AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiger 3: ಮುಗಿಯಿತು ‘ಟೈಗರ್​ 3’ ಚಿತ್ರದ ಶೂಟಿಂಗ್​; ದೀಪಾವಳಿ ಹಬ್ಬದ ಮೇಲೆ ಕಣ್ಣಿಟ್ಟ ಸಲ್ಮಾನ್​ ಖಾನ್​

Salman Khan: ‘ಟೈಗರ್​’ ಸರಣಿಯ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ಕ್ರೇಜ್​ ಇದೆ. ಹಾಗಾಗಿ ‘ಟೈಗರ್​ 3’ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿದೆ.

Tiger 3: ಮುಗಿಯಿತು ‘ಟೈಗರ್​ 3’ ಚಿತ್ರದ ಶೂಟಿಂಗ್​; ದೀಪಾವಳಿ ಹಬ್ಬದ ಮೇಲೆ ಕಣ್ಣಿಟ್ಟ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: May 26, 2023 | 5:59 PM

Share

ಸೋಲು-ಗೆಲುವು ಏನೇ ಇದ್ದರೂ ಸಲ್ಮಾನ್​ ಖಾನ್​ (Salman Khan) ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಅವರೀಗ ‘ಟೈಗರ್​ 3’ (Tiger 3) ಚಿತ್ರದ ಮೇಲೆ ಗಮನ ಹರಿಸಿದ್ದಾರೆ. ಅಭಿಮಾನಿಗಳ ಪಾಲಿನ ಖುಷಿಯ ವಿಚಾರ ಏನೆಂದರೆ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಈ ವಿಷಯವನ್ನು ಸ್ವತಃ ಸಲ್ಮಾನ್​ ಖಾನ್​ ಖಚಿತ ಪಡಿಸಿದ್ದಾರೆ. ಮನೀಶ್​ ಶರ್ಮಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಯಶ್​ ರಾಜ್​ ಫಿಲ್ಮ್ಸ್​ ಮೂಲಕ ನಿರ್ಮಾಣ ಆಗುತ್ತಿದೆ. ಸಲ್ಮಾನ್​ ಖಾನ್​ ಜೊತೆ ಕತ್ರಿನಾ ಕೈಫ್​, ಇಮ್ರಾನ್ ಹಷ್ಮಿ ಕೂಡ ಪಾತ್ರವರ್ಗದಲ್ಲಿದ್ದಾರೆ. ಇತ್ತೀಚೆಗೆ ಐಫಾ ಅವಾರ್ಡ್ಸ್ (IIFA Awards)​ ಸಲುವಾಗಿ ಸಲ್ಮಾನ್​ ಖಾನ್​ ಅವರು ಅಬುಧಾಬಿಗೆ ತೆರಳಿದ್ದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡುವಾಗ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ನಿನ್ನೆ ರಾತ್ರಿ ಟೈಗರ್​ 3 ಚಿತ್ರದ ಶೂಟಿಂಗ್​ನಲ್ಲಿ ನಾನು ಭಾಗಿಯಾಗಿದ್ದೆ. ಅಂತೂ ಅದರ ಚಿತ್ರೀಕರಣ ಮುಗಿಸಿದ್ದೇನೆ. ಅದು ತುಂಬ ಕಷ್ಟಕರವಾಗಿತ್ತು. ಆದರೂ ಚೆನ್ನಾಗಿತ್ತು. ದೀಪಾವಳಿ ಹಬ್ಬಕ್ಕೆ ನೀವು ಈ ಸಿನಿಮಾ ನೋಡುತ್ತೀರಿ’ ಎಂದು ಸಲ್ಮಾನ್​ ಖಾನ್ ಹೇಳಿದ್ದಾರೆ.

ಹಬ್ಬ-ಹರಿದಿನಗಳಲ್ಲಿ ಸಿನಿಮಾ ರಿಲೀಸ್​ ಆದರೆ ಉತ್ತಮ ಕಮಾಯಿ ಆಗುತ್ತದೆ. ಹಾಗಾಗಿ 2023ರ ದೀಪಾವಳಿ ಹಬ್ಬದ ಮೇಲೆ ಸಲ್ಮಾನ್​ ಖಾನ್​ ಕಣ್ಣಿಟ್ಟಿದ್ದಾರೆ. ‘ಟೈಗರ್​’ ಸರಣಿಯ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ಕ್ರೇಜ್​ ಇದೆ. ಹಾಗಾಗಿ ‘ಟೈಗರ್​ 3’ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿದೆ. ಇದರಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂದು ನಿರೀಕ್ಷಿಸಲಾಗಿದೆ. ಇತ್ತೀಚೆಗೆ ತೆರೆಕಂಡ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಲಿಲ್ಲ. ಹಾಗಾಗಿ ಮುಂದಿನ ಸಿನಿಮಾಗಳ ಮೂಲಕ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಸಲ್ಮಾನ್​ ಖಾನ್ ಅವರಿಗೆ ಇದೆ.

ಇದನ್ನೂ ಓದಿ: Salman Khan: 100 ಕೋಟಿ ರೂಪಾಯಿ ಕ್ಲಬ್​ ಸೇರಿವೆ ಸಲ್ಮಾನ್​ ಖಾನ್​ ನಟನೆಯ 16 ಚಿತ್ರಗಳು; ಇಲ್ಲಿದೆ ಪಟ್ಟಿ

ಸಲ್ಮಾನ್​ ಖಾನ್​ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರಿಗೆ ಅದೃಷ್ಟ ಕೈ ಕೊಟ್ಟಿದೆ. ಗ್ಯಾಂಗ್​​ಸ್ಟರ್​ಗಳಿಂದ ಅವರಿಗೆ ಬೆದರಿಕೆ ಬಂದಿರುವುದು ಗೊತ್ತೇ ಇದೆ. ಹಾಗಂತ ಸಲ್ಮಾನ್​ ಖಾನ್​ ಅವರ ಗತ್ತು, ಗಾಂಭೀರ್ಯಕ್ಕೆ ಏನೂ ಕೊರತೆ ಆಗಿಲ್ಲ. ಎಂದಿನಂತೆ ಅವರು ದಿಲ್ದಾರ್​ ಆಗಿ ಓಡಾಡಿಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಕೊಲ್ಕತ್ತಾದಲ್ಲಿ ‘ದಬಂಗ್​ ಟೂರ್​’ ಕಾರ್ಯಕ್ರಮ ನೀಡಿದ್ದರು. ಈಗ ಐಫಾ ಅವಾರ್ಡ್ಸ್​ ಕಾರ್ಯಕ್ರಮದ ಸಲುವಾಗಿ ವಿದೇಶಕ್ಕೆ ಹಾರಿದ್ದಾರೆ.

ಇದನ್ನೂ ಓದಿ: Salman Khan: ‘ಮಹಿಳೆಯರು ದೇಹ ಮುಚ್ಚಿಕೊಂಡಷ್ಟೂ ಉತ್ತಮ’: ಚರ್ಚೆ ಹುಟ್ಟುಹಾಕಿದ ಸಲ್ಮಾನ್​ ಖಾನ್​ ಹೇಳಿಕೆ

ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಸಲ್ಮಾನ್​ ಖಾನ್​ ಅವರಿಗೆ ಬೇಡಿಕೆ ಇದೆ. ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಿರೂಪಿಸುವ ಮೂಲಕ ಜನಮನ ಗೆದ್ದಿದ್ದಾರೆ. ಈಗ ಒಟಿಟಿಗೂ ಅವರು ಕಾಲಿಡುತ್ತಿದ್ದಾರೆ. ‘ಬಿಗ್​ ಬಾಸ್​ ಒಟಿಟಿ ಸೀಸನ್​ 2’ ಶೀಘ್ರದಲ್ಲೇ ಆರಂಭ ಆಗಲಿದೆ. ಅದರ ನಿರೂಪಣೆ ಮಾಡಲು ಸಲ್ಮಾನ್​ ಖಾನ್​ ಸಜ್ಜಾಗಿದ್ದಾರೆ. ಮೊದಲ ಸೀಸನ್​ ಅನ್ನು ಕರಣ್​ ಜೋಹರ್​ ನಡೆಸಿಕೊಟ್ಟಿದ್ದರು. ಈಗ ಅವರ ಜಾಗಕ್ಕೆ ಸಲ್ಮಾನ್​ ಖಾನ್​ ಆಗಮಿಸುತ್ತಿದ್ದಾರೆ. ಅದನ್ನು ತಿಳಿಸಲು ಪ್ರೋಮೋ ಬಿಡುಗಡೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್