AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ದಾಳಿ ಬಳಿಕ ಲಂಡನ್ ಪ್ರವಾಸ ರದ್ದು ಮಾಡಿದ ಸಲ್ಮಾನ್ ಖಾನ್

‘ದಿ ಬಾಲಿವುಡ್ ಬಿಗ್ ಒನ್’ ಶೋ ಸಲುವಾಗಿ ಸಲ್ಮಾನ್ ಖಾನ್ ಅವರು ಲಂಡನ್​ಗೆ ತೆರಳಬೇಕಿತ್ತು. ಆದರೆ ಆ ಪ್ರವಾಸವನ್ನು ಮುಂದೂಡಲಾಗಿದೆ. ಸಲ್ಮಾನ್ ಖಾನ್ ಜೊತೆ ಮಾಧುರಿ ದೀಕ್ಷಿತ್, ದಿಶಾ ಪಟಾನಿ, ವರುಣ್ ಧವನ್, ಕೃತಿ ಸನೋನ್, ಟೈಗರ್ ಶ್ರಾಫ್ ಕೂಡ ಈ ಶೋನಲ್ಲಿ ಭಾಗಿ ಆಗಬೇಕಿತ್ತು. ಪಹಲ್ಗಾಮ್​​ ಉಗ್ರರ ದಾಳಿಯಿಂದ ಶೋಕ ಉಂಟಾಗಿದ್ದು, ಈ ಸಂದರ್ಭದಲ್ಲಿ ಪ್ರವಾಸ ಬೇಡ ಎಂದು ನಿರ್ಧರಿಸಲಾಗಿದೆ.

ಪಹಲ್ಗಾಮ್ ದಾಳಿ ಬಳಿಕ ಲಂಡನ್ ಪ್ರವಾಸ ರದ್ದು ಮಾಡಿದ ಸಲ್ಮಾನ್ ಖಾನ್
Salman Khan
TV9 Web
| Updated By: ಮದನ್​ ಕುಮಾರ್​|

Updated on: Apr 28, 2025 | 3:20 PM

Share

ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ (Pahalgam) ಉಗ್ರರು ನಡೆಸಿದ ದಾಳಿಗೆ ಸೆಲೆಬ್ರಿಟಿಗಳು ಹಲವು ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಈಗಾಗಲೇ ಅನೇಕ ನಟ-ನಟಿಯರು ಈ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಉಗ್ರರ ಗುಂಡಿಗೆ 26 ಜನರು ಬಲಿ ಆಗಿರುವುದರಿಂದ ಶೋಕದ ವಾತಾವರಣ ಇದೆ. ಇಂಥ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆ ಬೇಡ ಎಂದು ಸಲ್ಮಾನ್ ಖಾನ್ (Salman Khan) ನಿರ್ಧರಿಸಿದ್ದಾರೆ. ಅದಕ್ಕಾಗಿ ಅವರು ವಿದೇಶದ ಪ್ರವಾಸವನ್ನು ಮುಂದೂಡಿಕೊಂಡಿದ್ದಾರೆ. ಆ ಬಗ್ಗೆ ಇನ್​ಸ್ಟಾಗ್ರಾಮ್​ ಮೂಲಕ ಸಲ್ಮಾನ್ ಖಾನ್ ಅವರು ಮಾಹಿತಿ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಹಾಗಾಗಿ ಅವರು ಬೇರೆ ಬೇರೆ ದೇಶಗಳಲ್ಲಿ ಮನರಂಜನಾ ಕಾರ್ಯಕ್ರಮಗಳನ್ನು ನೀಡುತ್ತಾರೆ. ತಮ್ಮ ಜೊತೆ ಬಾಲಿವುಡ್​ನ ಹಲವು ಸೆಲೆಬ್ರಿಟಿಗಳನ್ನು ಕೂಡ ಕರೆದುಕೊಂಡು ಹೋಗುತ್ತಾರೆ. ಹಲವು ವರ್ಷಗಳಿಂದ ಇದು ನಡೆದುಕೊಂಡು ಬಂದಿದೆ. ಆದರೆ ಈಗ ಲಂಡನ್​​ನಲ್ಲಿ ನೀಡಬೇಕಿದ್ದ ಮನರಂಜನಾ ಕಾರ್ಯಕ್ರಮವನ್ನು ಸಲ್ಮಾನ್ ಖಾನ್ ಮುಂದೂಡಿದ್ದಾರೆ.

ಇದನ್ನೂ ಓದಿ
Image
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
Image
ಪಾಕ್ ಸೇನೆಗೆ ನಡುಕ ಶುರು: ಉಪಗ್ರಹ ಚಿತ್ರಗಳಿಂದ ಬಹಿರಂಗವಾಯ್ತು ರಹಸ್ಯ
Image
ಮೆಹಂದಿ ಮಾಸುವ ಮುನ್ನವೇ ನವವಿವಾಹಿತೆಯ ಕುಂಕುಮ ಅಳಿಸಿದ ಉಗ್ರರು
Image
ಪಹಲ್ಗಾಮ್ ದಾಳಿ: ಅಜಿತ್ ದೋವಲ್, ಜೈಶಂಕರ್ ಭೇಟಿಯಾದ ಪ್ರಧಾನಿ ಮೋದಿ

ಮೇ 4 ಮತ್ತು ಮೇ 5ರಂದು ಲಂಡನ್​ನ ಮ್ಯಾಂಚೆಸ್ಟರ್​ನಲ್ಲಿ ‘ದಿ ಬಾಲಿವುಡ್ ಬಿಗ್ ಒನ್’ ಎಂಬ ಶೋ ಮಾಡಲು ತೀರ್ಮಾನಿಸಲಾಗಿತ್ತು. ಈ ಶೋನಲ್ಲಿ ಸಲ್ಮಾನ್ ಖಾನ್ ಜೊತೆ ದಿಶಾ ಪಟಾನಿ, ಕೃತಿ ಸನೋನ್, ಟೈಗರ್ ಶ್ರಾಫ್, ವರುಣ್ ಧವನ್, ಮಾಧುರಿ ದೀಕ್ಷಿತ್, ಸಾರಾ ಅಲಿ ಖಾನ್ ಮುಂತಾದ ಸೆಲೆಬ್ರಿಟಿಗಳು ಭಾಗವಹಿಸಬೇಕಿತ್ತು. ಆದರೆ ಪಹಲ್ಗಾಮ್ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಶೋ ದಿನಾಂಕ ಮುಂದೂಡಲು ಸಲ್ಮಾನ್ ಖಾನ್ ತೀರ್ಮಾನಿಸಿದ್ದಾರೆ.

‘ಕಾಶ್ಮೀರದಲ್ಲಿ ನಡೆದ ದುರಂತದಿಂದ ತೀವ್ರ ನೋವಾಗಿದೆ. ಹಾಗಾಗಿ ದಿ ಬಾಲಿವುಡ್ ಬಿಗ್ ಒನ್ ಶೋ ಮುಂದೂಡುತ್ತಿದ್ದೇವೆ. ಅಭಿಮಾನಿಗಳು ಈ ಶೋಗಾಗಿ ಎಷ್ಟು ಕಾತರರಾಗಿದ್ದಾರೆ ಎಂಬುದು ನಮಗೆ ಗೊತ್ತಿದೆ. ಆದರೆ ಈ ಶೋಕದ ಸಂದರ್ಭದಲ್ಲಿ ಇದೇ ಸರಿಯಾದ ನಿರ್ಧಾರ. ನಿರಾಸೆ ಮಾಡಿದ್ದಕ್ಕಾಗಿ ಕ್ಷಮೆ ಇರಲಿ. ಹೊಸ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು’ ಎಂದು ಸಲ್ಮಾನ್ ಖಾನ್ ಅವರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದವನು ಮಾನಸಿಕ ಅಸ್ವಸ್ಥ; ಗುಜರಾತ್​​ನಲ್ಲಿ ಬಂಧನ

ಈ ಮೊದಲು ಕೂಡ ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಸಲ್ಮಾನ್ ಖಾನ್ ಪ್ರತಿಕ್ರಿಯಿಸಿದ್ದರು. ‘ಕಾಶ್ಮೀರವು ಭೂಮಿ ಮೇಲಿನ ಸ್ವರ್ಗ. ಆದರೆ ಅದು ನರಕ ಆಗುತ್ತಿದೆ. ಅಮಾಯಕರನ್ನು ಗುರಿಯಾಗಿಸಲಾಗಿದೆ. ಅವರ ಕುಟುಂಬದವರಿಗಾಗಿ ನನ್ನ ಹೃದಯ ಮಿಡಿಯುತ್ತದೆ. ಓರ್ವ ಅಮಾಯಕನನ್ನು ಕೊಲ್ಲುವುದು ಎಂದರೆ ಇಡೀ ಜಗತ್ತನ್ನು ಕೊಂದಂತೆ’ ಎಂದು ಸಲ್ಮಾನ್ ಖಾನ್ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ