AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಜಂಗುಳಿ ನಡುವೆಯೂ ರಣವೀರ್​ ಸಿಂಗ್​ಗೆ ಪ್ರೀತಿಯ ಅಪ್ಪುಗೆ ನೀಡಿದ ಸಲ್ಮಾನ್​ ಖಾನ್​; ವಿಡಿಯೋ ವೈರಲ್​

ಬುಧವಾರ (ಆಗಸ್ಟ್​ 16) ರಾತ್ರಿ ಎ.ಪಿ. ದಿಲೋನ್​ ಅವರ ಡಾಕ್ಯುಸೀರಿಸ್​ ‘ಎ.ಪಿ. ದಿಲೋನ್​: ಫಸ್ಟ್​ ಆಫ್​ ಎ ಕೈಂಡ್​’ ಪ್ರೀಮಿಯರ್​ ಆಯಿತು. ಅದಕ್ಕೆ ಸಲ್ಮಾನ್​ ಖಾನ್​ ಅವರು ಅತಿಥಿಯಾಗಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ತೆರಳುವಾಗ ಅವರು ರಣವೀರ್​ ಸಿಂಗ್​ ಮತ್ತು ಎ.ಪಿ. ದಿಲೋನ್​ಗೆ ಪ್ರೀತಿಯ ಅಪ್ಪುಗೆ ನೀಡಿದ್ದಾರೆ.

ಜನ ಜಂಗುಳಿ ನಡುವೆಯೂ ರಣವೀರ್​ ಸಿಂಗ್​ಗೆ ಪ್ರೀತಿಯ ಅಪ್ಪುಗೆ ನೀಡಿದ ಸಲ್ಮಾನ್​ ಖಾನ್​; ವಿಡಿಯೋ ವೈರಲ್​
ರಣವೀರ್​ ಸಿಂಗ್​, ಸಲ್ಮಾನ್​ ಖಾನ್​, ಎ.ಪಿ. ದಿಲೋನ್​
ಮದನ್​ ಕುಮಾರ್​
|

Updated on: Aug 17, 2023 | 10:56 AM

Share

ಬಾಲಿವುಡ್​ನ ಖ್ಯಾತ ನಟ ಸಲ್ಮಾನ್​ ಖಾನ್​ (Salman Khan) ಅವರು ಕೆಲವೊಮ್ಮೆ ಸಿಟ್ಟು ಪ್ರದರ್ಶಿಸುತ್ತಾರೆ. ಅವರು ಕೋಪ ಮಾಡಿಕೊಂಡಾಗ ಯಾರೂ ಹತ್ತಿರಕ್ಕೆ ಸುಳಿಯುವುದಿಲ್ಲ. ಹಾಗಂತ ಅದು ಅವರ ಪೂರ್ಣ ವ್ಯಕ್ತಿತ್ವ ಅಲ್ಲ. ಬಹುತೇಕ ಸಂದರ್ಭಗಳಲ್ಲಿ ಸಲ್ಮಾನ್​ ಖಾನ್​ ಅವರು ಕೂಲ್​ ಆಗಿ ಇರುತ್ತಾರೆ. ತಮ್ಮ ಪ್ರೀತಿ ಪಾತ್ರರಿಗಾಗಿ ಸಮಯ ನೀಡುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂಬಂತೆ ಈಗೊಂದು ವಿಡಿಯೋ ವೈರಲ್​ ಆಗಿದೆ. ನಟ ರಣವೀರ್​ ಸಿಂಗ್ (Ranveer Singh)​ ಅವರನ್ನು ಸಲ್ಮಾನ್​ ಖಾನ್​ ಪ್ರೀತಿಯಿಂದ ತಬ್ಬಿಕೊಂಡಿದ್ದಾರೆ. ಅಲ್ಲದೇ ರ‍್ಯಾಪರ್​ ಎ.ಪಿ. ದಿಲೋನ್​ಗೂ ಸಿಹಿಯಾದ ಅಪ್ಪುಗೆ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ (Salman Khan Viral Video) ಆಗಿರುವ ಈ ವಿಡಿಯೋ ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಸಲ್ಮಾನ್​ ಖಾನ್​ ಅವರು ಇದ್ದಲ್ಲಿ ಜನಜಂಗುಳಿ ಇದ್ದೇ ಇರುತ್ತದೆ. ಅವರನ್ನು ನೋಡಲು ಅಭಿಮಾನಿಗಳು ಮುತ್ತಿಗೆ ಹಾಕಿಕೊಳ್ಳುತ್ತಾರೆ. ಒಂದೇ ಒಂದು ಸೆಲ್ಫಿ ಸಿಕ್ಕರೂ ಸಾಕು ಎಂದು ಜನರು ಹಪಹಪಿಸುತ್ತಾರೆ. ಅಂಥ ಸಂದರ್ಭದಲ್ಲಿ ಸಲ್ಲುಗೆ ಕಿರಿಕಿರಿ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಬುಧವಾರ (ಆಗಸ್ಟ್​ 16) ರಾತ್ರಿ ಎ.ಪಿ. ದಿಲೋನ್​ ಅವರ ಡಾಕ್ಯುಸೀರಿಸ್​ ‘ಎ.ಪಿ. ದಿಲೋನ್​: ಫಸ್ಟ್​ ಆಫ್​ ಎ ಕೈಂಡ್​’ ಪ್ರೀಮಿಯರ್​ ಆಯಿತು. ಅದಕ್ಕೆ ಸಲ್ಮಾನ್​ ಖಾನ್​ ಅವರು ಅತಿಥಿಯಾಗಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ತೆರಳುವಾಗ ಅವರು ರಣವೀರ್​ ಸಿಂಗ್​ ಮತ್ತು ಎ.ಪಿ. ದಿಲೋನ್​ಗೆ ಪ್ರೀತಿಯ ಅಪ್ಪುಗೆ ನೀಡಿದ್ದಾರೆ.

ಇದನ್ನೂ ಓದಿ: Salman Khan: ಅತಿಯಾದ ಕೋಪದ ಕಾರಣಕ್ಕೆ ಬಿಗ್​ ಬಾಸ್​ ನಿರೂಪಣೆಯಿಂದ ಹೊರನಡೆದ್ರಾ ಸಲ್ಮಾನ್​ ಖಾನ್​?

ಪಂಜಾಬ್​ನ ಸಣ್ಣ ಹಳ್ಳಿಯಿಂದ ಬಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಹ ರ‍್ಯಾಪರ್​ ಆಗಿ ಬೆಳೆದ ಎ.ಪಿ. ದಿಲೋನ್​ ಅವರ ಜೀವನದ ಘಟನೆಗಳನ್ನು ಇಟ್ಟುಕೊಂಡು ಡಾಕ್ಯುಸೀರೀಸ್​ ಮಾಡಲಾಗಿದೆ. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಇದು ಆಗಸ್ಟ್​ 18ರಿಂದ ಸ್ಟ್ರೀಮಿಂಗ್​ ಆರಂಭಿಸಲಿದೆ. ಅವರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಲ್ಮಾನ್​ ಖಾನ್​ ಅವರು ಪ್ರೀಮಿಯರ್​ ಶೋಗೆ ಬಂದಿದ್ದರು. ಅವರಿಂದ ಬೆಂಬಲ ಸಿಕ್ಕಿದ್ದರೆ ಎ.ಪಿ. ದಿಲೋನ್​ ಖುಷಿ ಆಗಿದ್ದಾರೆ.

ಸಲ್ಮಾನ್​ ಖಾನ್​ ವೈರಲ್ ವಿಡಿಯೋ:

ಸಲ್ಮಾನ್​ ಖಾನ್​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆಯ ಹೀರೋ. ಈಗ ಅವರು ‘ಟೈಗರ್​ 3’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅದರಲ್ಲಿ ಶಾರುಖ್​ ಖಾನ್​ ಅವರು ಅತಿಥಿ ಪಾತ್ರ ಮಾಡುತ್ತಾರೆ ಎನ್ನಲಾಗುತ್ತಿದೆ. ಆ ಕಾರಣದಿಂದ ‘ಟೈಗರ್​ 3’ ಬಗ್ಗೆ ನಿರೀಕ್ಷೆ ಮೂಡಿದೆ. ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ನಟಿಸುತ್ತಿದ್ದಾರೆ. ಮನೀಶ್​ ಶರ್ಮಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ಈ ವರ್ಷ ದೀಪಾವಳಿಗೆ ರಿಲೀಸ್​ ಆಗಲಿದೆ. ‘ಯಶ್ ರಾಜ್​ ಫಿಲ್ಮ್ಸ್​’ ಬ್ಯಾನರ್​ ಮೂಲಕ ಆದಿತ್ಯ ಚೋಪ್ರಾ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ