‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಲ್ಮಾನ್ ಖಾನ್ ಅವರು ‘ಸಿಂಘಂ ಅಗೇನ್’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ನಿರ್ದೇಶಕರ ಪ್ಲ್ಯಾನ್ ಪ್ರಕಾರ ಶೂಟಿಂಗ್​ ನಡೆದಿಲ್ಲ. ಸಿನಿಮಾವನ್ನು ಸೆನ್ಸಾರ್​ಗೆ ಕಳಿಸುವ ಗಡಿಬಿಡಿಯಲ್ಲಿ ಇದ್ದ ಡೈರೆಕ್ಟರ್​ ರೋಹಿತ್ ಶೆಟ್ಟಿ ಅವರು ಸಲ್ಮಾನ್​ ಖಾನ್​ಗಾಗಿ ಕಾಯಲು ಸಾಧ್ಯವಾಗಿಲ್ಲ.

‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?
ಅಜಯ್ ದೇವಗನ್, ಸಲ್ಮಾನ್ ಖಾನ್​
Follow us
|

Updated on: Oct 21, 2024 | 8:31 PM

ಬಹುನಿರೀಕ್ಷಿತ ‘ಸಿಂಘಂ ಅಗೇನ್’ ಸಿನಿಮಾ ಈಗಾಗಲೇ ಟ್ರೇಲರ್ ಮೂಲಕ ಧೂಳೆಬ್ಬಿಸಿದೆ. ನವೆಂಬರ್​ 1ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದಾರೆ. ಅಜಯ್ ದೇವಗನ್ ಮುಖ್ಯ ಭೂಮಿಕೆ ನಿಭಾಯಿಸಿರುವ ‘ಸಿಂಘಂ ಅಗೇನ್’ ಚಿತ್ರದಲ್ಲಿ ಹಲವು ಸ್ಟಾರ್​ ಕಲಾವಿದರು ಅತಿಥಿ ಪಾತ್ರ ಮಾಡಿದ್ದಾರೆ. ಸಲ್ಮಾನ್ ಖಾನ್​ ಕೂಡ ಈ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ಕೊನೇ ಕ್ಷಣದಲ್ಲಿ ಅವರ ಪಾತ್ರವನ್ನು ಕ್ಯಾನ್ಸಲ್ ಮಾಡಲಾಗಿದೆ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ವರದಿ ಪ್ರಕಟ ಆಗಿದೆ.

‘ಸಿಂಘಂ ಅಗೇನ್’ ಸಿನಿಮಾದಲ್ಲಿ ರಣವೀರ್​ ಸಿಂಗ್, ದೀಪಿಕಾ ಪಡುಕೋಣೆ, ಅಕ್ಷಯ್​ ಕುಮಾರ್​, ಟೈಗರ್​ ಶ್ರಾಫ್​ ಮುಂತಾದ ಕಲಾವಿದರು ಅತಿಥಿ ಪಾತ್ರ ನಿಭಾಯಿಸಿದ್ದಾರೆ. ಎಲ್ಲರ ಪಾತ್ರಗಳು ಟ್ರೇಲರ್​ನಲ್ಲಿ ಹೈಲೈಟ್ ಆಗಿವೆ. ಆದರೆ ಸಲ್ಮಾನ್ ಖಾನ್ ಅವರ ಪಾತ್ರದ ಶೂಟಿಂಗ್ ಮಾಡುವುದು ಇನ್ನೂ ಬಾಕಿ ಕಿತ್ತು. ಚುಲ್​ ಬುಲ್ ಪಾಂಡೆಯಾಗಿ ಸಲ್ಮಾನ್​ ಖಾನ್ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಅಕ್ಟೋಬರ್​ 14ರಂದು ಸಲ್ಮಾನ್ ಖಾನ್​ ಅವರು ‘ಸಿಂಘಂ ಅಗೇನ್’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಬೇಕಿತ್ತು. ಆದರೆ ಅಕ್ಟೋಬರ್​ 12ರಂದು ಸಲ್ಮಾನ್ ಖಾನ್ ಅವರ ಆಪ್ತರಾದ ಬಾಬಾ ಸಿದ್ಧಿಕಿ ಹತ್ಯೆ ಆಯಿತು. ಆ ಘಟನೆಯಿಂದ ಸಲ್ಮಾನ್ ಖಾನ್ ಸಖತ್ ವಿಚಲಿತರಾದರು. ಇಂಥ ಸಂದರ್ಭದಲ್ಲಿ ಅವರನ್ನು ಶೂಟಿಂಗ್​ಗೆ ಬನ್ನಿ ಅಂತ ಕರೆಯುವುದು ಸೂಕ್ತವಲ್ಲ ಎಂದು ನಿರ್ದೇಶಕ ರೋಹಿತ್ ಶೆಟ್ಟಿ ಅವರು ಆ ಪಾತ್ರವನ್ನೇ ಕೈ ಬಿಡುವ ನಿರ್ಧಾರ ಮಾಡಿದರು ಎನ್ನಲಾಗಿದೆ.

ಇದನ್ನೂ ಓದಿ:  ‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದರು. ಆಪ್ತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಸಲ್ಮಾನ್ ಖಾನ್​ಗೆ ಸಹಾಯ ಮಾಡುತ್ತಾರೆ ಎಂಬ ಕಾರಣದಿಂದಲೇ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಯಿತು. ಆ ಬಳಿಕ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಪರಿಸ್ಥಿತಿ ಇಷ್ಟೆಲ್ಲ ಗಂಭೀರ ಆಗಿರುವಾಗ ನಿರ್ದೇಶಕ ರೋಹಿತ್ ಶೆಟ್ಟಿ ಅವರು ಸಲ್ಮಾನ್ ಖಾನ್ ಅವರನ್ನು ಅತಿಥಿ ಪಾತ್ರದ ಶೂಟಿಂಗ್​ಗೆ ಕರೆದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ