Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ

‘ಮೂಸೆವಾಲ ರೀತಿಯೇ ನಿಮ್ಮ ಪ್ರಾಣ ಹೋಗಲಿದೆ’ ಎಂದು ಪತ್ರದಲ್ಲಿ ಬೆದರಿಕೆವೊಡ್ಡಲಾಗಿದೆ. ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 05, 2022 | 8:41 PM

ಸಲ್ಮಾನ್ ಖಾನ್ ಅವರು (Salman Khan) ಬಾಲಿವುಡ್​ನ ಬೇಡಿಕೆಯ ನಟ. ಅವರ ಸಿನಿಮಾಗಳು ಕೋಟಿಕೋಟಿ ಬಿಸ್ನೆಸ್ ಮಾಡುತ್ತವೆ. ಇತ್ತೀಚೆಗೆ ಅವರ ಯಾವುದೇ ಸಿನಿಮಾಗಳು ಹಿಟ್ ಆಗಿಲ್ಲ. ಆದಾಗ್ಯೂ, ಅವರ ಬೇಡಿಕೆ ಕಿಂಚಿತ್ತೂ ಕಡಿಮೆ ಆಗಿಲ್ಲ. ದೊಡ್ಡ ದೊಡ್ಡ ನಿರ್ಮಾಪಕರು ಅವರ ಕಾಲ್​ಶೀಟ್ ಪಡೆಯೋಕೆ ಕಾದು ನಿಂತಿದ್ದಾರೆ. ಸ್ಟಾರ್ ಹೀರೊ ಎಂದರೆ ಅವರ ಕುಟುಂಬದವರ ಬಗ್ಗೆಯೂ ಎಲ್ಲರ ದೃಷ್ಟಿ ಇರುತ್ತದೆ. ಈಗ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್​ಗೆ (Salim Khan) ಕೊಲೆ ಬೆದರಿಕೆ ಎದುರಾಗಿದೆ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ಬಳಿ ಸಲೀಮ್ ನಿತ್ಯ  ವಾಯುವಿಹಾರಕ್ಕೆ ತೆರಳುತ್ತಾರೆ. ಅವರು ವಿಶ್ರಾಂತಿ ಪಡೆಯುವ ಪ್ರದೇಶದಲ್ಲಿ ಪತ್ರ ಒಂದು ಸಿಕ್ಕಿದೆ. ಇದು ಸಲ್ಮಾನ್ ಖಾನ್ ಹಾಗೂ ತಂದೆ ಸಲೀಮ್ ಖಾನ್​ಗೆ ಬರೆಯಲಾದ ಪತ್ರ. ‘ಮೂಸೆವಾಲ ರೀತಿಯೇ ನಿಮ್ಮ ಪ್ರಾಣ ಹೋಗಲಿದೆ’ ಎಂದು ಪತ್ರದಲ್ಲಿ ಬೆದರಿಕೆವೊಡ್ಡಲಾಗಿದೆ. ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಸಂಚಲನ ಸೃಷ್ಟಿಸಿತ್ತು. ಈ ಬೆನ್ನಲ್ಲೇ ಸಲೀಮ್ ಖಾನ್​ಗೆ ಈ ರೀತಿ ಪತ್ರ ಬಂದಿರುವುದು ಆತಂಕ ಮೂಡಿಸಿದೆ.

ಇದನ್ನೂ ಓದಿ
Image
Janhvi Kapoor: ಪ್ರಕೃತಿಯ ಮಡಿಲಿನಲ್ಲಿ ಜಾನ್ವಿ ಕಪೂರ್ ವಿಹಾರ; ಫೋಟೋಗಳಿಗೆ ಮಸ್ತ್​ ಪೋಸ್​​
Image
Stranger Things 4: ‘ಸ್ಟ್ರೇಂಜರ್​ ಥಿಂಗ್ಸ್​ 4’ನಲ್ಲಿ ಗಾಂಧಿ ಹೆಸರು ಉಲ್ಲೇಖ; ಮುಂದಿನ ಸೀಸನ್​ ಬಗ್ಗೆ ಹೆಚ್ಚಾಯ್ತು ನಿರೀಕ್ಷೆ
Image
3 Idiots: ‘3 ಈಡಿಯಟ್ಸ್​’ ಚಿತ್ರೀಕರಣಗೊಂಡ ಬೆಂಗಳೂರಿನ ಐಐಎಂ ಕ್ಯಾಂಪಸ್​ ಈಗ ಹೇಗಿದೆ? ಇಲ್ಲಿದೆ ನೋಡಿ
Image
World No-Tobacco Day: ವಿಶ್ವ ತಂಬಾಕು ರಹಿತ ದಿನ; ಧೂಮಪಾನ ತ್ಯಜಿಸಿದ ಬಾಲಿವುಡ್​ ತಾರೆಯರು ಇವರೇ ನೋಡಿ

ಈ ಪತ್ರ ಸಲೀಮ್ ಖಾನ್ ಭದ್ರತಾ ಸಿಬ್ಬಂದಿ ಅವರ ಗಮನಕ್ಕೆ ಬಂದಿದೆ. ಅವರು ಇದನ್ನು ತೆಗೆದು ಓದಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಪೊಲೀಸರು  ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್​ಐರ್​ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಬರೆದವರು ಯಾರು, ಯಾವ ಉದ್ದೇಶದಿಂದ ಈ ರೀತಿ ಬೆದರಿಕೆ ಒಡ್ಡಲಾಗಿದೆ ಎಂಬುದು ತನಿಖೆ ನಂತರ ತಿಳಿದು ಬರಬೇಕಿದೆ.

ಇದನ್ನೂ ಓದಿ:  ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್​ ಭದ್ರತೆ ಹೆಚ್ಚಳ

ಸಲೀಮ್ ಖಾನ್ ಬಾಲಿವುಡ್​ನಲ್ಲಿ ನಟ, ನಿರ್ಮಾಪಕ, ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್​ಗೆ ಬಾಲಿವುಡ್​ನಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ನೆಲೆ ಸಿಗಲು ಸಲೀಮ್ ಅವರ ಪಾತ್ರವೂ ದೊಡ್ಡದಿದೆ ಎಂದರೆ ತಪ್ಪಾಗಲಾರದು. ಈಗ ಸಲೀಮ್​ಗೆ ಕೊಲೆ ಬೆದರಿಕೆ ಬಂದಿರುವುದು ಸಲ್ಲು ಫ್ಯಾನ್ಸ್​​ಗೆ ಆತಂಕ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:10 pm, Sun, 5 June 22

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ