ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.  

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?
ಸಲ್ಮಾನ್ ಖಾನ್
Follow us
|

Updated on: Sep 20, 2024 | 3:10 PM

ನಟ ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದ್ದಾರೆ. ಅವರಿಗೆ ಬ್ಯಾಕ್ ಟು ಬ್ಯಾಕ್ ಪ್ರಾಣ ಬೆದರಿಕೆಗಳು ಬರುತ್ತಿವೆ. ಅವರ ತಂದೆ ಸಲೀಮ್ ಖಾನ್​ಗೂ ಜೀವ ಬೆದರಿಕೆ ಇದೆ. ಹೀಗಿರುವಾಗಲೇ ಸಲ್ಮಾನ್ ಖಾನ್ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಸುಳ್ಳು ಸುದ್ದಿ ಬರೆದ ಎಎನ್​ಐ ವಿರುದ್ಧ ಸಲ್ಲು ಕೇಸ್ ಹಾಕಿದ್ದಾರೆ. ಜೊತೆಗೆ ಕ್ಷಮಾಪಣೆ ಕೂಡ ಕೇಳಿ ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣದ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಎಎನ್​ಐ ವರದಿ ಏನು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.

ಇದನ್ನೂ ಓದಿ: ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ

ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ಮಾಡಿರುವ ಪ್ರಕರಣದ ಆರೋಪಿಗಳಾದ ವಿಕ್ಕಿ ಗುಪ್ತಾ, ಸಾಗರ್ ಪಾಲ್ ಪರ ವಕೀಲ ಅಮಿತ್ ಮಿಶ್ರಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ‘ಸಂತ್ರಸ್ತ (ಸಲ್ಮಾನ್ ಖಾನ್) ಗ್ಯಾಂಗ್​ಸ್ಟರ್ ಜೊತೆ ಸಂಬಂಧ ಹೊಂದಿದ್ದಾರೆ. ಆರೋಪಿಗಳು ಹತ್ಯೆ ಆಗಲಿ ಎಂದು ಸಲ್ಲು ಬಯಸುತ್ತಿದ್ದಾರೆ. ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಹಾಗೂ ಬಿಹಾರ ಸರ್ಕಾರದ ಬಳಿ ನಾವು ರಕ್ಷಣೆಗೆ ಮನವಿ ಮಾಡುತ್ತೇವೆ’ ಎಂದಿದ್ದರು. ಈ ವಿಡಿಯೋನ ಎಎನ್​ಐ ಹಂಚಿಕೊಂಡಿತ್ತು.

ಸಲ್ಮಾನ್ ಖಾನ್ ಹೇಳಿರೋದೇನು?

‘ಅಮಿತ್ ಮಿಶ್ರಾ ಮಾಡಿದ ಆರೋಪವನ್ನು ಸಲ್ಮಾನ್ ಖಾನ್ ಅವರು ಅಲ್ಲಗಳೆಯುತ್ತಿದ್ದಾರೆ. ಅದು ಸುಳ್ಳು. ಇದು ನಿಜಕ್ಕೂ ಡ್ಯಾಮೇಜಿಂಗ್ ಆಗಿದೆ’ ಎಂದು ಸಲ್ಮಾನ್ ಖಾನ್ ಪರ ವಕೀಲರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಎನ್​ಐ ಹಾಗೂ ಅಮಿತ್ ಮಿಶ್ರಾ 48 ಗಂಟೆಯಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಹೇಳಿದ್ದಾರೆ. ಅಮಿತ್ ಮಿಶ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ಡಿಲೀಟ್ ಮಾಡುವಂತೆ ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.