ಗುಂಡಿನ ದಾಳಿ ಬಳಿಕ ಮೊದಲ ಬಾರಿ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್​; ಹೇಳಿಕೆ ಬಿಡುಗಡೆ

‘ಸಲೀಂ ಖಾನ್​ ಕುಟುಂಬದವರ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಮೇಲೆ ಗುಂಡಿನ ದಾಳಿ ನಡೆದಿದ್ದು ಆಘಾತಕಾರಿ ಸಂಗತಿ. ಈ ಘಟನೆಯಿಂದ ನಮ್ಮ ಕುಟುಂಬಕ್ಕೆ ಆತಂಕ ಉಂಟಾಗಿದೆ’ ಎಂದು ಸಲ್ಮಾನ್​ ಖಾನ್​ ಫ್ಯಾಮಿಲಿಯವರು ಹೇಳಿದ್ದಾರೆ. ಜೀವ ಬೆದರಿಕೆ ನಡುವೆಯೂ ಸಲ್ಮಾನ್​ ಖಾನ್​ ಅವರು ಸಿನಿಮಾ ಕೆಲಸಗಳಲ್ಲಿ ಮುಂದುವರಿಯುವುದು ಅನಿವಾರ್ಯ.

ಗುಂಡಿನ ದಾಳಿ ಬಳಿಕ ಮೊದಲ ಬಾರಿ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್​; ಹೇಳಿಕೆ ಬಿಡುಗಡೆ
ಸಲ್ಮಾನ್​ ಖಾನ್​
Follow us
|

Updated on: Apr 15, 2024 | 8:07 PM

ಬಾಲಿವುಡ್​ ನಟ ಸಲ್ಮಾನ್​ ಖಾನ್​ (Salman Khan) ಅವರ ಮನೆ ಮೇಲೆ ಭಾನುವಾರ (ಏಪ್ರಿಲ್​ 14) ಗುಂಡಿನ ದಾಳಿ ನಡೆದಿದ್ದು ಎಲ್ಲರಲ್ಲೂ ಆತಂಕ ಮೂಡಿಸಿತು. ಈ ಘಟನೆ ನಡೆದ ಬಳಿಕ ಸಲ್ಮಾನ್​ ಖಾನ್​ ಅವರು ಮನೆಯಿಂದ ಹೊರಬಂದಿರಲಿಲ್ಲ. ಇಂದು (ಏ.15) ಸಂಜೆ ಅವರು ಮೊದಲ ಬಾರಿಗೆ ಮನೆಯಿಂದ ಹೊರಬಂದಿದ್ದಾರೆ. ಅಲ್ಲದೇ, ಗುಂಡಿನ ದಾಳಿ ಬಳಿಕ ಸಲ್ಮಾನ್​ ಖಾನ್​ ಕುಟುಂಬದವರು (Salman Khan Family) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆ ಮೂಲಕ ಕೆಲವು ಗಾಳಿಸುದ್ದಿಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ದಾಳಿಯ ಬಗ್ಗೆ ಸಲ್ಮಾನ್​ ಖಾನ್​ ತಂದೆ ಸಲೀಂ ಖಾನ್​ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಆಗಿತ್ತು. ಆದರೆ ಸಲೀಂ ಖಾನ್​ (Salim Khan) ಆ ರೀತಿ ಯಾವುದೇ ಹೇಳಿಕೆ ನೀಡಿಲ್ಲ ಎಂಬುದನ್ನು ಈಗ ಸ್ಪಷ್ಟಪಡಿಸಲಾಗಿದೆ.

‘ಇಬ್ಬರು ಅಪರಿಚಿತರು ಬೈಕ್​ನಲ್ಲಿ ಬಂದು ಸಲೀಂ ಖಾನ್​ ಕುಟುಂಬದ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಮೇಲೆ ಗುಂಡಿನ ದಾಳಿ ಮಾಡಿದ್ದು ಆಘಾತಕಾರಿ ಸಂಗತಿಯಾಗಿದೆ. ಈ ಘಟನೆಯಿಂದ ನಮ್ಮ ಕುಟುಂಬಕ್ಕೆ ಆತಂಕ ಆಗಿದೆ. ದುರದೃಷ್ಟಕರ ವಿಷಯ ಏನೆಂದರೆ, ಕೆಲವು ವ್ಯಕ್ತಿಗಳು ನಮ್ಮ ಕುಟುಂಬದ ಆಪ್ತರು ಎಂದು ಹೇಳಿಕೊಂಡು ಮಾಧ್ಯಮಗಳಲ್ಲಿ ಲಘುವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಘಟನೆ ಒಂದು ಪ್ರಚಾರದ ಗಿಮಿಕ್​ ಮತ್ತು ಇದರಿಂದ ಸಲ್ಮಾನ್​ ಖಾನ್​ ಕುಟುಂಬದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದೆಲ್ಲ ಹೇಳಿದ್ದಾರೆ. ಆದರೆ ಅದು ನಿಜವಲ್ಲ. ಅಂಥವರ ಮಾತನ್ನು ಗಂಭೀರವಾಗಿ ಪರಿಗಣಿಸಬಾರದು’ ಎಂದು ಸಲ್ಲು ಕುಟುಂಬದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡು ಹಾರಿಸಿದ ಶಂಕಿತರ ಸಿಸಿಟಿವಿ ವಿಡಿಯೋ ವೈರಲ್​

‘ಸಲೀಂ ಖಾನ್​ ಕುಟುಂಬದ ಯಾರೂ ಕೂಡ ಮಾಧ್ಯಮಗಳಿಗೆ ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿಲ್ಲ. ಈ ಸಮಯದಲ್ಲಿ ಕುಟುಂಬದವರು ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ನಮಗೆ ಮುಂಬೈ ಪೊಲೀಸರ ಮೇಲೆ ನಂಬಿಕೆ ಇದೆ. ನಮ್ಮ ಕುಟುಂಬಕ್ಕೆ ರಕ್ಷಣೆ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಬೆಂಬಲ ಮತ್ತು ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದಗಳು’ ಎಂದು ಸಲ್ಮಾನ್ ಖಾನ್​ ಸಹೋದರ ಅರ್ಬಾಜ್​ ಖಾನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸಲ್ಮಾನ್​ ಖಾನ್​ ಅವರು ಬಾಲಿವುಡ್​ನ ಬಹುಬೇಡಿಕೆಯ ನಟ. ಅನೇಕ ಜಾಹೀರಾತು, ಸಿನಿಮಾ ಮುಂತಾದ ಪ್ರಾಜೆಕ್ಟ್​ಗಳನ್ನು ಅವರು ಈಗಾಗಲೇ ಒಪ್ಪಿಕೊಂಡಿದ್ದಾರೆ. ಅವುಗಳ ಸಲುವಾಗಿ ಮನೆಯಿಂದ ಹೊರಬರುವುದು ಅನಿವಾರ್ಯ. ಸದ್ಯಕ್ಕೆ ಅವರಿಗೆ ಜೀವ ಬೆದರಿಕೆ ಇದ್ದರೂ ಕೂಡ ಮನೆಯಿಂದ ಹೊರಬಂದಿದ್ದಾರೆ. ಪರಿಸ್ಥಿತಿ ಕಷ್ಟ ಇರುವುದರಿಂದ ಅವರು ಭದ್ರತೆ ಹೆಚ್ಚಿಸಿಕೊಳ್ಳಬೇಕಿದೆ. ಒಟ್ಟಾರೆ ಈ ಘಟನೆಯಿಂದ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್