AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ

ಇತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್​ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್​ನನ್ನು ವಿಚಾರಣೆ ಮಾಡಲಾಗುತ್ತಿದೆ.

ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ
ಲಾರೆನ್ಸ್​-ಸಲ್ಮಾನ್
TV9 Web
| Edited By: |

Updated on: Jun 06, 2022 | 3:42 PM

Share

ನಟ ಸಲ್ಮಾನ್ ಖಾನ್ (Salman Khan) ಹಾಗೂ ಅವರ ತಂದೆ ಸಲೀಮ್ ಖಾನ್​ಗೆ (Salim Khan) ಕೊಲೆ ಬೆದರಿಕೆ ಬಂದಿದೆ. ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಮಧ್ಯೆ, ಈ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್​​ನನ್ನು ವಿಚಾರಣೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೂ ಅವನಿಗೂ ಏನಾದರೂ ಸಂಬಂಧವಿದೆಯಾ ಎನ್ನುವ ನಿಟ್ಟಿನಲ್ಲಿ ತನಿಖೆ ಮಾಡಲಾಗುತ್ತಿದೆ.

ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು 2011ರಲ್ಲಿ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್ ರೂಪಿಸಿದ್ದ. ‘ರೆಡಿ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲೇ ಕೊಲ್ಲಲು ಪ್ರಯತ್ನ ನಡೆದಿತ್ತು. ಆದರೆ, ಈ ಪ್ಲ್ಯಾನ್ ವಿಫಲವಾಗಿತ್ತು. ಇತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್​ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್​ನನ್ನು ವಿಚಾರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: Salman Khan: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್​ ಭದ್ರತೆ ಹೆಚ್ಚಳ

ಇದನ್ನೂ ಓದಿ
Image
ಅವಕಾಶ ಇಲ್ಲದಾಗ 2 ಸಾವಿರ ರೂ. ಕೊಟ್ಟು ಸುಳ್ಳು ಸುದ್ದಿ ಮಾಡಿಸಿದ್ದ ಸಲ್ಮಾನ್​ ಖಾನ್​; ಒಪ್ಪಿಕೊಂಡು ಕಣ್ಣೀರಿಟ್ಟ ನಟ
Image
‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ
Image
ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್​​ ಲಾರೆನ್ಸ್​​​ ಬಿಷ್ಣೋಯ್​​ಯನ್ನು 5 ದಿನಗಳ ಕಾಲ ವಶಕ್ಕೆ ಪಡೆದ ದೆಹಲಿ ಪೊಲೀಸ್​​

ಸಲ್ಲುಗೆ ಬೆದರಿಕೆ ಪತ್ರ

ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ಬಳಿ ಸಲೀಮ್ ನಿತ್ಯ ವಾಯುವಿಹಾರಕ್ಕೆ ತೆರಳುತ್ತಾರೆ. ಅವರು ವಿಶ್ರಾಂತಿ ಪಡೆಯುವ ಪ್ರದೇಶದಲ್ಲಿ ಪತ್ರ ಒಂದು ಸಿಕ್ಕಿದೆ. ಇದು ಸಲ್ಮಾನ್ ಖಾನ್ ಹಾಗೂ ತಂದೆ ಸಲೀಮ್ ಖಾನ್​ಗೆ ಬರೆಯಲಾದ ಪತ್ರ. ‘ಮೂಸೆವಾಲ ರೀತಿಯೇ ನಿಮ್ಮ ಪ್ರಾಣ ಹೋಗಲಿದೆ’ ಎಂದು ಪತ್ರದಲ್ಲಿ ಬೆದರಿಕೆವೊಡ್ಡಲಾಗಿದೆ. ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಸಂಚಲನ ಸೃಷ್ಟಿಸಿತ್ತು. ಈ ಬೆನ್ನಲ್ಲೇ ಸಲೀಮ್ ಖಾನ್​ಗೆ ಈ ರೀತಿ ಪತ್ರ ಬಂದಿರುವುದು ಆತಂಕ ಮೂಡಿಸಿದೆ.

ಈ ಪತ್ರ ಸಲೀಮ್ ಖಾನ್ ಭದ್ರತಾ ಸಿಬ್ಬಂದಿ ಅವರ ಗಮನಕ್ಕೆ ಬಂದಿದೆ. ಅವರು ಇದನ್ನು ತೆಗೆದು ಓದಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್​ಐರ್​ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಬರೆದವರು ಯಾರು, ಯಾವ ಉದ್ದೇಶದಿಂದ ಈ ರೀತಿ ಬೆದರಿಕೆ ಒಡ್ಡಲಾಗಿದೆ ಎಂಬುದು ತನಿಖೆ ನಂತರ ತಿಳಿದು ಬರಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ