‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಲ್ಮಾನ್ ಖಾನ್ ಅವರು ‘ಸಿಂಘಂ ಅಗೇನ್’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ನಿರ್ದೇಶಕರ ಪ್ಲ್ಯಾನ್ ಪ್ರಕಾರ ಶೂಟಿಂಗ್​ ನಡೆದಿಲ್ಲ. ಸಿನಿಮಾವನ್ನು ಸೆನ್ಸಾರ್​ಗೆ ಕಳಿಸುವ ಗಡಿಬಿಡಿಯಲ್ಲಿ ಇದ್ದ ಡೈರೆಕ್ಟರ್​ ರೋಹಿತ್ ಶೆಟ್ಟಿ ಅವರು ಸಲ್ಮಾನ್​ ಖಾನ್​ಗಾಗಿ ಕಾಯಲು ಸಾಧ್ಯವಾಗಿಲ್ಲ.

‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?
ಅಜಯ್ ದೇವಗನ್, ಸಲ್ಮಾನ್ ಖಾನ್​

Updated on: Oct 21, 2024 | 8:31 PM

ಬಹುನಿರೀಕ್ಷಿತ ‘ಸಿಂಘಂ ಅಗೇನ್’ ಸಿನಿಮಾ ಈಗಾಗಲೇ ಟ್ರೇಲರ್ ಮೂಲಕ ಧೂಳೆಬ್ಬಿಸಿದೆ. ನವೆಂಬರ್​ 1ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದಾರೆ. ಅಜಯ್ ದೇವಗನ್ ಮುಖ್ಯ ಭೂಮಿಕೆ ನಿಭಾಯಿಸಿರುವ ‘ಸಿಂಘಂ ಅಗೇನ್’ ಚಿತ್ರದಲ್ಲಿ ಹಲವು ಸ್ಟಾರ್​ ಕಲಾವಿದರು ಅತಿಥಿ ಪಾತ್ರ ಮಾಡಿದ್ದಾರೆ. ಸಲ್ಮಾನ್ ಖಾನ್​ ಕೂಡ ಈ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ಕೊನೇ ಕ್ಷಣದಲ್ಲಿ ಅವರ ಪಾತ್ರವನ್ನು ಕ್ಯಾನ್ಸಲ್ ಮಾಡಲಾಗಿದೆ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ವರದಿ ಪ್ರಕಟ ಆಗಿದೆ.

‘ಸಿಂಘಂ ಅಗೇನ್’ ಸಿನಿಮಾದಲ್ಲಿ ರಣವೀರ್​ ಸಿಂಗ್, ದೀಪಿಕಾ ಪಡುಕೋಣೆ, ಅಕ್ಷಯ್​ ಕುಮಾರ್​, ಟೈಗರ್​ ಶ್ರಾಫ್​ ಮುಂತಾದ ಕಲಾವಿದರು ಅತಿಥಿ ಪಾತ್ರ ನಿಭಾಯಿಸಿದ್ದಾರೆ. ಎಲ್ಲರ ಪಾತ್ರಗಳು ಟ್ರೇಲರ್​ನಲ್ಲಿ ಹೈಲೈಟ್ ಆಗಿವೆ. ಆದರೆ ಸಲ್ಮಾನ್ ಖಾನ್ ಅವರ ಪಾತ್ರದ ಶೂಟಿಂಗ್ ಮಾಡುವುದು ಇನ್ನೂ ಬಾಕಿ ಕಿತ್ತು. ಚುಲ್​ ಬುಲ್ ಪಾಂಡೆಯಾಗಿ ಸಲ್ಮಾನ್​ ಖಾನ್ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗುತ್ತಿಲ್ಲ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಅಕ್ಟೋಬರ್​ 14ರಂದು ಸಲ್ಮಾನ್ ಖಾನ್​ ಅವರು ‘ಸಿಂಘಂ ಅಗೇನ್’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಬೇಕಿತ್ತು. ಆದರೆ ಅಕ್ಟೋಬರ್​ 12ರಂದು ಸಲ್ಮಾನ್ ಖಾನ್ ಅವರ ಆಪ್ತರಾದ ಬಾಬಾ ಸಿದ್ಧಿಕಿ ಹತ್ಯೆ ಆಯಿತು. ಆ ಘಟನೆಯಿಂದ ಸಲ್ಮಾನ್ ಖಾನ್ ಸಖತ್ ವಿಚಲಿತರಾದರು. ಇಂಥ ಸಂದರ್ಭದಲ್ಲಿ ಅವರನ್ನು ಶೂಟಿಂಗ್​ಗೆ ಬನ್ನಿ ಅಂತ ಕರೆಯುವುದು ಸೂಕ್ತವಲ್ಲ ಎಂದು ನಿರ್ದೇಶಕ ರೋಹಿತ್ ಶೆಟ್ಟಿ ಅವರು ಆ ಪಾತ್ರವನ್ನೇ ಕೈ ಬಿಡುವ ನಿರ್ಧಾರ ಮಾಡಿದರು ಎನ್ನಲಾಗಿದೆ.

ಇದನ್ನೂ ಓದಿ:  ‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದರು. ಆಪ್ತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಸಲ್ಮಾನ್ ಖಾನ್​ಗೆ ಸಹಾಯ ಮಾಡುತ್ತಾರೆ ಎಂಬ ಕಾರಣದಿಂದಲೇ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಯಿತು. ಆ ಬಳಿಕ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಪರಿಸ್ಥಿತಿ ಇಷ್ಟೆಲ್ಲ ಗಂಭೀರ ಆಗಿರುವಾಗ ನಿರ್ದೇಶಕ ರೋಹಿತ್ ಶೆಟ್ಟಿ ಅವರು ಸಲ್ಮಾನ್ ಖಾನ್ ಅವರನ್ನು ಅತಿಥಿ ಪಾತ್ರದ ಶೂಟಿಂಗ್​ಗೆ ಕರೆದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us