AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.  

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Sep 20, 2024 | 3:10 PM

Share

ನಟ ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದ್ದಾರೆ. ಅವರಿಗೆ ಬ್ಯಾಕ್ ಟು ಬ್ಯಾಕ್ ಪ್ರಾಣ ಬೆದರಿಕೆಗಳು ಬರುತ್ತಿವೆ. ಅವರ ತಂದೆ ಸಲೀಮ್ ಖಾನ್​ಗೂ ಜೀವ ಬೆದರಿಕೆ ಇದೆ. ಹೀಗಿರುವಾಗಲೇ ಸಲ್ಮಾನ್ ಖಾನ್ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಸುಳ್ಳು ಸುದ್ದಿ ಬರೆದ ಎಎನ್​ಐ ವಿರುದ್ಧ ಸಲ್ಲು ಕೇಸ್ ಹಾಕಿದ್ದಾರೆ. ಜೊತೆಗೆ ಕ್ಷಮಾಪಣೆ ಕೂಡ ಕೇಳಿ ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣದ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಎಎನ್​ಐ ವರದಿ ಏನು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.

ಇದನ್ನೂ ಓದಿ: ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ

ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ಮಾಡಿರುವ ಪ್ರಕರಣದ ಆರೋಪಿಗಳಾದ ವಿಕ್ಕಿ ಗುಪ್ತಾ, ಸಾಗರ್ ಪಾಲ್ ಪರ ವಕೀಲ ಅಮಿತ್ ಮಿಶ್ರಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ‘ಸಂತ್ರಸ್ತ (ಸಲ್ಮಾನ್ ಖಾನ್) ಗ್ಯಾಂಗ್​ಸ್ಟರ್ ಜೊತೆ ಸಂಬಂಧ ಹೊಂದಿದ್ದಾರೆ. ಆರೋಪಿಗಳು ಹತ್ಯೆ ಆಗಲಿ ಎಂದು ಸಲ್ಲು ಬಯಸುತ್ತಿದ್ದಾರೆ. ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಹಾಗೂ ಬಿಹಾರ ಸರ್ಕಾರದ ಬಳಿ ನಾವು ರಕ್ಷಣೆಗೆ ಮನವಿ ಮಾಡುತ್ತೇವೆ’ ಎಂದಿದ್ದರು. ಈ ವಿಡಿಯೋನ ಎಎನ್​ಐ ಹಂಚಿಕೊಂಡಿತ್ತು.

ಸಲ್ಮಾನ್ ಖಾನ್ ಹೇಳಿರೋದೇನು?

‘ಅಮಿತ್ ಮಿಶ್ರಾ ಮಾಡಿದ ಆರೋಪವನ್ನು ಸಲ್ಮಾನ್ ಖಾನ್ ಅವರು ಅಲ್ಲಗಳೆಯುತ್ತಿದ್ದಾರೆ. ಅದು ಸುಳ್ಳು. ಇದು ನಿಜಕ್ಕೂ ಡ್ಯಾಮೇಜಿಂಗ್ ಆಗಿದೆ’ ಎಂದು ಸಲ್ಮಾನ್ ಖಾನ್ ಪರ ವಕೀಲರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಎನ್​ಐ ಹಾಗೂ ಅಮಿತ್ ಮಿಶ್ರಾ 48 ಗಂಟೆಯಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಹೇಳಿದ್ದಾರೆ. ಅಮಿತ್ ಮಿಶ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ಡಿಲೀಟ್ ಮಾಡುವಂತೆ ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ