AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಲು ಮನೆ ಮೇಲೆ ಗುಂಡು ಹಾರಿಸಿದವರು ಗುಜರಾತ್​ನಲ್ಲಿ ಅರೆಸ್ಟ್; ಎರಡು ತಿಂಗಳ ಹಿಂದೆ ನಡೆದಿತ್ತು ಪ್ಲ್ಯಾನ್

ಏಪ್ರಿಲ್ 14ರಂದು ಮುಂಜಾನೆ 5 ಗಂಟೆ ಸುಮಾರಿಗೆ ಬೈಕ್​ನಲ್ಲಿ ಬಂದ ಇಬ್ಬರು ಆಘಂತುಕರು ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಅಪಾರ್ಟ್​ಮೇಲೆ ಗುಂಡು ಹಾರಿಸಿದ್ದರು. ಗುಂಡಿನ ದಾಳಿ ಬಳಿಕ ಎಲ್ಲರೂ ಬೆಚ್ಚಿ ಬಿದ್ದಿದ್ದರು. ಈಗ ಆಘಂತುಕರ ಬಂಧನ ಆಗಿದೆ.

ಸಲ್ಲು ಮನೆ ಮೇಲೆ ಗುಂಡು ಹಾರಿಸಿದವರು ಗುಜರಾತ್​ನಲ್ಲಿ ಅರೆಸ್ಟ್; ಎರಡು ತಿಂಗಳ ಹಿಂದೆ ನಡೆದಿತ್ತು ಪ್ಲ್ಯಾನ್
ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Apr 16, 2024 | 7:02 AM

Share

ಸಲ್ಮಾನ್ ಖಾನ್ (Salman Khan) ಮನೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಮುಂಬೈ ಕ್ರೈಮ್ ಬ್ರ್ಯಾಂಚ್​ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗುಜರಾತ್​ನ ಭುಜ್​ನಲ್ಲಿ ಸೋಮವಾರ ರಾತ್ರಿ (ಏಪ್ರಿಲ್ 15) ಈ ಬಂಧನ ನಡೆದಿದೆ. ಅವರ ವಿಚಾರಣೆ ಬಳಿಕ ಹೆಚ್ಚಿನ ಮಾಹಿತಿ ರಿವೀಲ್ ಆಗಬೇಕಿದೆ. ಲಾರೆನ್ಸ್ ಗ್ಯಾಂಗ್ ಈ ಪ್ರಕರಣದ ಹೊಣೆ ಹೊತ್ತಿತ್ತು.

ಏಪ್ರಿಲ್ 14ರಂದು ಮುಂಜಾನೆ 5 ಗಂಟೆ ಸುಮಾರಿಗೆ ಬೈಕ್​ನಲ್ಲಿ ಬಂದ ಇಬ್ಬರು ಆಘಂತುಕರು ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಅಪಾರ್ಟ್​ಮೇಲೆ ಗುಂಡು ಹಾರಿಸಿದ್ದರು. ಗುಂಡಿನ ದಾಳಿ ಬಳಿಕ ಎಲ್ಲರೂ ಬೆಚ್ಚಿ ಬಿದ್ದಿದ್ದರು. ಸಲ್ಮಾನ್​ಗೆ ಈಗಾಗಲೇ ಪ್ರಾಣ ಭಯ ಇದೆ. ಹೀಗಿರುವಾಗ ಈ ಗುಂಡಿನ ದಾಳಿ ನಡೆದಿದ್ದು ಆತಂಕ ಹೆಚ್ಚಿಸಿತ್ತು. ಈಗ ಇಬ್ಬರ ಬಂಧ ಆಗಿರುವುದು ಅಭಿಮಾನಿಗಳು ಕೊಂಚ ನಿರಾಳ ಆಗಿದ್ದಾರೆ.

ಸಲ್ಮಾನ್ ಖಾನ್ ಮನೆಯ ಮೇಲೆ ದಾಳಿ ಮಾಡುವಾಗ ಇಬ್ಬರೂ ಬೈಕ್​ನಲ್ಲಿ ಬಂದಿದ್ದರು. ಆ ಬಳಿಕ ಅವರು ಹೈವೇ ಸೇರಿದ್ದರು. ನೇರವಾಗಿ ಅವರು ಮುಂಬೈ ಬಿಟ್ಟು ಹೊರ ಹೋಗಿದ್ದರು. ಈಗ ಗುಜರಾತ್​ನಲ್ಲಿ ಬಂಧನ ಆಗಿದೆ. ಇವರ ಹಿಂದೆ ಯಾರಿದ್ದಾರೆ ಎನ್ನುವ ವಿಚಾರ ವಿಚಾರಣೆ ಬಳಿಕ ಸ್ಪಷ್ಟವಾಗಬೇಕಿದೆ.

ಇಬ್ಬರೂ ಆರೋಪಿಗಳು ನವಿ ಮುಂಬೈನ ಪನ್ವೇಲ್ ಭಾಗದಲ್ಲಿ ಎರಡು ತಿಂಗಳ ಹಿಂದೆ ಮನೆ ಬಾಡಿಗೆ ಪಡೆದಿದ್ದರು ಎನ್ನಲಾಗಿದೆ. ಇದೇ ಭಾಗದಲ್ಲಿ ಸಲ್ಮಾನ್ ಖಾನ್ ಅವರ ಮನೆ ಇದೆ. ಸಲ್ಲು ಅವರ ಚಲನವಲನ ಗಮನಿಸಲು ಅವರು ಮುಂಬೈಗೆ ಆಗಮಿಸಿದ್ದರು. ಎರಡು ತಿಂಗಳಿಂದ ಪ್ಲ್ಯಾನ್ ಮಾಡುತ್ತಿದ್ದರು ಎಂದು ವರದಿ ಆಗಿದೆ. ಏಪ್ರಿಲ್ 14ರಂದು ಇವರು ನಾಲ್ಕು ಸುತ್ತು ಗುಂಡು ಹಾರಿಸಿದ್ದರು. ಬೆಳಗಿನ ಜಾವ ಆಗಿದ್ದರಿಂದ ಯಾರಿಗೂ ಏನೂ ತೊಂದರೆ ಆಗಿಲ್ಲ.

ಇದನ್ನೂ ಓದಿ: ಗುಂಡಿನ ದಾಳಿ ಬಳಿಕ ಮೊದಲ ಬಾರಿ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್​; ಹೇಳಿಕೆ ಬಿಡುಗಡೆ

ಗುಂಡಿನ ದಾಳಿ ಬಳಿಕ ಸಲ್ಲು ಮನೆಯಲ್ಲೇ ಇದ್ದರು. ಸೋಮವಾರ (ಏಪ್ರಿಲ್ 15) ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ನೀಡಲಾದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಸದ್ಯ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. 2025ರ ಈದ್​ಗೆ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು