AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂದೂರ್ ಬಗ್ಗೆ ಸಲ್ಮಾನ್ ಖಾನ್ ಮೌನ; ಕದನ ವಿರಾಮಕ್ಕೆ ಖುಷಿ: ಜಾಡಿಸಿದ ನೆಟ್ಟಿಗರು

ಪಾಕ್ ಉಗ್ರರ ವಿರುದ್ಧ ಭಾರತದ ಸೇನೆ ‘ಆಪರೇಷನ್ ಸಿಂದೂರ್’ ನಡೆಸಿದಾಗ ಸಲ್ಮಾನ್ ಖಾನ್ ಮೌನವಾಗಿದ್ದರು. ಆದರೆ ಈಗ ಕದನ ವಿರಾಮ ಘೋಷಣೆ ಆಗುತ್ತಿದ್ದಂತೆಯೇ ಅವರು ದೇವರಿಗೆ ಧನ್ಯವಾದ ತಿಳಿಸಿದ್ದಾರೆ. ಅವರ ಈ ನಡೆಯನ್ನು ಜನರು ಖಂಡಿಸುತ್ತಿದ್ದಾರೆ. ಹಾಗಾಗಿ ಸಲ್ಮಾನ್ ಖಾನ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಆಪರೇಷನ್ ಸಿಂದೂರ್ ಬಗ್ಗೆ ಸಲ್ಮಾನ್ ಖಾನ್ ಮೌನ; ಕದನ ವಿರಾಮಕ್ಕೆ ಖುಷಿ: ಜಾಡಿಸಿದ ನೆಟ್ಟಿಗರು
Salman Khan
ಮದನ್​ ಕುಮಾರ್​
|

Updated on: May 11, 2025 | 12:18 PM

Share

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ (India Pak War) ನಡೆಯುತ್ತಿದೆ. ಇದೆಲ್ಲ ಆರಂಭ ಆಗಿದ್ದು ಪಾಕ್ ಉಗ್ರರು ಪಹಲ್ಗಾಮ್​​ನಲ್ಲಿ ದಾಳಿ ಮಾಡಿದ ನಂತರ. ಸದ್ಯಕ್ಕೆ ಕದನ ವಿರಾಮ ಘೋಷಿಸಲಾಗಿದೆ. ಆದರೂ ಪಾಕಿಸ್ತಾನ ಕಾಲು ಕೆರೆದುಕೊಂಡು ಬರುತ್ತಿದೆ. ಈ ಎಲ್ಲ ಘಟನೆಗಳ ಬಗ್ಗೆ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಮೂಲಕ ಕಮೆಂಟ್ ಮಾಡುತ್ತಿದ್ದಾರೆ. ಈ ನಡುವೆ ಸಲ್ಮಾನ್ ಖಾನ್ (Salman Khan) ಅವರು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕದನ ವಿರಾಮಕ್ಕೆ ಖುಷಿಪಟ್ಟು, ಆಪರೇಷನ್ ಸಿಂದೂರ್ (Operation Sindoor) ಬಗ್ಗೆ ಮೌನ ತಾಳಿದ್ದ ಸಲ್ಮಾನ್ ಖಾನ್ ಅವರ ನಡೆಯನ್ನು ಜನರು ಖಂಡಿಸಿದ್ದಾರೆ.

ಪಾಕಿಸ್ತಾನದ ಉಗ್ರರು ಪಹಲ್ಗಾಮ್​ನಲ್ಲಿ ನಡೆಸಿದ ಹೀನ ಕೃತ್ಯಕ್ಕೆ ಪ್ರತಿಯಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂದೂರ್’ ಮೂಲಕ ಉಗ್ರರನ್ನು ಸೆದೆ ಬಡಿಯಿತು. ಭಾರತದ ಸೈನಿಕರ ಶೌರ್ಯವನ್ನು ಹಾಗೂ ಭಾರತ ಸರ್ಕಾರದ ದಿಟ್ಟತನವನ್ನು ಅನೇಕರು ಕೊಂಡಾಡಿದರು. ಆದರೆ ಕೆಲವರು ಮೌನವಾಗಿದ್ದರು. ಅಂಥವರಲ್ಲಿ ಸಲ್ಮಾನ್ ಖಾನ್ ಕೂಡ ಪ್ರಮುಖರು. ಆಪರೇಷನ್ ಸಿಂದೂರ್ ಬಗ್ಗೆ ಅವರು ಯಾವುದೇ ಪೋಸ್ಟ್ ಮಾಡಿರಲಿಲ್ಲ.

ಇತ್ತೀಚೆಗೆ ಕದನ ವಿರಾಮ ಘೋಷಣೆ ಆಯಿತು. ಕೂಡಲೇ ಸಲ್ಮಾನ್ ಖಾನ್ ಅವರು ‘ಕದನ ವಿರಾಮಕ್ಕೆ ಧನ್ಯವಾದಗಳು ದೇವರೇ’ ಎಂದು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದರು. ಅದನ್ನು ಕಂಡ ಕೂಡಲೇ ನೆಟ್ಟಿಗರಿಗೆ ಕೋಪ ಬಂತು. ‘ಹಾಗಾದರೆ ನೀವು ಆಪರೇಷನ್ ಸಿಂದೂರ್ ಬಗ್ಗೆ ಯಾಕೆ ಏನೂ ಮಾತನಾಡಿಲ್ಲ’ ಎಂದು ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜನರ ಪ್ರಶ್ನೆಗಳಿಗೆ ಉತ್ತರಿಸಲು ಸಲ್ಮಾನ್ ಖಾನ್​ಗೆ ಸಾಧ್ಯವಾಗಿಲ್ಲ. ಕೆಲವೇ ನಿಮಿಷಗಳ ಬಳಿಕ ಅವರು ‘ಕದನ ವಿರಾಮಕ್ಕೆ ಧನ್ಯವಾದಗಳು ದೇವರೇ’ ಎಂಬ ಪೋಸ್ಟ್​ ಅನ್ನು ಡಿಲೀಟ್ ಮಾಡಿದರು. ಸಲ್ಮಾನ್ ಖಾನ್ ಅವರು ಡಿಲೀಟ್ ಮಾಡಿದ್ದನ್ನು ಅಪ್ಪಟ ಅಭಿಮಾನಿಗಳು ಸಮರ್ಥನೆ ಮಾಡಿಕೊಂಡಿದ್ದಾರೆ. ‘ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಆ ಕಾರಣಕ್ಕಾಗಿ ಸಲ್ಮಾನ್ ಖಾನ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಇದರಲ್ಲಿ ಅವರ ತಪ್ಪು ಏನಿಲ್ಲ’ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ; ನಿರ್ಮಾಪಕರಿಗೆ ಛೀಮಾರಿ

ಕದನ ವಿರಾಮ ಘೋಷಣೆ ಆಗಿರುವುದು ಹಲವು ಸೆಲೆಬ್ರಿಟಿಗಳಿಗೆ ಸಮಾಧಾನ ತಂದಿದೆ. ಕರೀನಾ ಕಪೂರ್, ಕರಣ್ ಜೋಹರ್, ರಮ್ಯಾ ದಿವ್ಯ ಸ್ಪಂದನಾ ಮುಂತಾದ ಸೆಲೆಬ್ರಿಟಿಗಳು ಸರ್ಕಾರಗಳ ನಡೆಯನ್ನು ಪ್ರಶಂಸಿಸಿದ್ದಾರೆ. ಆದರೆ ಆಪರೇಷನ್​ ಸಿಂದೂರ್ ಬಗ್ಗೆ ಮೌನವಾಗಿದ್ದು, ಕದನ ವಿರಾಮದ ಬಗ್ಗೆ ಮಾತ್ರ ಪ್ರತಿಕ್ರಿಯಿಸಿದ ಸಲ್ಮಾನ್ ಖಾನ್ ನಡೆಗೆ ಜನರು ಗರಂ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!