ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ

ಇತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್​ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್​ನನ್ನು ವಿಚಾರಣೆ ಮಾಡಲಾಗುತ್ತಿದೆ.

ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ
ಲಾರೆನ್ಸ್​-ಸಲ್ಮಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 06, 2022 | 3:42 PM

ನಟ ಸಲ್ಮಾನ್ ಖಾನ್ (Salman Khan) ಹಾಗೂ ಅವರ ತಂದೆ ಸಲೀಮ್ ಖಾನ್​ಗೆ (Salim Khan) ಕೊಲೆ ಬೆದರಿಕೆ ಬಂದಿದೆ. ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಮಧ್ಯೆ, ಈ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್​​ನನ್ನು ವಿಚಾರಣೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೂ ಅವನಿಗೂ ಏನಾದರೂ ಸಂಬಂಧವಿದೆಯಾ ಎನ್ನುವ ನಿಟ್ಟಿನಲ್ಲಿ ತನಿಖೆ ಮಾಡಲಾಗುತ್ತಿದೆ.

ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು 2011ರಲ್ಲಿ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್ ರೂಪಿಸಿದ್ದ. ‘ರೆಡಿ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲೇ ಕೊಲ್ಲಲು ಪ್ರಯತ್ನ ನಡೆದಿತ್ತು. ಆದರೆ, ಈ ಪ್ಲ್ಯಾನ್ ವಿಫಲವಾಗಿತ್ತು. ಇತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್​ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್​ನನ್ನು ವಿಚಾರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: Salman Khan: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್​ ಭದ್ರತೆ ಹೆಚ್ಚಳ

ಇದನ್ನೂ ಓದಿ
Image
ಅವಕಾಶ ಇಲ್ಲದಾಗ 2 ಸಾವಿರ ರೂ. ಕೊಟ್ಟು ಸುಳ್ಳು ಸುದ್ದಿ ಮಾಡಿಸಿದ್ದ ಸಲ್ಮಾನ್​ ಖಾನ್​; ಒಪ್ಪಿಕೊಂಡು ಕಣ್ಣೀರಿಟ್ಟ ನಟ
Image
‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ
Image
ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್​​ ಲಾರೆನ್ಸ್​​​ ಬಿಷ್ಣೋಯ್​​ಯನ್ನು 5 ದಿನಗಳ ಕಾಲ ವಶಕ್ಕೆ ಪಡೆದ ದೆಹಲಿ ಪೊಲೀಸ್​​

ಸಲ್ಲುಗೆ ಬೆದರಿಕೆ ಪತ್ರ

ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ಬಳಿ ಸಲೀಮ್ ನಿತ್ಯ ವಾಯುವಿಹಾರಕ್ಕೆ ತೆರಳುತ್ತಾರೆ. ಅವರು ವಿಶ್ರಾಂತಿ ಪಡೆಯುವ ಪ್ರದೇಶದಲ್ಲಿ ಪತ್ರ ಒಂದು ಸಿಕ್ಕಿದೆ. ಇದು ಸಲ್ಮಾನ್ ಖಾನ್ ಹಾಗೂ ತಂದೆ ಸಲೀಮ್ ಖಾನ್​ಗೆ ಬರೆಯಲಾದ ಪತ್ರ. ‘ಮೂಸೆವಾಲ ರೀತಿಯೇ ನಿಮ್ಮ ಪ್ರಾಣ ಹೋಗಲಿದೆ’ ಎಂದು ಪತ್ರದಲ್ಲಿ ಬೆದರಿಕೆವೊಡ್ಡಲಾಗಿದೆ. ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಸಂಚಲನ ಸೃಷ್ಟಿಸಿತ್ತು. ಈ ಬೆನ್ನಲ್ಲೇ ಸಲೀಮ್ ಖಾನ್​ಗೆ ಈ ರೀತಿ ಪತ್ರ ಬಂದಿರುವುದು ಆತಂಕ ಮೂಡಿಸಿದೆ.

ಈ ಪತ್ರ ಸಲೀಮ್ ಖಾನ್ ಭದ್ರತಾ ಸಿಬ್ಬಂದಿ ಅವರ ಗಮನಕ್ಕೆ ಬಂದಿದೆ. ಅವರು ಇದನ್ನು ತೆಗೆದು ಓದಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್​ಐರ್​ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಬರೆದವರು ಯಾರು, ಯಾವ ಉದ್ದೇಶದಿಂದ ಈ ರೀತಿ ಬೆದರಿಕೆ ಒಡ್ಡಲಾಗಿದೆ ಎಂಬುದು ತನಿಖೆ ನಂತರ ತಿಳಿದು ಬರಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ