AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.  

ದಾವೂದ್​ ಲಿಂಕ್ ಬಳಸಿ ಇಬ್ಬರ ಹತ್ಯೆ ಮಾಡಲು ಪ್ಲ್ಯಾನ್ ಮಾಡಿದ್ರಾ ಸಲ್ಲು?
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Sep 20, 2024 | 3:10 PM

Share

ನಟ ಸಲ್ಮಾನ್ ಖಾನ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದ್ದಾರೆ. ಅವರಿಗೆ ಬ್ಯಾಕ್ ಟು ಬ್ಯಾಕ್ ಪ್ರಾಣ ಬೆದರಿಕೆಗಳು ಬರುತ್ತಿವೆ. ಅವರ ತಂದೆ ಸಲೀಮ್ ಖಾನ್​ಗೂ ಜೀವ ಬೆದರಿಕೆ ಇದೆ. ಹೀಗಿರುವಾಗಲೇ ಸಲ್ಮಾನ್ ಖಾನ್ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಸುಳ್ಳು ಸುದ್ದಿ ಬರೆದ ಎಎನ್​ಐ ವಿರುದ್ಧ ಸಲ್ಲು ಕೇಸ್ ಹಾಕಿದ್ದಾರೆ. ಜೊತೆಗೆ ಕ್ಷಮಾಪಣೆ ಕೂಡ ಕೇಳಿ ಎಂದು ಆಗ್ರಹಿಸಿದ್ದಾರೆ. ಈ ಪ್ರಕರಣದ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಎಎನ್​ಐ ವರದಿ ಏನು?

ಸಲ್ಮಾನ್ ಖಾನ್ ಅವರ ವಿರುದ್ಧ ಎಎನ್​ಐ ವರದಿ ಪ್ರಕಟ ಮಾಡಿತ್ತು. ಸಲ್ಮಾನ್ ಖಾನ್ ಅವರು ಡಿ- ಕಂಪನಿ (ದಾವೂದ್ ಕಂಪನಿ) ಜೊತೆ ಸಂಬಂಧ ಹೊಂದಿದ್ದು, ಮನೆಯ ಮೇಲೆ ಗುಂಡಿನ ದಾಳಿ ಮಾಡಿದ ಇಬ್ಬರಿಗೆ ದಾವೂದ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎನ್ನುವ ಆರೋಪ ಮಾಡಿತ್ತು.

ಇದನ್ನೂ ಓದಿ: ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ

ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ಮಾಡಿರುವ ಪ್ರಕರಣದ ಆರೋಪಿಗಳಾದ ವಿಕ್ಕಿ ಗುಪ್ತಾ, ಸಾಗರ್ ಪಾಲ್ ಪರ ವಕೀಲ ಅಮಿತ್ ಮಿಶ್ರಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದರು. ‘ಸಂತ್ರಸ್ತ (ಸಲ್ಮಾನ್ ಖಾನ್) ಗ್ಯಾಂಗ್​ಸ್ಟರ್ ಜೊತೆ ಸಂಬಂಧ ಹೊಂದಿದ್ದಾರೆ. ಆರೋಪಿಗಳು ಹತ್ಯೆ ಆಗಲಿ ಎಂದು ಸಲ್ಲು ಬಯಸುತ್ತಿದ್ದಾರೆ. ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಹಾಗೂ ಬಿಹಾರ ಸರ್ಕಾರದ ಬಳಿ ನಾವು ರಕ್ಷಣೆಗೆ ಮನವಿ ಮಾಡುತ್ತೇವೆ’ ಎಂದಿದ್ದರು. ಈ ವಿಡಿಯೋನ ಎಎನ್​ಐ ಹಂಚಿಕೊಂಡಿತ್ತು.

ಸಲ್ಮಾನ್ ಖಾನ್ ಹೇಳಿರೋದೇನು?

‘ಅಮಿತ್ ಮಿಶ್ರಾ ಮಾಡಿದ ಆರೋಪವನ್ನು ಸಲ್ಮಾನ್ ಖಾನ್ ಅವರು ಅಲ್ಲಗಳೆಯುತ್ತಿದ್ದಾರೆ. ಅದು ಸುಳ್ಳು. ಇದು ನಿಜಕ್ಕೂ ಡ್ಯಾಮೇಜಿಂಗ್ ಆಗಿದೆ’ ಎಂದು ಸಲ್ಮಾನ್ ಖಾನ್ ಪರ ವಕೀಲರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಎನ್​ಐ ಹಾಗೂ ಅಮಿತ್ ಮಿಶ್ರಾ 48 ಗಂಟೆಯಲ್ಲಿ ಕ್ಷಮೆ ಕೇಳಬೇಕು ಎಂದು ಅವರು ಹೇಳಿದ್ದಾರೆ. ಅಮಿತ್ ಮಿಶ್ರಾ ಅವರಿಗೆ ಸಂಬಂಧಿಸಿದ ವಿಡಿಯೋ ಡಿಲೀಟ್ ಮಾಡುವಂತೆ ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ