AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ಗೆ ಹಾವು ಕಡಿತ; ಮಧ್ಯ ರಾತ್ರಿ ಆಸ್ಪತ್ರೆಗೆ ದಾಖಲು: ಈಗ ಹೇಗಿದೆ ಸಲ್ಲು ಆರೋಗ್ಯ ಸ್ಥಿತಿ?

Salman Khan Hospitalized: ನಟ ಸಲ್ಮಾನ್​ ಖಾನ್​ ಅವರಿಗೆ ಶನಿವಾರ (ಡಿ.25) ತಡರಾತ್ರಿ ಹಾವು ಕಚ್ಚಿದೆ. ಭಾನುವಾರ ಬೆಳಗ್ಗೆವರೆಗೂ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸಲ್ಮಾನ್​ ಖಾನ್​ಗೆ ಹಾವು ಕಡಿತ; ಮಧ್ಯ ರಾತ್ರಿ ಆಸ್ಪತ್ರೆಗೆ ದಾಖಲು: ಈಗ ಹೇಗಿದೆ ಸಲ್ಲು ಆರೋಗ್ಯ ಸ್ಥಿತಿ?
ಸಲ್ಮಾನ್​ ಖಾನ್
TV9 Web
| Edited By: |

Updated on:Dec 26, 2021 | 1:41 PM

Share

ಬಾಲಿವುಡ್​ ಸ್ಟಾರ್​ ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಹಾವು ಕಚ್ಚಿದೆ. ಶನಿವಾರ (ಡಿ.25) ರಾತ್ರಿ ಈ ಘಟನೆ ನಡೆದಿದೆ. ಫಾರ್ಮ್​ಹೌಸ್​ನಲ್ಲಿ ಸಲ್ಮಾನ್​ ಖಾನ್​ಗೆ ಹಾವು ಕಚ್ಚಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹಾವು ಕಚ್ಚಿದ (Snake Bite) ಬಳಿಕ ಅವರ ಆಪ್ತ ವಲಯಕ್ಕೆ ತುಂಬ ಗಾಬರಿ ಆಯಿತು. ಅದೃಷ್ಟವಶಾತ್​ ಆ ಹಾವು ಹೆಚ್ಚು ವಿಷಪೂರಿತ ಆಗಿರಲಿಲ್ಲ ಎಂಬುದು ನಂತರ ತಿಳಿಯಿತು. ಭಾನುವಾರ ಬೆಳಗ್ಗೆವರೆಗೂ ಸಲ್ಮಾನ್​ ಖಾನ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ಮಹಾರಾಷ್ಟ್ರದ ರಾಯಘಡ್​ ಜಿಲ್ಲೆಯಲ್ಲಿರುವ ಪನ್ವೇಲ್​ನಲ್ಲಿ ಸಲ್ಮಾನ್​ ಖಾನ್​ ಅವರು ಫಾರ್ಮ್​ಹೌಸ್​ ಹೊಂದಿದ್ದಾರೆ. ಶೂಟಿಂಗ್​ ಇಲ್ಲದಿರುವಾಗ ಅವರು ಹೆಚ್ಚಾಗಿ ತಮ್ಮ ಫಾರ್ಮ್​ಹೌಸ್​ನಲ್ಲಿಯೇ ಕಾಲ ಕಳೆಯುತ್ತಾರೆ. ಮೊದಲ ಬಾರಿ ಲಾಕ್​ಡೌನ್​ ಆದಾಗಲೂ ಅವರು ಈ ಫಾರ್ಮ್​ಹೌಸ್​ನಲ್ಲಿ ವಾಸವಾಗಿದ್ದರು. ಶನಿವಾರ (ಡಿ.25) ಕೂಡ ಸಲ್ಲು ಅಲ್ಲಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಡಿ.27ರಂದು ಸಲ್ಮಾನ್​ ಖಾನ್​ ಜನ್ಮದಿನ. ಆ ಪ್ರಯುಕ್ತ ಈಗಾಗಲೇ ಒಂದಷ್ಟು ತಯಾರಿ ನಡೆದಿತ್ತು. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಸಂಬಂಧಿಕರ ಜತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಲ್ಮಾನ್​ ಖಾನ್​ ಪ್ಲ್ಯಾನ್​ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಈಗ ಅವರಿಗೆ ಹಾವು ಕಚ್ಚಿರುವುದರಿಂದ ಬರ್ತ್​ಡೇ ಪಾರ್ಟಿ ಕ್ಯಾನ್ಸಲ್​ ಆಗುವ ಸಾಧ್ಯತೆ ಇದೆ. ಸಲ್ಲು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹಾವು ಕಚ್ಚಿರುವ ಬಗ್ಗೆ ಸಲ್ಮಾನ್​ ಖಾನ್​ ಅಥವಾ ಅವರ ಕುಟುಂಬದವರ ಕಡೆಯಿಂದ ಈವರೆಗೆ ಯಾವುದೇ ಹೇಳಿಕೆ ನೀಡಲಾಗಿಲ್ಲ. ತಮ್ಮ ಆರೋಗ್ಯದ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಅಪ್​ಡೇಟ್​ ನೀಡಬಹುದು ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಬರ್ತ್​ಡೇ ಹೊಸ್ತಿಲಲ್ಲೇ ಈ ರೀತಿ ಆಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ:

ಹೀಗೂ ದುಡ್ಡು ಮಾಡಬಹುದು ಅಂತ ತೋರಿಸಿದ್ದೇ ಸಲ್ಮಾನ್​ ಖಾನ್​; ಅನಿಲ್​ ಕಪೂರ್​ ಹೇಳಿದ ಅಚ್ಚರಿ ವಿಷಯ

‘ನಾನು ದೊಡ್ಡವನಾದ್ಮೇಲೆ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ರೀತಿ ಡ್ಯಾನ್ಸ್​ ಮಾಡ್ತೀನಿ’: ಸಲ್ಮಾನ್​ ಖಾನ್​

Published On - 1:11 pm, Sun, 26 December 21

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ