AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiger 3: ಮುಗಿಯಿತು ‘ಟೈಗರ್​ 3’ ಚಿತ್ರದ ಶೂಟಿಂಗ್​; ದೀಪಾವಳಿ ಹಬ್ಬದ ಮೇಲೆ ಕಣ್ಣಿಟ್ಟ ಸಲ್ಮಾನ್​ ಖಾನ್​

Salman Khan: ‘ಟೈಗರ್​’ ಸರಣಿಯ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ಕ್ರೇಜ್​ ಇದೆ. ಹಾಗಾಗಿ ‘ಟೈಗರ್​ 3’ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿದೆ.

Tiger 3: ಮುಗಿಯಿತು ‘ಟೈಗರ್​ 3’ ಚಿತ್ರದ ಶೂಟಿಂಗ್​; ದೀಪಾವಳಿ ಹಬ್ಬದ ಮೇಲೆ ಕಣ್ಣಿಟ್ಟ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: May 26, 2023 | 5:59 PM

Share

ಸೋಲು-ಗೆಲುವು ಏನೇ ಇದ್ದರೂ ಸಲ್ಮಾನ್​ ಖಾನ್​ (Salman Khan) ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಅವರೀಗ ‘ಟೈಗರ್​ 3’ (Tiger 3) ಚಿತ್ರದ ಮೇಲೆ ಗಮನ ಹರಿಸಿದ್ದಾರೆ. ಅಭಿಮಾನಿಗಳ ಪಾಲಿನ ಖುಷಿಯ ವಿಚಾರ ಏನೆಂದರೆ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಈ ವಿಷಯವನ್ನು ಸ್ವತಃ ಸಲ್ಮಾನ್​ ಖಾನ್​ ಖಚಿತ ಪಡಿಸಿದ್ದಾರೆ. ಮನೀಶ್​ ಶರ್ಮಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಯಶ್​ ರಾಜ್​ ಫಿಲ್ಮ್ಸ್​ ಮೂಲಕ ನಿರ್ಮಾಣ ಆಗುತ್ತಿದೆ. ಸಲ್ಮಾನ್​ ಖಾನ್​ ಜೊತೆ ಕತ್ರಿನಾ ಕೈಫ್​, ಇಮ್ರಾನ್ ಹಷ್ಮಿ ಕೂಡ ಪಾತ್ರವರ್ಗದಲ್ಲಿದ್ದಾರೆ. ಇತ್ತೀಚೆಗೆ ಐಫಾ ಅವಾರ್ಡ್ಸ್ (IIFA Awards)​ ಸಲುವಾಗಿ ಸಲ್ಮಾನ್​ ಖಾನ್​ ಅವರು ಅಬುಧಾಬಿಗೆ ತೆರಳಿದ್ದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡುವಾಗ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ನಿನ್ನೆ ರಾತ್ರಿ ಟೈಗರ್​ 3 ಚಿತ್ರದ ಶೂಟಿಂಗ್​ನಲ್ಲಿ ನಾನು ಭಾಗಿಯಾಗಿದ್ದೆ. ಅಂತೂ ಅದರ ಚಿತ್ರೀಕರಣ ಮುಗಿಸಿದ್ದೇನೆ. ಅದು ತುಂಬ ಕಷ್ಟಕರವಾಗಿತ್ತು. ಆದರೂ ಚೆನ್ನಾಗಿತ್ತು. ದೀಪಾವಳಿ ಹಬ್ಬಕ್ಕೆ ನೀವು ಈ ಸಿನಿಮಾ ನೋಡುತ್ತೀರಿ’ ಎಂದು ಸಲ್ಮಾನ್​ ಖಾನ್ ಹೇಳಿದ್ದಾರೆ.

ಹಬ್ಬ-ಹರಿದಿನಗಳಲ್ಲಿ ಸಿನಿಮಾ ರಿಲೀಸ್​ ಆದರೆ ಉತ್ತಮ ಕಮಾಯಿ ಆಗುತ್ತದೆ. ಹಾಗಾಗಿ 2023ರ ದೀಪಾವಳಿ ಹಬ್ಬದ ಮೇಲೆ ಸಲ್ಮಾನ್​ ಖಾನ್​ ಕಣ್ಣಿಟ್ಟಿದ್ದಾರೆ. ‘ಟೈಗರ್​’ ಸರಣಿಯ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ಕ್ರೇಜ್​ ಇದೆ. ಹಾಗಾಗಿ ‘ಟೈಗರ್​ 3’ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿದೆ. ಇದರಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂದು ನಿರೀಕ್ಷಿಸಲಾಗಿದೆ. ಇತ್ತೀಚೆಗೆ ತೆರೆಕಂಡ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಲಿಲ್ಲ. ಹಾಗಾಗಿ ಮುಂದಿನ ಸಿನಿಮಾಗಳ ಮೂಲಕ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಸಲ್ಮಾನ್​ ಖಾನ್ ಅವರಿಗೆ ಇದೆ.

ಇದನ್ನೂ ಓದಿ: Salman Khan: 100 ಕೋಟಿ ರೂಪಾಯಿ ಕ್ಲಬ್​ ಸೇರಿವೆ ಸಲ್ಮಾನ್​ ಖಾನ್​ ನಟನೆಯ 16 ಚಿತ್ರಗಳು; ಇಲ್ಲಿದೆ ಪಟ್ಟಿ

ಸಲ್ಮಾನ್​ ಖಾನ್​ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರಿಗೆ ಅದೃಷ್ಟ ಕೈ ಕೊಟ್ಟಿದೆ. ಗ್ಯಾಂಗ್​​ಸ್ಟರ್​ಗಳಿಂದ ಅವರಿಗೆ ಬೆದರಿಕೆ ಬಂದಿರುವುದು ಗೊತ್ತೇ ಇದೆ. ಹಾಗಂತ ಸಲ್ಮಾನ್​ ಖಾನ್​ ಅವರ ಗತ್ತು, ಗಾಂಭೀರ್ಯಕ್ಕೆ ಏನೂ ಕೊರತೆ ಆಗಿಲ್ಲ. ಎಂದಿನಂತೆ ಅವರು ದಿಲ್ದಾರ್​ ಆಗಿ ಓಡಾಡಿಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಕೊಲ್ಕತ್ತಾದಲ್ಲಿ ‘ದಬಂಗ್​ ಟೂರ್​’ ಕಾರ್ಯಕ್ರಮ ನೀಡಿದ್ದರು. ಈಗ ಐಫಾ ಅವಾರ್ಡ್ಸ್​ ಕಾರ್ಯಕ್ರಮದ ಸಲುವಾಗಿ ವಿದೇಶಕ್ಕೆ ಹಾರಿದ್ದಾರೆ.

ಇದನ್ನೂ ಓದಿ: Salman Khan: ‘ಮಹಿಳೆಯರು ದೇಹ ಮುಚ್ಚಿಕೊಂಡಷ್ಟೂ ಉತ್ತಮ’: ಚರ್ಚೆ ಹುಟ್ಟುಹಾಕಿದ ಸಲ್ಮಾನ್​ ಖಾನ್​ ಹೇಳಿಕೆ

ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಸಲ್ಮಾನ್​ ಖಾನ್​ ಅವರಿಗೆ ಬೇಡಿಕೆ ಇದೆ. ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಿರೂಪಿಸುವ ಮೂಲಕ ಜನಮನ ಗೆದ್ದಿದ್ದಾರೆ. ಈಗ ಒಟಿಟಿಗೂ ಅವರು ಕಾಲಿಡುತ್ತಿದ್ದಾರೆ. ‘ಬಿಗ್​ ಬಾಸ್​ ಒಟಿಟಿ ಸೀಸನ್​ 2’ ಶೀಘ್ರದಲ್ಲೇ ಆರಂಭ ಆಗಲಿದೆ. ಅದರ ನಿರೂಪಣೆ ಮಾಡಲು ಸಲ್ಮಾನ್​ ಖಾನ್​ ಸಜ್ಜಾಗಿದ್ದಾರೆ. ಮೊದಲ ಸೀಸನ್​ ಅನ್ನು ಕರಣ್​ ಜೋಹರ್​ ನಡೆಸಿಕೊಟ್ಟಿದ್ದರು. ಈಗ ಅವರ ಜಾಗಕ್ಕೆ ಸಲ್ಮಾನ್​ ಖಾನ್​ ಆಗಮಿಸುತ್ತಿದ್ದಾರೆ. ಅದನ್ನು ತಿಳಿಸಲು ಪ್ರೋಮೋ ಬಿಡುಗಡೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ