ಮತ್ತೊಂದು ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್: ಬೆಲೆ ಎಷ್ಟು ಕೋಟಿ?

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇದೆ. ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್​ನ ಸದಸ್ಯರು ಸಲ್ಮಾನ್ ಖಾನ್ ಅನ್ನು ಕೊಲ್ಲುವ ಪ್ರಯತ್ನದಲ್ಲಿದ್ದಾರೆ. ಸರ್ಕಾರ ಸಲ್ಮಾನ್ ಖಾನ್​ರ ಭದ್ರತೆ ಹೆಚ್ಚಿಸಿದೆ. ಇದರ ನಡುವೆ ಸಲ್ಮಾನ್ ಖಾನ್ ಸ್ವತಃ ತಮ್ಮ ಭದ್ರತೆಯ ಜವಾಬ್ದಾರಿ ಹೊತ್ತುಕೊಂಡಿದ್ದು, ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಬುಲೆಟ್ ಪ್ರೂಫ್ ಕಾರು ತಯಾರು ಮಾಡಿಕೊಂಡಿದ್ದಾರೆ.

ಮತ್ತೊಂದು ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್: ಬೆಲೆ ಎಷ್ಟು ಕೋಟಿ?
Follow us
|

Updated on: Oct 18, 2024 | 6:22 PM

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹೆಚ್ಚಾಗಿದೆ. ಲಾರೆನ್ಸ್ ಬಿಷ್ಣೋಯಿ ಮತ್ತು ಅವನ ಸಹಚರರಲು ಸಲ್ಮಾನ್ ಖಾನ್ ಅನ್ನು ಹೇಗಾದರೂ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಇದಕ್ಕಾಗಿ ಹಗಲು-ರಾತ್ರಿ ಪ್ರಯತ್ನ ಪಡುತ್ತಲೇ ಇದ್ದಾರೆ. ಇತ್ತೀಚೆಗಷ್ಟೆ ಸಲ್ಮಾನ್ ಖಾನ್​ರ ಆಪ್ತ ಬಾಬಾ ಸಿದ್ಧಿಖಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೊಂದಿದೆ. ಇದರ ಬೆನ್ನಲ್ಲೆ ಸಲ್ಮಾನ್ ಖಾನ್ ಈಗ ಇನ್ನಷ್ಟು ಜಾಗೃತರಾಗಿದ್ದಾರೆ. ಅವರಿಗೆ ನೀಡಲಾಗುತ್ತಿದ್ದ ಭದ್ರತೆಯನ್ನು ಸಹ ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್ ಸಹ ಸರ್ಕಾರದ ಮೇಲೆ ಅವಲಂಬಿತವಾಗದೆ ತಮ್ಮ ಭದ್ರತೆಯ ಬಗ್ಗೆ ತಾವೇ ಕಾಳಜಿ ವಹಿಸಿದ್ದಾರೆ.

ಸಲ್ಮಾನ್ ಖಾನ್​ಗೆ ಈಗಾಗಲೇ ಖಾಸಗಿ ಭದ್ರತಾ ಸಂಸ್ಥೆಯೊಂದು ಭದ್ರತೆ ನೀಡುತ್ತಿದೆ. ಸಲ್ಮಾನ್ ಖಾನ್​ರ ಖಾಸಗಿ ಅಂಗರಕ್ಷಕ ಶೇರಾ ಸಹ ಜೊತೆಗೇ ಇರುತ್ತಾರೆ. ಇದೆಲ್ಲದರ ಜೊತೆಗೆ ಸಲ್ಮಾನ್ ಖಾನ್ ಮುಂಬೈ ಪೊಲೀಸರಿಂದ ಪರವಾನಗಿ ಪಡೆದು ಆಟೊಮ್ಯಾಟಿಕ್ ಬಂದೂಕೊಂದನ್ನು ಸಹ ಪಡೆದುಕೊಂಡಿದ್ದಾರೆ. ಇವುಗಳ ಜೊತೆಗೆ ಸಲ್ಮಾನ್ ಖಾನ್ ಬುಲೆಟ್ ಕಾರೊಂದನ್ನು ಇತ್ತೀಚೆಗೆ ಖರೀದಿ ಮಾಡಿದ್ದಾರೆ ಇದಕ್ಕಾಗಿ ಭಾರಿ ಮೊತ್ತವನ್ನೇ ತೆತ್ತಿದ್ದಾರೆ.

ಸಲ್ಮಾನ್ ಖಾನ್ ಸಾಮಾನ್ಯವಾಗಿ ಮುಂಬೈನಲ್ಲಿ ಓಡಾಡಲು ಬಳಸುವುದು ಟೊಯೊಟಾ ಲ್ಯಾಂಡ್ ಕ್ರೂಸರ್ ಕಾರನ್ನು ಹೆಚ್ಚಾಗಿ ಬಳಸುತ್ತಾರೆ. ಈ ಕಾರಿಗೆ ವಿಶೇಷ ಮಾಡಿಫಿಕೇಶನ್ ಮಾಡಿಸಿ ಇದನ್ನು ಬುಲೆಟ್ ಪ್ರೂಫ್ ಕಾರನ್ನಾಗಿ ಬದಲಾವಣೆ ಮಾಡಿಸಿದ್ದರು. ಆದರೆ ಇತ್ತೀಚೆಗೆ ಬಾಬಾ ಸಿದ್ಧಿಕಿ ನಿಧನದ ಬಳಿಕ ಸಲ್ಮಾನ್ ಖಾನ್ ಹೊಸ ಬುಲೆಟ್ ಪ್ರೂಫ್ ಕಾರನ್ನೇ ಖರೀದಿ ಮಾಡಿದ್ದಾರೆ ಎಂದು ಬಾಲಿವುಡ್​ನ ಮ್ಯಾಗಜಿನ್ ಪಿಂಕ್​ವಿಲ್ಲಾ ವರದಿ ಮಾಡಿದೆ. ಈ ಬುಲೆಟ್ ಪ್ರೂಫ್ ಕಾರಿಗೆ 2 ಕೋಟಿ ರೂಪಾಯಿ ಹಣ ವೆಚ್ಚ ಮಾಡಿದ್ದಾರಂತೆ ಸಲ್ಮಾನ್ ಖಾನ್.

ಇದನ್ನೂ ಓದಿ:ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಕುರಿತು ಬರಲಿದೆ ವೆಬ್ ಸಿರೀಸ್

ನಿಸ್ಸಾನ್ ಸಂಸ್ಥೆಯ ಎಸ್​ಯುವಿ ಕಾರೊಂದನ್ನು ವಿದೇಶದಿಂದ ಆಮದು ಮಾಡಿಸಿಕೊಂಡಿದ್ದಾರೆ ಸಲ್ಮಾನ್ ಖಾನ್. ವಿಶೇಷವಾಗಿ ಆರ್ಡರ್ ನೀಡಿ ಈ ಕಾರಿಗೆ ಸೆಕ್ಯುರಿಟಿ ಫೀಚರ್ಸ್​ಗಳನ್ನು ಹಾಕಿಸಲಾಗಿದೆಯಂತೆ. ಎಕೆ 47 ಬಂದೂಕಿನಿಂದ ಬರುವ ಗುಂಡುಗಳನ್ನು ಸಹ ತಡೆದು ನಿಲ್ಲಿಸುವ ಅತ್ಯಂತ ಶಕ್ತಿಶಾಲಿ ಗಾಜುಗಳು ಇದಕ್ಕೆ ಅಳವಡಿಸಲಾಗಿರುವ ಜೊತೆಗೆ ಕಾರಿನ ಒಟ್ಟಾರೆ ಬಾಡಿ ಸಹ ಗುಂಡು ನಿರೋಧಕತೆ ಹೊಂದಿದೆ ಎನ್ನಲಾಗುತ್ತಿದೆ. ಇದು ಗುಂಡು ನಿರೋಧಕ ಆಗಿರುವ ಜೊತೆಗೆ ಬಾಂಬ್ ಅಲರ್ಟ್​ ತಂತ್ರಜ್ಞಾನವೂ ಇದರಲ್ಲಿದೆ. ಲ್ಯಾಂಡ್ ಮೈನ್​ಗಳನ್ನು ಸಹ ಇದು ಗುರುತಿಸಲಿದೆ ಅಲ್ಲದೆ ಒಂದು ಹಂತದ ವರೆಗೆ ಬಾಂಬ್ ದಾಳಿಯನ್ನು ಸಹ ಇದು ತಡೆದುಕೊಳ್ಳಲಿದೆ.

ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್​ನವರು ಸಲ್ಮಾನ್ ಖಾನ್ ಅನ್ನು ಕೊಲ್ಲಲು ಸತತ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಸಲ್ಮಾನ್ ಖಾನ್ ತನ್ನ ಭದ್ರತೆ ಬಗ್ಗೆ ಗಮನ ಕೊಟ್ಟಿದ್ದು, ಬೆದರಿಕೆ ಇರುವ ಕಾರಣ ಚಿತ್ರೀಕರಣವನ್ನು ನಿಲ್ಲಿಸಿಲ್ಲ. ಬದಲಿಗೆ ಇಂದು ಬಿಗ್​ಬಾಸ್​ಗಾಗಿ ಚಿತ್ರೀಕರಣ ಮಾಡಿದ್ದಾರೆ ಸಲ್ಮಾನ್ ಖಾನ್. ಇದರ ನಡುವೆ ಮುಂಬೈ ಟ್ರಾಫಿಕ್ ಪೊಲೀಸರು ಸಂದೇಶವೊಂದನ್ನು ಸ್ವೀಕರಿಸಿದ್ದು, ‘ಲಾರೆನ್ಸ್ ಬಿಷ್ಣೋಯಿ ಸಲ್ಮಾನ್ ಖಾನ್ ಅನ್ನು ಕ್ಷಮಿಸಬೇಕೆಂದರೆ 5 ಕೋಟಿ ಕೊಡಲು ಹೇಳಿ ಇಲ್ಲವಾದರೆ ಬಾಬಾ ಸಿದ್ಧಿಕಿಗಿಂತಲೂ ಕೆಟ್ಟದಾಗಿ ಸಾಯಲಿದ್ದಾನೆ’ ಎಂದಿದೆ. ಬೆದರಿಕೆ ಸಂದೇಶ ಕಳಿಸಿದವನ ಹುಡುಕಾಟದಲ್ಲಿದ್ದಾರೆ ಪೊಲೀಸರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು