AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.  

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Sep 20, 2024 | 3:10 PM

Share

ನಟ ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದ್ದಾರೆ. ಅವರಿಗೆ ಬ್ಯಾಕ್ ಟು ಬ್ಯಾಕ್ ಪ್ರಾಣ ಬೆದರಿಕೆಗಳು ಬರುತ್ತಿವೆ. ಅವರ ತಂದೆ ಸಲೀಮ್ ಖಾನ್​ಗೂ ಜೀವ ಬೆದರಿಕೆ ಇದೆ. ಹೀಗಿರುವಾಗಲೇ ಸಲ್ಮಾನ್ ಖಾನ್ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಸುಳ್ಳು ಸುದ್ದಿ ಬರೆದ ಎಎನ್​ಐ ವಿರುದ್ಧ ಸಲ್ಲು ಕೇಸ್ ಹಾಕಿದ್ದಾರೆ. ಜೊತೆಗೆ ಕ್ಷಮಾಪಣೆ ಕೂಡ ಕೇಳಿ ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣದ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಎಎನ್​ಐ ವರದಿ ಏನು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.

ಇದನ್ನೂ ಓದಿ: ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ

ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ಮಾಡಿರುವ ಪ್ರಕರಣದ ಆರೋಪಿಗಳಾದ ವಿಕ್ಕಿ ಗುಪ್ತಾ, ಸಾಗರ್ ಪಾಲ್ ಪರ ವಕೀಲ ಅಮಿತ್ ಮಿಶ್ರಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ‘ಸಂತ್ರಸ್ತ (ಸಲ್ಮಾನ್ ಖಾನ್) ಗ್ಯಾಂಗ್​ಸ್ಟರ್ ಜೊತೆ ಸಂಬಂಧ ಹೊಂದಿದ್ದಾರೆ. ಆರೋಪಿಗಳು ಹತ್ಯೆ ಆಗಲಿ ಎಂದು ಸಲ್ಲು ಬಯಸುತ್ತಿದ್ದಾರೆ. ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಹಾಗೂ ಬಿಹಾರ ಸರ್ಕಾರದ ಬಳಿ ನಾವು ರಕ್ಷಣೆಗೆ ಮನವಿ ಮಾಡುತ್ತೇವೆ’ ಎಂದಿದ್ದರು. ಈ ವಿಡಿಯೋನ ಎಎನ್​ಐ ಹಂಚಿಕೊಂಡಿತ್ತು.

ಸಲ್ಮಾನ್ ಖಾನ್ ಹೇಳಿರೋದೇನು?

‘ಅಮಿತ್ ಮಿಶ್ರಾ ಮಾಡಿದ ಆರೋಪವನ್ನು ಸಲ್ಮಾನ್ ಖಾನ್ ಅವರು ಅಲ್ಲಗಳೆಯುತ್ತಿದ್ದಾರೆ. ಅದು ಸುಳ್ಳು. ಇದು ನಿಜಕ್ಕೂ ಡ್ಯಾಮೇಜಿಂಗ್ ಆಗಿದೆ’ ಎಂದು ಸಲ್ಮಾನ್ ಖಾನ್ ಪರ ವಕೀಲರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಎನ್​ಐ ಹಾಗೂ ಅಮಿತ್ ಮಿಶ್ರಾ 48 ಗಂಟೆಯಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಹೇಳಿದ್ದಾರೆ. ಅಮಿತ್ ಮಿಶ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ಡಿಲೀಟ್ ಮಾಡುವಂತೆ ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ