AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪರೀತ ತೂಕ ಕಡಿಮೆ ಆಗಿದ್ದರ ಬಗ್ಗೆ ಮೌನ ಮುರಿದ ನಟ ಸಲ್ಮಾನ್ ಖಾನ್

ನಟ ಸಲ್ಮಾನ್ ಖಾನ್ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿರಬಹುದು ಎಂದು ಕೆಲವರು ಊಹಿಸಿದ್ದರು. ವಿಪರೀತವಾಗಿ ತೂಕ ಕಡಿಮೆ ಆಗಿದ್ದೇ ಈ ಅನುಮಾನಕ್ಕೆ ಕಾರಣ ಆಗಿತ್ತು. ತಾವು ತೂಕ ಕಳೆದುಕೊಂಡಿರುವ ಬಗ್ಗೆ ಸ್ವತಃ ಸಲ್ಮಾನ್ ಖಾನ್ ಅವರು ಈಗ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ವಿಪರೀತ ತೂಕ ಕಡಿಮೆ ಆಗಿದ್ದರ ಬಗ್ಗೆ ಮೌನ ಮುರಿದ ನಟ ಸಲ್ಮಾನ್ ಖಾನ್
Sohail Khan, Salman Khan
ಮದನ್​ ಕುಮಾರ್​
|

Updated on: Aug 04, 2026 | 5:11 PM

Share

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಕಳೆದ ಕೆಲವು ವಾರಗಳಿಂದ ತಮ್ಮ ಹಠಾತ್ ತೂಕ ಇಳಿಕೆಯಿಂದಾಗಿ ಸುದ್ದಿಯಲ್ಲಿದ್ದರು. ಸಲ್ಮಾನ್ ಅತ್ಯಂತ ತೆಳ್ಳಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಇದೀಗ ಸ್ವತಃ ಸಲ್ಮಾನ್ ಖಾನ್ ಅವರೇ ಈ ಕುರಿತು ಮೌನ ಮುರಿದಿದ್ದು, ತಮಗಿದ್ದ ಆರೋಗ್ಯದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

‘ನಾನು 16 ಕೆಜಿ ತೂಕ ಇಳಿಸಿಕೊಂಡಿದ್ದೇನೆ’

ಪ್ರೈಮ್ ವೀಡಿಯೊದ ‘ಅಲಯನ್ಸ್’ ರಿಯಾಲಿಟಿ ಶೋನಲ್ಲಿ ಭಾಗವಹಿಸಿರುವ ತಮ್ಮ ಸಹೋದರ ಸೊಹೈಲ್ ಖಾನ್ ಅವರನ್ನು ಪ್ರೋತ್ಸಾಹಿಸಲು ಸಲ್ಮಾನ್ ಖಾನ್ ಅವರು ಈ ಶೋಗೆ ಆಗಮಿಸಿದ್ದರು. ಈ ವೇಳೆ ಇಬ್ಬರೂ ಸಹೋದರರು ಫಿಟ್‌ನೆಸ್ ಕುರಿತು ತಮಾಷೆಯಾಗಿ ಮಾತನಾಡಿಕೊಂಡಿದ್ದಾರೆ. ಸೊಹೈಲ್ ಖಾನ್ ಅವರು ತಮ್ಮ ಸಿಕ್ಸ್ ಪ್ಯಾಕ್ ತೋರಿಸಿ, ತಾವು 12 ಕೆಜಿ ತೂಕ ಇಳಿಸಿಕೊಂಡಿರುವುದಾಗಿ ಹೇಳಿದರು. ಇದಕ್ಕೆ ಪ್ರತಿಯಾಗಿ ಸಲ್ಮಾನ್ ಖಾನ್, ‘ನಾನು ಭಾರಿ ಪ್ರಮಾಣದಲ್ಲಿ ತೂಕ ಇಳಿಸಿಕೊಂಡಿದ್ದೇನೆ, ಒಟ್ಟು 16 ಕೆಜಿ ತೂಕ ಕಡಿಮೆಯಾಗಿದೆ’ ಎಂದು ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು.

ಆರೋಗ್ಯದ ಕುರಿತ ಗಾಸಿಪ್‌ಗಳಿಗೆ ಪೂರ್ಣವಿರಾಮ:

ಮುಂಬೈನ ಎಸ್ಆರ್‌ಎ ಕಚೇರಿ ಉದ್ಘಾಟನೆ ಸೇರಿದಂತೆ ಇತ್ತೀಚಿನ ಕೆಲವು ಕಾರ್ಯಕ್ರಮಗಳಲ್ಲಿ ಸಲ್ಮಾನ್ ಖಾನ್ ಅವರು ಅತ್ಯಂತ ತೆಳ್ಳಗೆ ಕಾಣಿಸಿಕೊಂಡ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರಿಂದಾಗಿ ಅವರು ಯಾವುದಾದರೂ ಅನಾರೋಗ್ಯದಿಂದ ಬಳಲುತ್ತಿದ್ದಾರೆಯೇ ಎಂಬ ಚರ್ಚೆಗಳು ಗಾಸಿಪ್ ಪ್ರಿಯರಲ್ಲಿ ಶುರುವಾಗಿದ್ದವು. ಆದರೆ ತಮ್ಮ ಹೊಸ ಲುಕ್ ಉದ್ದೇಶಪೂರ್ವಕವಾಗಿ ಮಾಡಿಕೊಂಡ ಫಿಟ್‌ನೆಸ್ ಬದಲಾವಣೆ ಎಂದು ತಿಳಿಸುವ ಮೂಲಕ ಸಲ್ಮಾನ್ ಈ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ‘70 ಜನ ಒಂದೇ ಟಾಯ್ಲೆಟ್ ಬಳಸಬೇಕಿತ್ತು’: ಜೈಲು ದಿನಗಳ ಕಷ್ಟ ನೆನೆದ ಸಲ್ಮಾನ್ ಖಾನ್

ಮುಂದಿನ ಸಿನಿಮಾಗಾಗಿ ಈ ಫಿಟ್‌ನೆಸ್?

ಸಲ್ಮಾನ್ ಖಾನ್ ಈ ತೂಕ ಇಳಿಕೆಗೆ ನಿಖರ ಕಾರಣವನ್ನು ಹಂಚಿಕೊಳ್ಳದಿದ್ದರೂ, ತಮ್ಮ ಮುಂಬರುವ ಆಕ್ಷನ್ ಚಿತ್ರ ‘SVC63’ ಸಲುವಾಗಿ ಈ ಮೇಕ್ ಓವರ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಅವರು ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಅವರೊಂದಿಗೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಇದರ ಜೊತೆಗೆ ‘ಖತ್ರೋನ್ ಕೆ ಕಿಲಾಡಿ 15’ ಮುಕ್ತಾಯಗೊಂಡ ನಂತರ ಸಲ್ಮಾನ್ ಖಾನ್ ‘ಬಿಗ್ ಬಾಸ್’ ಹೊಸ ಸೀಸನ್‌ಗೆ ನಿರೂಪಕರಾಗಿ ಮರಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್