AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಬೆದರಿಕೆ ಬೆನ್ನಲ್ಲೇ ಸಲ್ಲು ಬಳಿ ಬಂತು ಬುಲೆಟ್​ಪ್ರೂಫ್ ಕಾರು; ಹೇಗಿದೆ ಗೊತ್ತಾ 2 ಕೋಟಿ ರೂ. ವಾಹನ?

ಸಲ್ಲುಗೆ ಕೊಲೆ ಬೆದರಿಕೆ ಬಂದಿತ್ತು. ಈ ಕಾರಣದಿಂದ ಸಲ್ಮಾನ್ ಖಾನ್ ಅವರು ತಮ್ಮ ಸುರಕ್ಷತಾ ದೃಷ್ಟಿಯಿಂದ ಗನ್ ಲೈಸೆನ್ಸ್ ಪಡೆದಿದ್ದಾರೆ. ಈಗ ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಪ್ರಾರಂಭಿಸಿದ್ದಾರೆ.

ಕೊಲೆ ಬೆದರಿಕೆ ಬೆನ್ನಲ್ಲೇ ಸಲ್ಲು ಬಳಿ ಬಂತು ಬುಲೆಟ್​ಪ್ರೂಫ್ ಕಾರು; ಹೇಗಿದೆ ಗೊತ್ತಾ 2 ಕೋಟಿ ರೂ. ವಾಹನ?
ಸಲ್ಮಾನ್ ಖಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 02, 2022 | 10:05 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಕೊಲೆ ಬೆದರಿಕೆ ಬಂದಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಸಲ್ಮಾನ್ ಖಾನ್​ಗೆ ಕೊಲೆ ಹಾಕುವ ಬೆದರಿಕೆ ಹಾಕಿದ್ದಾರೆ. 2018ರಲ್ಲಿ ಲಾರೆನ್ಸ್​​ ಗ್ಯಾಂಗ್​ನಿಂದ ಸಲ್ಮಾನ್ ಅವರನ್ನು ಹತ್ಯೆ ಮಾಡುವ ಪ್ರಯತ್ನವೂ ನಡೆದಿತ್ತು. ಈ ಕಾರಣಕ್ಕೆ ಸಲ್ಮಾನ್ ಖಾನ್ ಅವರು ಈ ಬಾರಿ ಸಾಕಷ್ಟು ಎಚ್ಚರಿಕೆಯಿಂದ ಇದ್ದಾರೆ. ಅವರು ಗನ್ ಇಟ್ಟುಕೊಳ್ಳಲು ಲೈಸೆನ್ಸ್ ಪಡೆದಿದ್ದಾರೆ. ಅಷ್ಟೇ ಅಲ್ಲ, ತಮ್ಮ ಬಳಿ ಇರುವ ದುಬಾರಿ ಕಾರನ್ನು ಬುಲೆಟ್​ಪ್ರೂಫ್ ಆಗಿ ಬದಲಾಯಿಸಿದ್ದಾರೆ ಸಲ್ಮಾನ್ ಖಾನ್. ಇದೇ ಕಾರಿನಲ್ಲಿ ಅವರು ಎಲ್ಲ ಕಡೆಗಳಲ್ಲೂ ಓಡಾಡುತ್ತಿದ್ದಾರೆ.

ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಅವರು ತಮ್ಮ ವಾಹನದಲ್ಲಿ ಓಡಾಡುತ್ತಿರುವಾಗಲೇ ಹತ್ಯೆ ಮಾಡಲಾಗಿತ್ತು. ಈ ಘಟನೆ ಬಳಿಕ ಸಲ್ಲುಗೆ ಕೊಲೆ ಬೆದರಿಕೆ ಬಂದಿತ್ತು. ಈ ಕಾರಣದಿಂದ ಸಲ್ಮಾನ್ ಖಾನ್ ಅವರು ತಮ್ಮ ಸುರಕ್ಷತಾ ದೃಷ್ಟಿಯಿಂದ ಗನ್ ಲೈಸೆನ್ಸ್ ಪಡೆದಿದ್ದಾರೆ. ಈಗ ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡಲು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಸಲ್ಮಾನ್ ಖಾನ್ ಬಳಿ ಟೊಯಾಟೋ ಲ್ಯಾಂಡ್ ಕ್ರೂಸ್ ಎಸ್​ಯುವಿ ಇದೆ. ಇದರ ಎಕ್ಸ್​ ಶೋರೂಂ ಬೆಲೆ 1.50-1.80 ಕೋಟಿ ರೂಪಾಯಿ ಇದೆ. ತೆರಿಗೆಯನ್ನೂ ಸೇರಿಸಿದರೆ ಇದರ ಬೆಲೆ 2 ಕೋಟಿ ರೂಪಾಯಿ ಆಗಲಿದೆ. ಈ ಕಾರನ್ನು ಈಗ ಅವರು ಬುಲೆಟ್​ಪ್ರೂಫ್​ ಆಗಿ ಬದಲಾಯಿಸಿದ್ದಾರೆ. ಈ ಕಾರಿನಲ್ಲಿ ಸಲ್ಮಾನ್ ಖಾನ್ ಅವರು ಮುಂಬೈ ಏರ್​ಪೋರ್ಟ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ವಿಕ್ರಾಂತ್​ ರೋಣ’ ಬೆನ್ನಲ್ಲೇ ಸಲ್ಮಾನ್ ಖಾನ್ ಜತೆಗಿನ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ ಸುದೀಪ್

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಮಾನ್ ಖಾನ್ ಅವರಿಗೆ ಚಿತ್ರರಂಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘ಕಭಿ ಈದ್ ಕಭಿ ದಿವಾಲಿ’ ಹಾಗೂ ‘ಟೈಗರ್​ 3’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಎರಡು ಚಿತ್ರದ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ವಿಕ್ರಾಂತ್ ರೋಣ’ ಚಿತ್ರವನ್ನು ಅವರು ಹಿಂದಿಯಲ್ಲಿ ಪ್ರೆಸೆಂಟ್ ಮಾಡಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ