AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.  

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Sep 20, 2024 | 3:10 PM

Share

ನಟ ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದ್ದಾರೆ. ಅವರಿಗೆ ಬ್ಯಾಕ್ ಟು ಬ್ಯಾಕ್ ಪ್ರಾಣ ಬೆದರಿಕೆಗಳು ಬರುತ್ತಿವೆ. ಅವರ ತಂದೆ ಸಲೀಮ್ ಖಾನ್​ಗೂ ಜೀವ ಬೆದರಿಕೆ ಇದೆ. ಹೀಗಿರುವಾಗಲೇ ಸಲ್ಮಾನ್ ಖಾನ್ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಸುಳ್ಳು ಸುದ್ದಿ ಬರೆದ ಎಎನ್​ಐ ವಿರುದ್ಧ ಸಲ್ಲು ಕೇಸ್ ಹಾಕಿದ್ದಾರೆ. ಜೊತೆಗೆ ಕ್ಷಮಾಪಣೆ ಕೂಡ ಕೇಳಿ ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣದ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಎಎನ್​ಐ ವರದಿ ಏನು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.

ಇದನ್ನೂ ಓದಿ: ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ

ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ಮಾಡಿರುವ ಪ್ರಕರಣದ ಆರೋಪಿಗಳಾದ ವಿಕ್ಕಿ ಗುಪ್ತಾ, ಸಾಗರ್ ಪಾಲ್ ಪರ ವಕೀಲ ಅಮಿತ್ ಮಿಶ್ರಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ‘ಸಂತ್ರಸ್ತ (ಸಲ್ಮಾನ್ ಖಾನ್) ಗ್ಯಾಂಗ್​ಸ್ಟರ್ ಜೊತೆ ಸಂಬಂಧ ಹೊಂದಿದ್ದಾರೆ. ಆರೋಪಿಗಳು ಹತ್ಯೆ ಆಗಲಿ ಎಂದು ಸಲ್ಲು ಬಯಸುತ್ತಿದ್ದಾರೆ. ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಹಾಗೂ ಬಿಹಾರ ಸರ್ಕಾರದ ಬಳಿ ನಾವು ರಕ್ಷಣೆಗೆ ಮನವಿ ಮಾಡುತ್ತೇವೆ’ ಎಂದಿದ್ದರು. ಈ ವಿಡಿಯೋನ ಎಎನ್​ಐ ಹಂಚಿಕೊಂಡಿತ್ತು.

ಸಲ್ಮಾನ್ ಖಾನ್ ಹೇಳಿರೋದೇನು?

‘ಅಮಿತ್ ಮಿಶ್ರಾ ಮಾಡಿದ ಆರೋಪವನ್ನು ಸಲ್ಮಾನ್ ಖಾನ್ ಅವರು ಅಲ್ಲಗಳೆಯುತ್ತಿದ್ದಾರೆ. ಅದು ಸುಳ್ಳು. ಇದು ನಿಜಕ್ಕೂ ಡ್ಯಾಮೇಜಿಂಗ್ ಆಗಿದೆ’ ಎಂದು ಸಲ್ಮಾನ್ ಖಾನ್ ಪರ ವಕೀಲರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಎನ್​ಐ ಹಾಗೂ ಅಮಿತ್ ಮಿಶ್ರಾ 48 ಗಂಟೆಯಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಹೇಳಿದ್ದಾರೆ. ಅಮಿತ್ ಮಿಶ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ಡಿಲೀಟ್ ಮಾಡುವಂತೆ ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ