Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಬೆದರಿಕೆ ಹೆಚ್ಚಾದ ಬೆನ್ನಲ್ಲೇ ಬುಲೆಟ್​ಪ್ರೂಫ್​ ಕಾರು ಖರೀದಿಸಿದ ಸಲ್ಮಾನ್​ ಖಾನ್; ಇದರ ಬೆಲೆ ಎಷ್ಟು?

Nissan Patrol SUV: ಸುತ್ತಾಡುವಾಗ ಸಲ್ಮಾನ್​ ಖಾನ್​ ಅವರಿಗೆ ತೊಂದರೆ ಎದುರಾಗುವ ಅಪಾಯವನ್ನು ತಳ್ಳಿಹಾಕುವಂತಿಲ್ಲ. ಹಾಗಾಗಿ ಅವರ ರಕ್ಷಣೆಗೆ ಬುಲೆಟ್​ಪ್ರೂಫ್​ ಕಾರು ತುಂಬ ಅಗತ್ಯ.

Salman Khan: ಬೆದರಿಕೆ ಹೆಚ್ಚಾದ ಬೆನ್ನಲ್ಲೇ ಬುಲೆಟ್​ಪ್ರೂಫ್​ ಕಾರು ಖರೀದಿಸಿದ ಸಲ್ಮಾನ್​ ಖಾನ್; ಇದರ ಬೆಲೆ ಎಷ್ಟು?
ಸಲ್ಮಾನ್​ ಖಾನ್​, ನಿಸಾನ್​ ಪಟ್ರೋಲ್​ ಎಸ್​ಯುವಿ
Follow us
ಮದನ್​ ಕುಮಾರ್​
|

Updated on:Apr 07, 2023 | 6:21 PM

ನಟ ಸಲ್ಮಾನ್​ ಖಾನ್​ (Salman Khan) ಅವರು ಸಿನಿಮಾ ಮಾತ್ರವಲ್ಲದೇ ಇತರೆ ಅನೇಕ ಕಿರಿಕ್​ಗಳ ಕಾರಣದಿಂದಲೂ ಆಗಾಗ ಸುದ್ದಿ ಆಗುತ್ತಾರೆ. ಅವರನ್ನು ಹತ್ಯೆ ಮಾಡುವುದಾಗಿ ಲಾರೆನ್ಸ್​ ಬಿಷ್ಣೋಯ್​ ಬಹಿರಂಗವಾಗಿಯೇ ಬೆದರಿಕೆ ಹಾಕಿರುವುದು ಕೆಲವೇ ದಿನಗಳ ಹಿಂದೆ ಸುದ್ದಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸಲ್ಮಾನ್​ ಖಾನ್​ ಅವರು ತಮ್ಮ ಭದ್ರತೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಈಗ ಅವರು ಹೊಸ ಬುಲೆಟ್​ಪ್ರೂಫ್​ ಕಾರು (Bulletproof Car) ಖರೀದಿಸಿದ್ದಾರೆ ಎಂದು ವರದಿ ಆಗಿದೆ. ನಿಸಾನ್​ ಪಟ್ರೋಲ್​ ಎಸ್​ಯುವಿ (Nissan Patrol SUV) ಕಾರಿಗೆ ಅವರು ಬರೋಬ್ಬರಿ 2 ಕೋಟಿ ರೂಪಾಯಿ ನೀಡಿದ್ದಾರೆ. ಇತ್ತೀಚೆಗೆ ‘ನೀತಾ ಮುಕೇಶ್​​ ಅಂಬಾನಿ ಕಲ್ಚರಲ್​ ಸೆಂಟರ್​’ ಉದ್ಘಾಟನೆಗೆ ಇದೇ ಕಾರಿನಲ್ಲಿ ಸಲ್ಮಾನ್​ ಖಾನ್​ ಆಗಮಿಸಿದ್ದರು. ಭದ್ರತೆಯ ಜೊತೆಗೆ ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

ಲಾರೆನ್ಸ್​ ಬಿಷ್ಣೋಯ್​ ಮತ್ತು ಸಲ್ಮಾನ್​ ಖಾನ್​ ನಡುವಿನ ದ್ವೇಷ ಹಲವು ವರ್ಷಗಳದ್ದು. ಬಿಷ್ಣೋಯ್​ ಸಮುದಾಯದವರು ಪವಿತ್ರವೆಂದು ಪರಿಗಣಿಸುವ ಕೃಷ್ಣ ಮೃಗವನ್ನು ಸಲ್ಮಾನ್​ ಖಾನ್​ ಬೇಟೆ ಆಡಿದ್ದನ್ನು ಖಂಡಿಸಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಕತ್ತಿ ಮಸೆಯುತ್ತಿದ್ದಾನೆ. ಆತನ ಗ್ಯಾಂಗ್​ನಿಂದ ಈಗಾಗಲೇ ಸಲ್ಮಾನ್​ ಖಾನ್​ಗೆ ಅನೇಕ ಬಾರಿ ಬೆದರಿಕೆ ಬಂದಿದೆ. ಹಾಗಾಗಿ ಭದ್ರತೆ ಹೆಚ್ಚಿಸಿಕೊಳ್ಳುವುದು ಸಲ್ಮಾನ್​ ಖಾನ್​ ಪಾಲಿಗೆ ಅನಿವಾರ್ಯ ಆಗಿದೆ.

ಇದನ್ನೂ ಓದಿ: Yentamma Song: ಪಂಚೆ ಎತ್ತಿಕಟ್ಟಿ ಕುಣಿದ ಸಲ್ಮಾನ್​ ಖಾನ್​, ರಾಮ್​ ಚರಣ್​, ವೆಂಕಟೇಶ್​; ಧೂಳೆಬ್ಬಿಸಿದ ‘ಯೆಂಟಮ್ಮಾ’ ಹಾಡು

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಇತ್ತೀಚೆಗೆ ಇಮೇಲ್ ಮೂಲಕ ಸಲ್ಮಾನ್​ ಖಾನ್​ಗೆ ಮತ್ತೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ನಟನ ಅಪಾರ್ಟ್​ಮೆಂಟ್​ ಎದುರು ಪೊಲೀಸರು ಭದ್ರತೆ ಹೆಚ್ಚಿಸಿದರು. ಸಲ್ಲು ಒಡಾಡುವಾಗ ಅವರಿಗೆ ತೊಂದರೆ ಎದುರಾಗುವ ಅಪಾಯವನ್ನು ತಳ್ಳಿಹಾಕುವಂತಿಲ್ಲ. ಹಾಗಾಗಿ ಅವರ ರಕ್ಷಣೆಗೆ ಬುಲೆಟ್​ಪ್ರೂಫ್​ ಕಾರು ತುಂಬ ಅಗತ್ಯ. ಈ ಮೊದಲು ತಮ್ಮ ಬಳಿ ಇದ್ದ ಐಷಾರಾಮಿ ಕಾರುಗಳ ಬದಲಿಗೆ ಹೊಸ ಬುಲೆಟ್​ಪ್ರೂಫ್​ ಕಾರುಗಳನ್ನು ಬಳಸಲು ಸಲ್ಲು ಆರಂಭಿಸಿದ್ದಾರೆ.

ಇದನ್ನೂ ಓದಿ: Salman Khan: ಸಲ್ಮಾನ್​ ಖಾನ್​-ಪೂಜಾ ಹೆಗ್ಡೆ ಪ್ರೀತಿಸ್ತಾರೆ ಅಂತ ಗಾಸಿಪ್​ ಹಬ್ಬಿಸಿದವರಿಗೆ ತಿರುಗೇಟು ನೀಡಿದ ಸಲ್ಲು ಆಪ್ತರು

ನಿಸಾನ್​ ಪಟ್ರೋಲ್​ ಕಾರಿನಲ್ಲಿ ಬಿ6 ಮತ್ತು ಬಿ7 ಹಂತದ ಭದ್ರತೆ ಇದೆ. ಬಿ7 ಹಂತದಲ್ಲಿ 78 ಎಂಎಂ ದಪ್ಪದ ಬುಲೆಟ್​ಪ್ರೂಫ್​ ಗಾಜು ಅಳವಡಿಕೆ ಆಗಿದೆ. ಬಲು ಶಕ್ತಿಶಾಲಿ ರೈಫೆಲ್​ಗಳ ಬುಲೆಟ್​ ಕೂಡ ಇದರ ಒಳನುಗ್ಗಲು ಸಾಧ್ಯವಿಲ್ಲ. ಬರೋಬ್ಬರಿ 2 ಕೋಟಿ ರೂಪಾಯಿ ನೀಡಿ ಈ ಕಾರನ್ನು ಖರೀದಿಸಲಾಗಿದೆ. ಭಾರತದಲ್ಲಿ ಈ ಕಾರುಗಳ ಮಾರಾಟ ಆಗುತ್ತಿಲ್ಲ. ಹಾಗಾಗಿ ಸಲ್ಮಾನ್​ ಖಾನ್​ ಅವರು ವಿದೇಶದಿಂದ ಇದನ್ನು ಆಮದು ಮಾಡಿಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಮಾನ್​ ಖಾನ್​ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ಮತ್ತು ಸಲ್ಲು ಜೋಡಿಯಾಗಿ ನಟಿಸಿದ್ದಾರೆ. ಏಪ್ರಿಲ್​ 21ರಂದು ಈ ಚಿತ್ರ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:21 pm, Fri, 7 April 23

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ