AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಾತ್ರವಲ್ಲ ಮುಂಬೈ ಜೈಲಿನ ಸ್ಥಿತಿಯೂ ಅದೇ; ಸಲ್ಲು ಕೇಸ್ ಆರೋಪಿಯ ಅಳಲು

ದರ್ಶನ್ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಹೋದಾಗ ಹಣ ನೀಡಿದರೆ ಮಾತ್ರ ವ್ಯವಸ್ಥೆಗಳು ಸಿಗುತ್ತವೆ ಎನ್ನುವ ವಿಚಾರ ಗೊತ್ತಾಗಿತ್ತು. ಜೈಲುಗಳನ್ನು ರೆಸಾರ್ಟ್ ಮಾದರಿಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಕೂಡ ಹೇಳಲಾಗಿತ್ತು. ಇದು ಕೇವಲ ಬೆಂಗಳೂರು ಜೈಲಿನ ಸ್ಥಿತಿ ಮಾತ್ರವಲ್ಲ ಅನ್ನೋದು ಗೊತ್ತಾಗಿದೆ.

ಬೆಂಗಳೂರಲ್ಲಿ ಮಾತ್ರವಲ್ಲ ಮುಂಬೈ ಜೈಲಿನ ಸ್ಥಿತಿಯೂ ಅದೇ; ಸಲ್ಲು ಕೇಸ್ ಆರೋಪಿಯ ಅಳಲು
ಬೆಂಗಳೂರಲ್ಲಿ ಮಾತ್ರವಲ್ಲ ಮುಂಬೈ ಜೈಲಿನ ಸ್ಥಿತಿಯೂ ಅದೇ; ಸಲ್ಲು ಕೇಸ್ ಆರೋಪಿಯ ಅಳಲು
ರಾಜೇಶ್ ದುಗ್ಗುಮನೆ
|

Updated on: Sep 19, 2024 | 7:23 AM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿ ಅನೇಕರನ್ನು ಬಂಧಿಸಲಾಗಿತ್ತು. ಅವರನ್ನು ಸದ್ಯ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದ್ದು, ಮುಂಬೈನ ತಾಲೋಜಾ ಜೈಲಿನಲ್ಲಿ ಇರಿಸಲಾಗಿದೆ. ಈಗ ಈ ಪ್ರಕರಣದಲ್ಲಿ ಆರೋಪಿಯಲ್ಲಿ ಒಬ್ಬನಾದ ಹರ್ಪಾಲ್ ಸಿಂಗ್​ ಕೈ ಬೆರಳಿಗೆ ಪೆಟ್ಟಾಗಿದೆ. ಇದಕ್ಕೆ ಟ್ರೀಟ್​ಮೆಂಟ್ ನೀಡಲು ವೈದ್ಯರು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಎಂದು ಆತ ಆರೋಪಿಸಿದ್ದಾನೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಹಣ ನೀಡಿದರೆ ಮಾತ್ರ ವ್ಯವಸ್ಥೆಗಳು ಸಿಗುತ್ತವೆ ಎನ್ನುವ ಆರೋಪ ಇತ್ತು. ಜೈಲುಗಳನ್ನು ರೆಸಾರ್ಟ್ ಮಾದರಿಯಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಹೇಳಲಾಗಿತ್ತು. ಇದು ಕೇವಲ ಬೆಂಗಳೂರು ಜೈಲಿನ ಸ್ಥಿತಿ ಮಾತ್ರವಲ್ಲ ಅನ್ನೋದು ಗೊತ್ತಾಗಿದೆ. ಹರ್ಪಾಲ್ ಸಿಂಗ್​ನ ಇತ್ತೀಚೆಗೆ ಜಡ್ಜ್​ ಎದುರು ಹಾಜರುಪಡಿಸಲಾಗಿತ್ತು. ಆಗ ಆತ ಈ ಆರೋಪ ಮಾಡಿದ್ದಾನೆ.

ಈ ಬೆನ್ನಲ್ಲೇ ಕೋರ್ಟ್​ ತಾಲೋಜಾ ಜೈಲಿನ ಮುಖ್ಯ ಆರೋಗ್ಯಾಧಿಕಾರಿಗಳಿಗೆ ವರದಿ ನೀಡುವಂತೆ ಕೇಳಿದೆ. ಜೊತೆಗೆ ಸೂಕ್ತ ಚಿಕಿತ್ಸೆ ನೀಡಲು ನಿರ್ದೇಶಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆದಿವೆ. ‘ಇದು ಕೇವಲ ಬೆಂಗಳೂರು ಜೈಲಿನ ದುಸ್ಥಿತಿ ಅಲ್ಲ’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣದಲ್ಲಿ ಬಂಧಿತನಾದ ಮತ್ತೋರ್ವ ಆರೋಪಿ ಮೊಹಮದ್ ಚೌಧರಿ ಕೂಡ ಇದೇ ರೀತಿಯ ಆರೋಪ ಮಾಡಿದ್ದಾನೆ. ಆತನ ಬಲಗಾಲಿಗೆ ಇನ್​ಫೆಕ್ಷನ್ ಆಗಿದೆ ಎಂದು ಕೋರ್ಟ್ ಮುಂದೆ ಅಲವತ್ತುಕೊಂಡಿದ್ದಾನೆ. ಆತನಿಗೂ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ಕೊಡಲಾಗಿದೆ.

ಇದನ್ನೂ ಓದಿ: ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ

ಸಲ್ಮಾನ್ ಖಾನ್ ಇದ್ದ ಬಾಂದ್ರಾದ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್ ಮೇಲೆ ಏಪ್ರಿಲ್ 14ರಂದು ದಾಳಿ ನಡೆದಿತ್ತು. ಬೈಕ್​ನಲ್ಲಿ ಬಂದ ಕೆಲವರು ಗುಂಡಿನ ದಾಳಿ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂಧಿಸಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಪ್ರಕರಣದ ಹಿಂದೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ