Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಐಷಾರಾಮಿ ಕಾರು ಬಿಟ್ಟು ಆಟೋ ಓಡಿಸಿದ ಸಲ್ಮಾನ್​ ಖಾನ್; ಇಲ್ಲಿದೆ ವಿಡಿಯೋ

ಮಹಾರಾಷ್ಟ್ರದ ರಾಯಘಡ್​ ಜಿಲ್ಲೆಯಲ್ಲಿರುವ ಪನ್ವೇಲ್​ನಲ್ಲಿ ಸಲ್ಮಾನ್​ ಖಾನ್​ ಅವರು ಫಾರ್ಮ್​ಹೌಸ್​ ಹೊಂದಿದ್ದಾರೆ. ಶೂಟಿಂಗ್​ ಇಲ್ಲದಿರುವಾಗ ಅವರು ಹೆಚ್ಚಾಗಿ ತಮ್ಮ ಫಾರ್ಮ್​ಹೌಸ್​ನಲ್ಲಿಯೇ ಕಾಲ ಕಳೆಯುತ್ತಾರೆ.

Salman Khan: ಐಷಾರಾಮಿ ಕಾರು ಬಿಟ್ಟು ಆಟೋ ಓಡಿಸಿದ ಸಲ್ಮಾನ್​ ಖಾನ್; ಇಲ್ಲಿದೆ ವಿಡಿಯೋ
ಸಲ್ಮಾನ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 29, 2021 | 3:51 PM

ಸೆಲೆಬ್ರಿಟಿಗಳಿಗೆ ಐಷಾರಾಮಿ ಹಾಗೂ ಸ್ಪೋರ್ಟ್ಸ್​ ಕಾರುಗಳ ಕ್ರೇಜ್ ಸ್ವಲ್ಪ ಹೆಚ್ಚಾಗಿಯೇ​ ಇರುತ್ತದೆ. ಅವರು ದುಬಾರಿ ಕಾರು ಖರೀದಿಸಿ ಸುತ್ತಾಟ ನಡೆಸೋದು ಸಾಮಾನ್ಯ. ಈ ರೀತಿ ತಿರುಗಾಟ ನಡೆಸಿದ ಫೋಟೋ ಹಾಗೂ ವಿಡಿಯೋಗಳನ್ನು ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ ಉದಾಹರಣೆ ಸಾಕಷ್ಟಿದೆ. ಈಗ ಸಲ್ಮಾನ್​ ಖಾನ್​ (Salman Khan)  ಕೂಡ ಇದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಹಾಗಂತ ಅವರು ಯಾವುದೋ ಐಷಾರಾಮಿ ಕಾರನ್ನು ಡ್ರೈವ್​ ಮಾಡಿಲ್ಲ. ಬದಲಿಗೆ ಆಟೋ ಓಡಿಸಿ ಸುದ್ದಿಯಾಗಿದ್ದಾರೆ. ಸದ್ಯ, ಈ ವಿಚಾರ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ಮಹಾರಾಷ್ಟ್ರದ ರಾಯಘಡ್​ ಜಿಲ್ಲೆಯಲ್ಲಿರುವ ಪನ್ವೇಲ್​ನಲ್ಲಿ ಸಲ್ಮಾನ್​ ಖಾನ್​ ಅವರು ಫಾರ್ಮ್​ಹೌಸ್​ ಹೊಂದಿದ್ದಾರೆ. ಶೂಟಿಂಗ್​ ಇಲ್ಲದಿರುವಾಗ ಅವರು ಹೆಚ್ಚಾಗಿ ತಮ್ಮ ಫಾರ್ಮ್​ಹೌಸ್​ನಲ್ಲಿಯೇ ಕಾಲ ಕಳೆಯುತ್ತಾರೆ. ಇತ್ತೀಚೆಗೆ ಸಲ್ಲು ತಮ್ಮ ಜನ್ಮದಿನವನ್ನು ಅಲ್ಲಿಯೇ ಆಚರಿಸಿಕೊಂಡಿದ್ದರು. ಸೆಲೆಬ್ರಿಟಿಗಳು ದಂಡು ಇಲ್ಲಿ ಜಮಾಯಿಸಿತ್ತು. ಬರ್ತ್​ಡೇ ಮುಗಿದು ಕೆಲ ದಿನ ಕಳೆದರೂ ಸಲ್ಮಾನ್​ ಖಾನ್​ ಪನ್ವೇಲ್​ನಲ್ಲಿಯೇ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಈಗ ಅಲ್ಲಿಯೇ ಸಲ್ಲು ಆಟೋ ಓಡಿಸಿದ್ದಾರೆ.

ಸಲ್ಮಾನ್​ ಖಾನ್​ ಅವರು ಸ್ಥಳೀಯ ಆಟೋ ಡ್ರೈವರ್​ ಬಳಿಯಿಂದ ಆಟೋ ಪಡೆದುಕೊಂಡು ಓಡಿಸಿದ್ದಾರೆ. ಈ ವೇಳೆ ಅವರು ಸಖತ್​ ಆಗಿ ಭಾರೀ ಖುಷಿಯಾಗಿದ್ದಂತೆ ಕಂಡು ಬಂತು. ಸಲ್ಮಾನ್​ ಖಾನ್​ ಅಭಿಮಾನಿಗಳು ಖುಷಿಯಿಂದ ಇದನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಹುಟ್ಟುಹಬ್ಬದ ಹೊಸ್ತಿಲಲ್ಲೇ ಕಡಿದಿತ್ತು ಹಾವು

ಸಲ್ಮಾನ್​ ಖಾನ್​ ಹುಟ್ಟುಹಬ್ಬಕ್ಕೂ ಒಂದು ದಿನ ಮುನ್ನ ಅವರಿಗೆ ಹಾವು ಕಚ್ಚಿತ್ತು. ಫಾರ್ಮ್​ಹೌಸ್​ನಲ್ಲಿ ಈ ಘಟನೆ ನಡೆದಿದ್ದು, ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಆತಂಕಗೊಂಡಿದ್ದರು. ಭಾನುವಾರ (ಡಿ.26) ಮುಂಜಾನೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಹಾವು ಹೆಚ್ಚು ವಿಷಪೂರಿತ ಆಗಿರಲಿಲ್ಲ. ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಬಳಿಕ ಎಲ್ಲರೊಡನೆ ಸೇರಿ ಬರ್ತ್​ಡೇ ಆಚರಿಸಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಜನ್ಮದಿನ ಸಂಭ್ರಮ; 56ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಸ್ಟಾರ್​ ನಟ

Salman Khan: ‘ಪವನ ಪುತ್ರ ಭಾಯಿಜಾನ್​’; ಸಲ್ಮಾನ್​ ಖಾನ್ ಹೊಸ ಸಿನಿಮಾದ ಶೀರ್ಷಿಕೆ ಬಹಿರಂಗ

Published On - 3:50 pm, Wed, 29 December 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ