋರಿಸಿದ್ದೇ ಸಲ್ಮಾನ್​ ಖಾನ್​; ಅನಿಲ್​ ಕಪೂರ್​ ಹೇಳಿದ ಅಚ್ಚರಿ ವಿಷಯ

‘ನಾನು ದೊಡ್ಡವನಾದ್ಮೇಲೆ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ರೀತಿ ಡ್ಯಾನ್ಸ್​ ಮಾಡ್ತೀನಿ’: ಸಲ್ಮಾನ್​ ಖಾನ್​

Published On - 1:11 pm, Sun, 26 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್